ಬಿಬಿಎಂಪಿ | ಕ್ಯೂಆರ್‌ ಕೋಡ್‌ ಸ್ಕ್ಯಾನ್ ಮಾಡಿ; ಸಮಸ್ಯೆ ಹೇಳಿಕೊಳ್ಳಿ

Date:

ರಾಜ್ಯ ರಾಜಧಾನಿ ಬೆಂಗಳೂರಿನ ನಾಗರಿಕರು ಇದೀಗ ತಮ್ಮ ಕುಂದುಕೊರತೆ ದಾಖಲಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಿಯಂತ್ರಣ ಕೊಠಡಿಯನ್ನು ಅವಲಂಬಿಸಬೇಕಿಲ್ಲ. ಏಕೆಂದರೆ, ನಗರದ ರಸ್ತೆಯ ನಾಮಫಲಕದಲ್ಲಿರುವ ಕ್ಯೂಆರ್‌ ಕೋಡ್‌ ಸ್ಕ್ಯಾನ್ ಮಾಡಿ ಎಲ್ಲ ಮಾಹಿತಿ ಪಡೆದುಕೊಳ್ಳಬಹುದು. ಸಮಸ್ಯೆ ಇದ್ದರೆ ಅಧಿಕಾರಿಗಳಿಗೆ ಕರೆ ಮಾಡಿ ದೂರು ನೀಡಬಹುದಾಗಿದೆ. ಸದ್ಯ ಬಿಬಿಎಂಪಿಯ ಈ ಕಾರ್ಯ ಹಲವು ಜನರ ಪ್ರಶಂಸೆಗೆ ಕಾರಣವಾಗಿದೆ.  

ಸದ್ಯ ಬಿಬಿಎಂಪಿ ದಕ್ಷಿಣ ವಲಯದಲ್ಲಿರುವ ನಗರದ ಬೀದಿಗಳ ಹೆಸರಿನ ಬೋರ್ಡ್‌ಗಳಲ್ಲಿ ಕ್ಯೂಆರ್‌ ಕೋಡ್‌ ಹಾಕಲಾಗಿದ್ದು, ಇದೀಗ ಸಾಮಾಜಿಕ ಜಾಲತಾಣದಲ್ಲಿ ಈ ವಿನೂತನ ಪ್ರಯೋಗ ವೈರಲ್ ಆಗಿ ಸಾರ್ವಜನಿಕರ ಪ್ರಶಂಸೆಗೆ ಕಾರಣವಾಗಿದೆ. ಬಿಬಿಎಂಪಿ ಪಾರದರ್ಶಕತೆಯನ್ನು ಹೆಚ್ಚಿಸಲು ಬೀದಿ ಹೆಸರಿನ ಬೋರ್ಡ್‌ಗಳಲ್ಲಿ ಕ್ಯೂಆರ್‌ ಕೋಡ್‌ಗಳನ್ನು ಹಾಕಲಾಗಿದೆ.

ನಾಗರಿಕರು ಈ ಕ್ಯೂಆರ್‌ ಕೋಡ್‌ ಸ್ಕ್ಯಾನ್‌ ಮಾಡಿ, ಲಭ್ಯವಾಗುವ ಲಿಂಕ್‌ ಮೂಲಕ ರಸ್ತೆ, ಚರಂಡಿ, ಬೀದಿ ದೀಪದ ಸಮಸ್ಯೆಗಳಿಗೆ ಯಾರನ್ನು ಸಂಪರ್ಕಿಸಬೇಕೆಂಬ ಮಾಹಿತಿಯನ್ನು ಹೆಸರು, ಸಂಪರ್ಕ ಸಂಖ್ಯೆಗಳ ಸಹಿತ ಮಾಹಿತಿ ದೊರೆಯಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಹಿಂದೆ ಬೆಂಗಳೂರಿನ ನಾಗರಿಕರು ತಮ್ಮ ಸುತ್ತಮುತ್ತಲಿನ ಸಮಸ್ಯೆ ನಿವಾರಣೆಗೆ ಬಿಬಿಎಂಪಿ ನಿಯಂತ್ರಣ ಕೊಠಡಿಗೆ ದೂರು ನೀಡಬೇಕಾಗಿತ್ತು. ನಿಯಂತ್ರಣ ಕೊಠಡಿಯು ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡುತ್ತಿತ್ತು. ಬಳಿಕ ಅವರು ಬಂದು ಕಾರ್ಯ ಮಾಡುತ್ತಿದ್ದರು. ಈ ವಿನೂತನ ಪ್ರಯೋಗ ಈ ಸಮಸ್ಯೆಗೆ ನಾಂದಿ ಹಾಡಿದೆ.

ಇದೀಗ ನಗರದ ನಾಗರಿಕರು ಅಧಿಕಾರಿಗಳು ಹಾಗೂ ಗುತ್ತಿಗೆದಾರರ ಹೆಸರು ಹಾಗೂ ಸಂಪರ್ಕ ಸಂಖ್ಯೆಯನ್ನು ಈ ಕ್ಯೂಆರ್‌ ಕೋಡ್‌ ಮೂಲಕವೇ ಪಡೆಯಬಹುದು. ತಮ್ಮ ಸಮಸ್ಯೆಗಳಿದ್ದಲ್ಲಿ ನೇರವಾಗಿ ಅಧಿಕಾರಿಗಳಿಗೆ ತಿಳಿಸಬಹುದು. ಇದರಿಂದ ಶೀಘ್ರ ಪರಿಹಾರ ಕಂಡುಕೊಳ್ಳಬಹುದು.

ಈ ಹಿಂದೆ ಬಿಬಿಎಂಪಿ ವಾರ್ಡ್‌ಗಳಲ್ಲಿ ಆಯಾ ಕೆಲಸಗಳಿಗೆ ಸಂಬಂಧಪಟ್ಟ ಅಧಿಕಾರಿಗಳ ಮಾಹಿತಿ ಪಟ್ಟಿಯನ್ನು ನೀಡಲಾಗುತ್ತಿತ್ತು. ಅದು ಅಲ್ಲಿಗೆ ಮಾತ್ರ ಸೀಮಿತವಾಗುತ್ತಿತ್ತು. ಕೆಲವು ದಿನಗಳ ನಂತರ ಅಧಿಕಾರಿಗಳು ಬದಲಾದಾಗ ಅವರ ಮಾಹಿತಿ ಸಿಗುವುದು ಕಷ್ಟಕರವಾಗಿತ್ತು. ಈ ವಿನೂತನ ಯೋಜನೆಯಿಂದ ಈ ಸಮಸ್ಯೆ ಇರುವುದಿಲ್ಲ.

ಕಾರ್ಯನಿರತವಾಗಿರುವ ಅಧಿಕಾರಿ, ಗುತ್ತಿಗೆದಾರರ ಮಾಹಿತಿ ಅಪ್‌ಡೇಟ್‌ ಆಗುತ್ತಿರುತ್ತದೆ. ಕ್ಯೂಆರ್‌ ಕೋಡ್‌ಗಳನ್ನು ರಸ್ತೆ ನಾಮಫಲಕಗಳಿಗೆ ಅಂಟಿಸಲಾಗುತ್ತಿದೆ. ಪ್ರತಿ ರಸ್ತೆಯೂ ಕೂಡ ತನ್ನದೇ ಪ್ರತ್ಯೇಕವಾದ ಲಿಂಕ್‌ ಒಳಗೊಂಡಿರುತ್ತದೆ.

ಬೆಂಗಳೂರು ದಕ್ಷಿಣ ವಲಯದಲ್ಲಿ ಸುಮಾರು 10,500 ರಸ್ತೆಗಳಿವೆ. ಬಸವನಗುಡಿ, ಪದ್ಮನಾಭನಗರ, ಬಿಟಿಎಂ ಲೇಔಟ್‌, ಜಯನಗರ, ಚಿಕ್ಕಪೇಟೆ ವಿಧಾನಸಭೆ ಕ್ಷೇತ್ರ, ವಿಜಯನಗರ ವಿಧಾನಸಭ ಕ್ಷೇತ್ರಗಳ ರಸ್ತೆಗಳಲ್ಲಿ ಕ್ಯೂಆರ್‌ ಕೋಡ್‌ಗಳನ್ನು ಹಾಕಲಾಗಿದೆ. ಸದ್ಯ ದಕ್ಷಿಣ ವಲಯದಲ್ಲಿ ಸುಮಾರು ₹12 ಲಕ್ಷ ವೆಚ್ಚದಲ್ಲಿ ಈ ಯೋಜನೆ ಅನುಷ್ಠಾನಗೊಳಿಸಲಾಗಿದೆ.

ಬಿಬಿಎಂಪಿ ವ್ಯಾಪ್ತಿಯ 13 ಸಾವಿರ ಕಿ.ಮೀ ಮುಖ್ಯ ಹಾಗೂ ಉಪ ಮುಖ್ಯ ರಸ್ತೆಗಳು ಮತ್ತು ವಲಯಗಳ ಎಲ್ಲ ರಸ್ತೆಗಳಿಗೂ ವಿಸ್ತರಿಸಲು ಸುಮಾರು ₹1.5 ಕೋಟಿ ವೆಚ್ಚವಾಗಬಹುದು ಎನ್ನಲಾಗಿದೆ.

ಈ ಕ್ಯೂಆರ್‌ ಕೋಡ್‌ನಲ್ಲಿ ಎಲ್ಲ ರೀತಿಯ ಕಾಮಗಾರಿಗಳ ಮಾಹಿತಿ ಅಳವಡಿಸಲಾಗಿದೆ. ಸದ್ಯ ಇಂಗ್ಲಿಷ್‌ನಲ್ಲಿ ಮಾಹಿತಿ ಲಭ್ಯವಿದೆ.

ಸಾರ್ವಜನಿಕರು ಈ ಕ್ಯೂಆರ್‌ ಕೋಡ್ ಸ್ಕ್ಯಾನ್ ಮಾಡಿದಾಗ ಒಂದು ಲಿಂಕ್ ಬರುತ್ತದೆ. ಆ ಲಿಂಕ್ ಮೇಲೆ ಕ್ಲಿಕ್ ಮಾಡಿದಾಗ ಆ ಏರಿಯಾದ ಪ್ರತಿಯೊಂದು ಮಾಹಿತಿ ಸಿಗುತ್ತದೆ. ಆ ಏರಿಯಾದ ಎಮ್‌ಎಲ್‌ಎ ಸೇರಿದಂತೆ ಬಿಬಿಎಂಪಿ ಅಧಿಕಾರಿಗಳ ನಂಬರ್‌ ಸಹ ನೀಡಲಾಗಿದೆ. ಸಾರ್ವಜನಿಕರಿಗೆ ಆ ಬೀದಿಯಲ್ಲಿ ಯಾವುದೇ ಸಮಸ್ಯೆ ಇದ್ದರೆ, ಕರೆ ಮಾಡಿ ಸಮಸ್ಯೆ ಹೇಳಬಹುದು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪ್ರತಿಭಟನೆಗಳು ಫ್ರೀಡಂ ಪಾರ್ಕ್‌ಗೆ ಸೀಮಿತ; ನಿಯಮ ಹಿಂಪಡೆಯದಿದ್ದರೆ ಪ್ರತಿಭಟನೆಯ ಹಕ್ಕಿಗಾಗಿ ಹೋರಾಟ

ಯಾವ ಅಧಿಕಾರಿ ಹೆಸರು/ನಂಬರ್ ಲಭ್ಯ?

  • ಶಾಸಕರ ಹೆಸರು, ಕ್ಷೇತ್ರ ವಿಭಾಗ, ವಾರ್ಡ್‌ ರಸ್ತೆ ಹೆಸರು, ರಸ್ತೆ ಐಡಿ, ರಸ್ತೆ ಗುಡಿಸುವವರು ಸೂಪರ್‌ ವೈಸರ್‌ ಸಂಪರ್ಕ ಸಂಖ್ಯೆ, ಕಸ ಸಂಗ್ರಹಿಸುವ ಸಮಯ, ಕಸ ಗುತ್ತಿಗೆದಾರರ ಸಂಪರ್ಕ ಸಂಖ್ಯೆ
  • ಆ ಪ್ರದೇಶದಲ್ಲಿ ತ್ಯಾಜ್ಯ ಉತ್ಪಾದನೆ ವಿವರ, ಗುಂಡಿ ಮುಚ್ಚುವ, ಪಾದಚಾರಿ ರಸ್ತೆ ನಿರ್ವಹಣೆ, ಚರಂಡಿ ಮೇಲಿನ ಸ್ಲ್ಯಾಪ್‌ ಬದಲಾವಣೆ, ಚರಂಡಿ ಹೂಳು ತೆಗೆಯುವ, ಬೀದಿದೀಪ ನಿರ್ವಹಣೆ ಜವಾಬ್ದಾರಿ ಹೊಂದಿರುವ ಎಂಜಿನಿಯರ್‌ ಗುತ್ತಿಗೆದಾರರ ಹೆಸರು ಮತ್ತು ಸಂಪರ್ಕ ಸಂಖ್ಯೆ
  • ಮರದ ಕೊಂಬೆ ತೆರವಿಗೆ ಅರಣ್ಯ ವಿಭಾಗ ಆರ್‌ಎಫ್‌ಒ ಗುತ್ತಿಗೆದಾರರ ವಿವರ, ನೀರು ಸರಬರಾಜು ಒಳಚರಂಡಿ ನಿರ್ವಹಣೆ ಜವಾಬ್ದಾರಿ ಹೊಂದಿರುವ ಬಿಡಬ್ಲ್ಯುಎಸ್‌ಎಸ್‌ಬಿ ಅಧಿಕಾರಿ ಹೆಸರು, ಸಂಪರ್ಕ ಸಂಖ್ಯೆ
  • ನಿಯಂತ್ರಣ ಕೊಠಡಿ ಸಂಖ್ಯೆ, ಅಗ್ನಿಶಾಮಕ ದಳ ಸಿಬ್ಬಂದಿ ವಿವರ, ನಾಯಿ ಹಿಡಿಯಲು ಹಾಗೂ ಬೀಡಾಡಿ ದನಗಳ ಸಮಸ್ಯೆ ನಿವಾರಿಸುವ ಪಶುಸಂಗೋಪನೆ ಅಧಿಕಾರಿಯ ಹೆಸರು ಸಂಪರ್ಕ ಸಂಖ್ಯೆ, ಸೊಳ್ಳೆ ನಿವಾರಣೆಗೆ ಔಷಧ ಸಿಂಪಡಿಸುವ ಆರೋಗ್ಯ ಇಲಾಖೆ ಅಧಿಕಾರಿಯ ಮಾಹಿತಿಯನ್ನು ಕ್ಯೂಆರ್‌ ಕೋಡ್‌ ಸ್ಕ್ಯಾನ್ ಮಾಡಿದರೆ ಪಡೆಯಬಹುದು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...