ಬಿಬಿಎಂಪಿ | ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆ

Date:

ಕಳೆದ ಹಲವು ದಿನಗಳಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಪಾದಚಾರಿ ಮಾರ್ಗ ಒತ್ತುವರಿ ತೆರುವು ಕಾರ್ಯಾಚರಣೆ ನಡೆಸುತ್ತಿದ್ದು, ಶನಿವಾರವೂ ಈ ಕಾರ್ಯಾಚರಣೆ ಮುಂದುವರೆದಿದೆ.

ಪೂರ್ವ ವಲಯ

ಪೂರ್ವ ವಲಯದ ಇಂದಿರಾನಗರ 100 ಅಡಿ ರಸ್ತೆ ಮತ್ತು ಸಿ.ಎಂ.ಹೆಚ್ ರಸ್ತೆಯಲ್ಲಿ ಯೋಜನಾ ವಿಭಾಗದಿಂದ ಕೈಗೊಂಡಿರುವ ವೈಟ್ ಟಾಪಿಂಗ್ ರಸ್ತೆಯ ಪಾದಚಾರಿ ಮಾರ್ಗಗಳಲ್ಲಿ ಮಾಡಿಕೊಂಡಿದ್ದ ಒತ್ತುವರಿಯನ್ನು ತೆರವುಗೊಳಿಸಿ ಇನ್ನು ಮುಂದೆ ಒತ್ತುವರಿ ಮಾಡಿಕೊಳ್ಳದಂತೆ ಬೀದಿಬದಿ ವ್ಯಾಪಾರಸ್ಥರಿಗೆ ಪಾಲಿಕೆ ಎಚ್ಚರಿಕೆ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶನಿವಾರ ನಡೆಸಿದ ತಪಾಸಣೆಯಲ್ಲಿ ಇಂದಿರಾನಗರ 100 ಅಡಿ ರಸ್ತೆ ಮತ್ತು ಸಿ.ಎಂ.ಹೆಚ್ ರಸ್ತೆಗಳ ಪಾದಚಾರಿ ಮಾರ್ಗದಲ್ಲಿ ಅಳವಡಿಸಿದ್ದ ತಾತ್ಕಾಲಿಕ ನಾಮಫಲಕಗಳು, ಅಂಗಡಿಗಳನ್ನು ತೆರವುಗೊಳಿಸಿ ಇನ್ನುಮುಂದೆ ಪಾದಚಾರಿ ಮಾರ್ಗ ಒತ್ತುವರಿ ಮಾಡದಂತೆ ಸೂಚನೆ ನೀಡಲಾಗಿದೆ.

ಇನ್ನು ಕೆಲವೆಡೆ ಹೋಟೆಲ್, ಕಾರ್ ಶೋರೂಮ್ ಮುಂಭಾಗ ಪಾದಚಾರಿ ಮಾರ್ಗಕ್ಕೆ ಹೊಂದಿಕೊಂಡಂತೆ ಕಾಂಕ್ರಿಂಟ್ ರ‍್ಯಾಂಪ್ ಅನ್ನು ನಿರ್ಮಿಸಿದ್ದು, ಅದನ್ನು ಸ್ಥಳದಲ್ಲೇ ಜೆಸಿಬಿಯ ಮೂಲಕ ತೆರವುಗೊಳಿಸಲಾಗಿದೆ. ಅದಲ್ಲದೆ ಆಸ್ಪತ್ರೆಯ ಮುಂಭಾಗ ಸ್ಟೀಲ್ ರ‍್ಯಾಂಪ್ ಅಳವಡಿಸಿದ್ದು, ಅದನ್ನು ಅವಶ್ಯಕತೆಯಿರುವಾಗ ಮಾತ್ರ ಅಳವಡಿಸಿಕೊಳ್ಳಲು ಸೂಚನೆ ನೀಡಿದೆ.

ಕಲ್ಟ್ ಫಿಟ್ ಬಳಿ ಶಾಶ್ವತ ನಾಮಫಲಕ ಅಳವಡಿಸಿದ್ದು, ಅದನ್ನು ಸ್ಥಳದಲ್ಲೇ ತೆರವುಗೊಳಿಸಲಾಗಿದೆ. ಇನ್ನು ಬಹುತೇಕ ಕಡೆ ಪಾದಚಾರಿ ಮಾರ್ಗಗಳಲ್ಲಿ ದ್ವಿಚಕ್ರ ವಾಹನಗಳನ್ನು ನಿಲ್ಲಿಸಿದ್ದು, ಇನ್ನು ಮುಂದೆ ಪಾದಚಾರಿ ಮಾರ್ಗಗಳಲ್ಲಿ ಯಾವುದೇ ವಾಹನಗಳನ್ನು ನಿಲುಗಡೆ ಮಾಡದಂತೆ ನೋಡಿಕೊಳ್ಳಲು ಮಳಿಗೆಗಳ ಸಿಬ್ಬಂದಿಗೆ ಎಚ್ಚರಿಕೆ ನೀಡಿದೆ.

ತೆರವು ಕಾರ್ಯಾಚರಣೆಯ ವೇಳೆ ಯೋಜನಾ ವಿಭಾಗದ ಮುಖ್ಯ ಅಭಿಯಂತರರಾದ ಲೋಕೇಶ್, ಅಧೀಕ್ಷಕ ಅಭಿಯಂತರರಾದ ಹೇಮಲತಾ ಸೇರಿದಂತೆ ಇನ್ನಿತರರು ಇದ್ದರು.

ದಕ್ಷಿಣ ವಲಯ

ದಕ್ಷಿಣ ವಲಯ ವ್ಯಾಪ್ತಿಯಲ್ಲಿ ಚಿಕ್ಕಪೇಟೆಯ ಸಿದ್ದಯ್ಯ ರಸ್ತೆ ಪಾದಚಾರಿ ಮಾರ್ಗದಲ್ಲಿ ಅನುಪಯುಕ್ತ ವಸ್ತುಗಳನ್ನು ಆಯಾ ಮಳಿಗೆಗಳ ಮುಂಭಾಗ ಹಾಕಲಾಗಿದ್ದು, ಇದರಿಂದ ಪಾದಚಾರಿಗಳ ಓಡಾಟಕ್ಕೆ ಸಾಕಷ್ಟು ಸಮಸ್ಯೆ ಆಗುತ್ತಿದೆ. ಈ ಪೈಕಿ ಕೂಡಲೆ ಎಲ್ಲ ಅನುಪಯುಕ್ತ ವಸ್ತುಗಳನ್ನು ತೆರವುಗೊಳಿಸಿ ಪಾದಚಾರಿಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ಮುಂದಿನ ದಿನಗಳಲ್ಲಿ ಪಾದಚಾರಿ ಮಾರ್ಗ ಒತ್ತುವರಿ ಮಾಡಿಕೊಂಡರೆ ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕಿಚಾಯಿಸಿದ್ದಕ್ಕೆ ಸ್ನೇಹಿತನ ಕೊಲೆ ಮಾಡಿದ ಆರೋಪಿಗಳ ಬಂಧನ

ಪಶ್ಚಿಮ ವಲಯ

ಗಾಂಧಿನಗರದ ಅವೆನ್ಯೂ ರಸ್ತೆ ಮೈಸೂರು ಬ್ಯಾಂಕ್ ಬಳಿಯ ಕೃಷ್ಣ ಬಿಲ್ಡಿಂಗ್ ಮುಂಭಾಗ ಪಾದಚಾರಿ ಮಾರ್ಗವನ್ನು ಸಂಪೂರ್ಣವಾಗಿ ಒತ್ತುವರಿ ಮಾಡಿಕೊಂಡು ಪುಸ್ತಕಗಳು ಸೇರಿದಂತೆ ಇನ್ನಿತರ ವ್ಯಾಪಾರ ಮಾಡುತ್ತಿರುವವರನ್ನು ತೆರವುಗೊಳಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...