ಬಿಬಿಎಂಪಿ | 225 ವಾರ್ಡ್‌ ವಿಂಗಡಣೆಗೆ ಮೂರು ಸಾವಿರಕ್ಕೂ ಹೆಚ್ಚು ಆಕ್ಷೇಪಣೆ ಸಲ್ಲಿಕೆ

Date:

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ 225 ವಾರ್ಡ್‌ಗಳನ್ನು ರಚಿಸಿ ಸರ್ಕಾರ ಕರಡು ಅಧಿಸೂಚನೆ ಹೊರಡಿಸಿತ್ತು. ಇದಕ್ಕೆ ಸಾರ್ವಜನಿಕರಿಂದ ಆಕ್ಷೇಪಣೆ ಸಲ್ಲಿಕೆಗೆ 15 ದಿನ ಕಾಲಾವಕಾಶ ನೀಡಿತ್ತು. ಇದೀಗ ಮೂರು ಸಾವಿರಕ್ಕೂ ಹೆಚ್ಚು ಆಕ್ಷೇಪಣೆ ಹಾಗೂ ಸಲಹೆಗಳು ನಗರಾಭಿವೃದ್ಧಿ ಇಲಾಖೆಗೆ ಸಲ್ಲಿಕೆಯಾಗಿವೆ.

ಬಿಬಿಎಂಪಿಯ 243 ವಾರ್ಡ್‌ಗಳಿಂದ 225ಕ್ಕೆ ವಾರ್ಡ್‌ಗಳ ಸಂಖ್ಯೆಯನ್ನು ಸರ್ಕಾರ ಇಳಿಕೆ ಮಾಡಿತ್ತು. ಆ.18 ರಂದು ವಾರ್ಡ್‌ಗಳ ಗಡಿ ಗುರುತು ಮಾಡಿ ಅಧಿಸೂಚನೆ ಹೊರಡಿಸಿತ್ತು. ಸಾರ್ವಜನಿಕರಿಗೆ ಆಕ್ಷೇಪಣೆ ಸಲ್ಲಿಸಲು ಸೆ.1 ರವರೆಗೆ ಅವಕಾಶ ನೀಡಲಾಗಿತ್ತು.  

ಅಂಚೆ ಮೂಲಕ ಮಾತ್ರವೇ ಆಕ್ಷೇಪಣೆಗಳನ್ನು ಸಲ್ಲಿಕೆ ಮಾಡಲು ಸರ್ಕಾರ ನಿಯಮ ವಿಧಿಸಿತ್ತು. ಇದಕ್ಕೆ ಹಲವರು ಆನ್‌ಲೈನ್ ಮುಖಾಂತರ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡುವಂತೆ ಒತ್ತಾಯಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೀಗ ಮೂರು ಸಾವಿರಕ್ಕೂ ಹೆಚ್ಚು ಆಕ್ಷೇಪಣೆ ಹಾಗೂ ಸಲಹೆಗಳು ಬಂದಿದ್ದು, ಅದರಲ್ಲಿ ಗಡಿ, ವಾರ್ಡ್‌ಗಳ ಹೆಸರು, ಪ್ರದೇಶದ ಹೆಸರು ನಮೂದಾಗದಿರುವುದು ಪ್ರಮುಖ ಆಕ್ಷೇಪಣೆಯಾಗಿದೆ. ಗಡಿಗಳನ್ನು ಒಂದು ವಿಧಾನಸಭಾ ಕ್ಷೇತ್ರದೊಳಗೆ ಸೇರಿಸುವಂತೆ ಕೇಳಲಾಗಿದೆ.

“ಶುಕ್ರವಾರ ಸಾಯಂಕಾಲದವರೆಗೂ ಅಂಚೆ ಮೂಲಕ ಬಂದ ಆಕ್ಷೇಪಣೆಗಳನ್ನೂ ಸ್ವೀಕರಿಸಲಾಗಿದೆ. ಎಲ್ಲವನ್ನೂ ಒಟ್ಟುಗೂಡಿಸಿ, ವಿಷಯವಾರು ವರ್ಗಾವಣೆ ಮಾಡಲಾಗುತ್ತದೆ. ಎಲ್ಲ ಆಕ್ಷೇಪಣೆಗಳನ್ನೂ ಪರಿಶೀಲನೆ ಮಾಡಿ ಇನ್ನೊಂದು ವಾರದಲ್ಲಿ ವಾರ್ಡ್‌ಗಳ ಅಂತಿಮ ಅಧಿಸೂಚನೆ ಹೊರಬೀಳಲಿದೆ” ಎಂದು ನಗರಾಭಿವೃದ್ಧಿ ಇಲಾಖೆಯ ಅಧಿಕಾರಿಗಳು ಹೇಳಿದರು.

ಸರ್ಕಾರ ಈ ಆಕ್ಷೇಪಣೆಗೆ ನೀಡಿದ ಅವಧಿ ವಿಸ್ತರಿಸುವ ಸಾಧ್ಯತೆ ಕಡಿಮೆಯಿದೆ ಎನ್ನಲಾಗಿದೆ. ಏಕೆಂದರೆ, ಹೈಕೋರ್ಟ್ ಸರ್ಕಾರಕ್ಕೆ 12 ವಾರಗಳ ಕಾಲಾವಕಾಶ ನೀಡಿದ್ದರಿಂದ ಸೆಪ್ಟೆಂಬರ್ 18 ರೊಳಗೆ ವಾರ್ಡ್ ಗಡಿಯನ್ನು ಗುರುತಿಸುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕಿದೆ. ಡಿಸೆಂಬರ್‌ನಲ್ಲಿ ಬಿಬಿಎಂಪಿ ಚುನಾವಣೆ ನಡೆಸಲು ಸರ್ಕಾರ ಮುಂದಾಗಿದೆ.

ಈ ಸುದ್ದಿ ಓದಿದ್ದೀರಾ? ಭಾರತ ಎಂದಿಗೂ ಹಿಂದೂ ರಾಷ್ಟ್ರವಾಗಿರಲಿಲ್ಲ: ಭಾಗವತ್‌ ಟೀಕಿಸಿದ ಸ್ವಾಮಿ ಪ್ರಸಾದ್ ಮೌರ್ಯ

ಬಿಬಿಎಂಪಿ ವೆಬ್‌ಸೈಟ್‌ನಲ್ಲಿ ಅಸ್ತಿತ್ವದಲ್ಲಿರುವ ಮತ್ತು ವಿಂಗಡಣೆಯಾದ ವಾರ್ಡ್, ವಾರ್ಡ್ ವಿಸ್ತೀರ್ಣ, ಜನಸಂಖ್ಯೆ, ವಿಧಾನಸಭೆ ಮತ್ತು ಸಂಸದೀಯ ಕ್ಷೇತ್ರದ ವಿವರಗಳನ್ನು ನೀಡುವ ನಕ್ಷೆಯನ್ನು ಅಪ್‌ಲೋಡ್ ಮಾಡಿದೆ.

ಈ ಹಿಂದಿನ ಬಿಜೆಪಿ ಸರ್ಕಾರ 198 ಇದ್ದ ವಾರ್ಡ್‌ ಸಂಖ್ಯೆಯನ್ನು 243ಕ್ಕೆ ಏರಿಕೆ ಮಾಡಿತ್ತು. ಆಗ ವಾರ್ಡ್ ವಿಂಗಡಣೆಯಲ್ಲಿನ ಲೋಪದೋಷಗಳನ್ನು ಉಲ್ಲೇಖಿಸಿ, ಕಾಂಗ್ರೆಸ್‌ ಸರ್ಕಾರವು ಹೈಕೋರ್ಟ್‌ನಲ್ಲಿ ಕಾಲಾವಕಾಶ ಕೋರಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...