ಬೆಂಗಳೂರಿನಲ್ಲಿ ಎರಡನೇ ವಿಮಾನ ನಿಲ್ದಾಣ; ಕೇಂದ್ರಕ್ಕೆ 3 ಸ್ಥಳಗಳ ಪ್ರಸ್ತಾವನೆ ಸಲ್ಲಿಕೆ

Date:

ಬೆಂಗಳೂರಿನಲ್ಲಿ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವ ಯೋಜನೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಮೂರು ಸ್ಥಳಗಳನ್ನು ಗುರುತಿಸಿ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ಪ್ರಸ್ತಾವನೆಯನ್ನು ಕಳುಹಿಸಿದೆ.

ಪ್ರಸ್ತಾಪಿತ ವರದಿಯಂತೆ ಎರಡು ಸ್ಥಳಗಳು ಬೆಂಗಳೂರು ದಕ್ಷಿಣದ ಕನಕಪುರ ರಸ್ತೆಯಲ್ಲಿದ್ದು, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿರುದ್ಧ ದಿಕ್ಕಿನಲ್ಲಿವೆ. ಮತ್ತೊಂದು ಬೆಂಗಳೂರು ನಗರ ಜಿಲ್ಲೆಯ ವ್ಯಾಪ್ತಿಗೆ ಬರಲಿದೆ.

ಪ್ರಸ್ತಾಪಿಸಲಾದ ಒಂದು ಸ್ಥಳವೂ ಮೆಟ್ರೋ ನಿಲ್ದಾಣದ ಹಸಿರು ಮಾರ್ಗದ ಕೊನೆಯ ನಿಲ್ದಾಣದಿಂದ 10 ಕಿ.ಮೀ ದೂರದ ಹಾರೋಹಳ್ಳಿ ಬಳಿಯಲ್ಲಿ ಗುರುತಿಸಲಾಗಿದೆ. ಕನಕಪುರ ರಸ್ತೆಯ ಉದ್ದೇಶಿತ ಎರಡು ಸ್ಥಳಗಳು ಕ್ರಮವಾಗಿ 4800 ಹಾಗೂ 5000 ಎಕರೆ ಸ್ಥಳ ಹೊಂದಿವೆ ಎಂದು ತಿಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೂರನೇ ಉದ್ದೇಶಿತ ಸ್ಥಳವು ಕುಣಿಗಲ್‌ ರಸ್ತೆಯ ನೆಲಮಂಗಲದಲ್ಲಿದ್ದು,ಅಧಿಕಾರಿಗಳು ಸ್ಥಳ ಗುರುತಿಸಿದಂತೆ 5200 ಎಕರೆ ಭೂಮಿ ಹೊಂದಿದೆ. ರಾಜ್ಯ ಸರ್ಕಾರವು ವಿಮಾನಯಾನ ಇಲಾಖೆಗೆ ತಿಳಿಸಿದಂತೆ ಈ ಮೂರು ಸ್ಥಳಗಳ ಯಾವುದಾದರೂ ಜಾಗದಲ್ಲಿ 4500 ಎಕರೆ ಜಾಗ ನೀಡುವುದಾಗಿ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೆಪಿಎಸ್‌ಸಿ ಕೆಡಿಸಿದ್ದಾಯಿತು, ಸರಿಪಡಿಸುವವರಾರು?

ನಿಯಮಾವಳಿಯ ಪ್ರಕಾರ ವಿಮಾನಯಾನ ಇಲಾಖೆಯು ಎರಡನೇ ವಿಮಾನಯಾನ ನಿರ್ಮಿಸಲು ಸ್ಥಳವನ್ನು ಅಂತಿಮಗೊಳಿಸಲು ಭಾರತೀಯ ವಿಮಾನಯಾನ ಪ್ರಾಧಿಕಾರದಿಂದ ತಂಡವನ್ನು ವರದಿ ಮಾಡಲು ಕಳುಹಿಸಲಿದೆ ಎನ್ನಲಾಗಿದೆ. ಪ್ರಾಧಿಕಾರದ ಶಿಫಾರಸ್ಸಿನಂತೆ ವಿವರವಾದ ಆರ್ಥಿಕ ಕಾರ್ಯಸಾಧ್ಯತೆಯ ವರದಿಯನ್ನು ಕೈಗೊಳ್ಳಲಾಗುತ್ತದೆ ಎಂದು ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ಗುರುತಿಸಲಾದ ಮೂರು ಸ್ಥಳಗಳು ಬೆಂಗಳೂರು ನಗರ ಕೇಂದ್ರದ 50 ಕಿ. ಮೀ ವ್ಯಾಪ್ತಿಯ ಪರಿಧಿಯಲ್ಲಿ ಬರಲಿದ್ದು, ರಸ್ತೆಗಳ ಜೊತೆಗೆ ರಾಷ್ಟ್ರೀಯ ಹೆದ್ದಾರಿಗಳನ್ನು ಸಂಪರ್ಕಿಸಲಿದೆ. ಅಲ್ಲದೆ ಈ ಮೂರು ಸ್ಥಳಗಳಲ್ಲಿ ಯಾವ ಸ್ಥಳದಲ್ಲಿ ನಿರ್ಮಿಸಿದರೂ ಆರ್ಥಿಕವಾಗಿ ಲಾಭದಾಯಕವಾಗಲಿದೆ ಎಂದು ರಾಜ್ಯ ಸರ್ಕಾರ ಮಾಹಿತಿ ನೀಡಿದೆ.

ಕೇಂದ್ರದೊಂದಿಗೆ 2004ರ ಜುಲೈ ರಂದು ರಾಜ್ಯ ಸರ್ಕಾರ ಮಾಡಿಕೊಂಡ ಒಪ್ಪಂದದಂತೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು 2033ರ ತನಕ ಏಕೈಕ ವಿಮಾನ ನಿಲ್ದಾಣವಾಗಿ ಉಳಿಯಬೇಕು ಎಂದು ತಿಳಿಸಲಾಗಿತ್ತು. ದೇವನಹಳ್ಳಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ 150 ಕಿ.ಮೀ ವ್ಯಾಪ್ತಿಯೊಳಗೆ ನಿಲ್ದಾಣವು ಆರಂಭವಾದ 25 ವರ್ಷಗಳ ತನಕ ಯಾವುದೇ ವಿಮಾನ ನಿಲ್ದಾಣಗಳನ್ನು ನಿರ್ಮಿಸಬಾರದು/ವಿಸ್ತರಿಸಬಾರದು/ಅಭಿವೃದ್ಧಿಪಡಿಸಬಾರದು ಎಂದು ಒಪ್ಪಂದದಲ್ಲಿ ತಿಳಿಸಲಾಗಿತ್ತು.

2008ರಲ್ಲಿ ಶುರುವಾದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 2024ರ ವರ್ಷದಲ್ಲಿ 4 .73 ಕೋಟಿ ಮಂದಿ ಪ್ರಯಾಣಿಸಿದ್ದಾರೆ ಎಂದು ಬಿಐಎಎಲ್ ತಿಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...