ಬಿಬಿಎಂಪಿ | ಅನಧಿಕೃತ ಕಟ್ಟಡ ಮತ್ತು ಭಗ್ನಾವಶೇಷ ವಿಲೇವಾರಿ ನಿಯಮ ಮೀರಿದರೆ ಕಠಿಣ ಕ್ರಮ

Date:

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ನಗರದ ಹೊರಗಡೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಾಗೂ ನಗರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳ ಬದಿಯಲ್ಲಿ ಅನಧಿಕೃತ ಅನಾಮಧೇಯ ವ್ಯಕ್ತಿಗಳಿಂದ/ಏಜೆನ್ಸಿಗಳಿಂದ ಕಟ್ಟಡ ಮತ್ತು ಭಗ್ನಾವಶೇಷ ತ್ಯಾಜ್ಯವನ್ನು ಅನಧಿಕೃತವಾಗಿ ವಿಲೇವಾರಿ ಮಾಡಲಾಗುತ್ತಿದೆ ಎಂದು ಬಿಬಿಎಂಪಿ ಹೇಳಿದೆ.

ಕಟ್ಟಡ ಮತ್ತು ಭಗ್ನಾವಶೇಷ ತ್ಯಾಜ್ಯವನ್ನು ಅನಧಿಕೃತವಾಗಿ ವಿಲೇವಾರಿ ಮಾಡವುದು ಅತಿರೇಕವಾಗಿ ನಡೆಯುತ್ತಿದೆ. ಈ ಪ್ರವೃತ್ತಿಯು ನಗರಕ್ಕೆ ಸಂಚರಿಸುವ ಸಾರ್ವಜನಿಕರಲ್ಲಿ ಬೆಂಗಳೂರು ನಗರದ ಸ್ವಚ್ಛತೆಯ ಕುರಿತು ಋಣಾತ್ಮಕ ಮನೋಭಾವನೆ ಉಂಟುಮಾಡುವುದಲ್ಲದೇ ನಗರದ ಘನತೆ ಕುಂದಿಸುತ್ತಿದೆ. ಈ ವಿಚಾರವನ್ನು ಅತೀ ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ತಿಳಿಸಿದೆ.

ಕಟ್ಟಡ ಮತ್ತು ಭಗ್ನಾವಶೇಷ ತ್ಯಾಜ್ಯ ನಿರ್ವಹಣೆಯ ಕುರಿತಂತೆ ಉತ್ಪಾದಕರು/ಸಂಗ್ರಹಣಾದಾರರು/ಸಾಗಾಣಾದಾರರು/ವಿಲೇವಾರಿದಾರರು ಮತ್ತು ಸಾರ್ವಜನಿಕರಿಗಾಗಿ ಬಿಬಿಎಂಪಿ ಪತ್ರಿಕಾ ಪ್ರಕಟಣೆ ಹೊರಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
  • ಕಟ್ಟಡ ಮತ್ತು ಭಗ್ನಾವಶೇಷ ತ್ಯಾಜ್ಯದ ವೈಜ್ಞಾನಿಕ ಅಧಿಕೃತ ಸಂಗ್ರಹಣೆ, ಸಾಗಾಣೆ ಮತ್ತು ವಿಲೇವಾರಿಯ ಪ್ರಾಥಮಿಕ ಜವಾಬ್ದಾರಿಯು ತ್ಯಾಜ್ಯ ಉತ್ಪಾದಕರದ್ದಾಗಿರುತ್ತದೆ.
  • ಕಟ್ಟಡ ಮತ್ತು ಭಗ್ನಾವಶೇಷ ತ್ಯಾಜ್ಯವನ್ನು ವೈಜ್ಞಾನಿಕವಾಗಿ ಸಂಗ್ರಹಿಸಿ ಅಧಿಕೃತವಾಗಿ ಗುರುತಿಸಿದ ಸಂಸ್ಕರಣ ಘಟಕಗಳಿಗೆ ಸಾಗಿಸಿ ವಿಲೇವಾರಿ ಕೈಗೊಳ್ಳಬೇಕು.
  • ಕಟ್ಟಡ ಮತ್ತು ಭಗ್ನಾವಶೇಷ ತ್ಯಾಜ್ಯವನ್ನು ಅನಧಿಕೃತವಾಗಿ ಎಲ್ಲೆಂದರಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ, ರಸ್ತೆಗಳ ಬದಿಯಲ್ಲಿ ಇಕ್ಕೆಲಗಳಲ್ಲಿ, ಚರಂಡಿಗಳಲ್ಲಿ, ಖಾಲಿ ನಿವೇಶನಗಳಲ್ಲಿ ಅಥವಾ ಕ್ವಾರಿಗಳಲ್ಲಿ ಸುರಿಯುವುದನ್ನು ಕಟ್ಟಡ ಮತ್ತು ಭಗ್ನಾವಶೇಷ ತ್ಯಾಜ್ಯ ನಿರ್ವಹಣಾ ನಿಯಮಗಳು-2016ರನ್ವಯ ನಿಷೇಧಿಸಲಾಗಿದೆ. ಇದು ದಂಡಾರ್ಹ ಮತ್ತು ಕಾನೂನಾತ್ಮಕವಾಗಿ ಅಪರಾಧವಾಗಿದೆ.
  • ಕಟ್ಟಡ ಮತ್ತು ಭಗ್ನಾವಶೇಷ ತ್ಯಾಜ್ಯದ ಅನಧಿಕೃತ ವಿಲೇವಾರಿಗಾಗಿ ತ್ಯಾಜ್ಯ ಉತ್ಪಾದಕರನ್ನೊಳಗೊಂಡಂತೆ ತ್ಯಾಜ್ಯ ಸಂಗ್ರಹಣೆ ಮತ್ತು ಸಾಗಾಣೆ/ವಿಲೇವಾರಿದಾರರಿಗೂ ಸಹ ನಿಯಮಾವಳಿಗಳನ್ವಯ (₹10,000 ಪ್ರತಿ ಟನ್‌ಗೆ) ದಂಡವನ್ನು ವಿಧಿಸಲಾಗುವುದು. ಪರಿಸರ (ಸಂರಕ್ಷಣೆ) ಕಾಯ್ದೆ 1986ರನ್ವಯ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಮುಖಾಂತರ ಕಾನೂನಾತ್ಮಕವಾಗಿ ಕ್ರಮಕೈಗೊಳ್ಳಲಾಗುವುದು.

ಈ ಸುದ್ದಿ ಓದಿದ್ದೀರಾ? ವಂಚನೆ ಪ್ರಕರಣ | ಓಡಿಶಾದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದ ಪ್ರಮುಖ ಆರೋಪಿ ಅಭಿನವ ಹಾಲಶ್ರೀ

  • ನಗರದ ಹೊರವಲಯದಲ್ಲಿ ಕಟ್ಟಡ ಮತ್ತು ಭಗ್ನಾವಶೇಷ ತ್ಯಾಜ್ಯದ ಅನಧಿಕೃತ ವಿಲೇವಾರಿಗಾಗಿ ಪಾಲಿಕೆಯ ವ್ಯಾಪ್ತಿಯಲ್ಲಿ ಸಂಚರಿಸುವ ಎಲ್ಲ ವಾಹನಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪಾಲಿಕೆಯ ಎಲ್ಲ ಸೂಪರವೈಸರ್/ಕಿರಿಯ ಆರೋಗ್ಯ ಪರಿವೀಕ್ಷಕರು/ವಾರ್ಡ ಮಾರ್ಷಲ್ಸ್/ ಮಾರ್ಷಲ್ ಸೂಪರವೈಸ‌ರ್ ಅವರುಗಳ ಮುಖಾಂತರ ತಪಾಸಣೆಗೆ ಒಳಪಡಿಸಿ ನಿಯಮಾವಳಿ ಅನ್ವಯ ದಂಡವನ್ನು ವಿಧಿಸಿ ವಾಹನಗಳನ್ನು ವಶಪಡಿಸಿಕೊಂಡು ಹತ್ತಿರದ ಪೋಲಿಸ್ ಠಾಣೆಯ ಸುಪರ್ದಿಗೆ ಮುಂದಿನ ಕ್ರಮಕ್ಕಾಗಿ ನೀಡಲಾಗುವುದು ಎಂದು ಹೇಳಿದೆ.

“ಈ ಅಂಶಗಳನ್ನು ಸಾರ್ವಜನಿಕರ ಗಮನಕ್ಕಾಗಿ ಹೊರಡಿಸಲಾಗಿದೆ. ಪರಿಸರ ಸಂರಕ್ಷಣೆಗಾಗಿ ಪಾಲಿಕೆಯೊಂದಿಗೆ ಸಹಕರಿಸಿ” ಎಂದು ಘನತ್ಯಾಜ್ಯ ವಿಭಾಗದ ಜಂಟಿ ಆಯುಕ್ತೆ ಆರ್. ಪ್ರತಿಭಾ ಮನವಿ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...