ಬೆಂಗಳೂರು | ಪೊಲೀಸರ ಸೋಗಿನಲ್ಲಿ ಮಹಿಳಾ PGಗೆ ನುಗ್ಗಿದ್ದ 6 ಮಂದಿ; ಬಂಧನ

Date:

ಪೋಲೀಸರ ಸೋಗಿನಲ್ಲಿ ದುರುಳರ ಗುಂಪೊಂದು ಮಹಿಳಾ ಪಿ.ಜಿ.ಗೆ ನುಗ್ಗಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಗುಂಪು ಪಿ.ಜಿ.ಯಲ್ಲಿ ದರೋಡೆಗೆ ಯತ್ನಿಸಿತ್ತು ಎಂದು ಹೇಳಲಾಗಿದೆ. ಗುಂಪಿನಲ್ಲಿದ್ದ 6 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ಎಚ್‌ಎಎಲ್‌ ಪೊಲೀಸ್‌ ಠಾಣಾ ವ್ಯಾಪ್ತಿಯ ಸ್ಪೈಸ್ ಗಾರ್ಡನ್‌ನ ‘ಕೋ-ಲಿವಿಂಗ್’ ಪಿ.ಜಿಯಲ್ಲಿ ಘಟನೆ ನಡೆದಿದೆ. ಪಿ.ಜಿಯಲ್ಲಿದ್ದ ಯುವತಿಯೊಬ್ಬರಿಗೆ ಪರಿಚಿತನಾಗಿದ್ದ ಯುವಕನೊಬ್ಬ ತನ್ನ ಗುಂಪಿನೊಂದಿಗೆ ಪೊಲೀಸರ ಹೆಸರು ಹೇಳಿಕೊಂಡು, ಪಿ.ಜಿ ನುಗ್ಗಿದ್ದಾರೆ ಎಂದು ಆರೋಪಿಸಲಾಗಿದೆ.

ಆರೋಪಿಗಳನ್ನು ಕೇರಳ ಮೂಲದ ನಜಾಸ್, ಸರುಣ್, ಬೆಂಗಳೂರಿನ ವಿಷ್ಣು ಕೆ.ಟಿ, ದಿವಾಕರ್, ಮಧುಕುಮಾರ್, ಕಿರಣ್ ಎಂದು ಹೆಸರಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಮುಖ ಆರೋಪಿ ನಜಾಸ್‌ಗೆ ಪಿ.ಜಿಯಲ್ಲಿದ್ದ ಯುವತಿ ಪರಿಚಯವಾಗಿದ್ದರು. ತನ್ನ ಜನ್ಮದಿನಾಚರಣೆಗಾಗಿ ಪಿ.ಜಿಗೆ ಬರುವಂತೆ ನಜಾಸ್‌ಗೆ ಆಹ್ವಾನಿಸಿದ್ದರು. ಆತ ತನ್ನ ಸ್ನೇಹಿತರ ಗುಂಪಿನಿಂದಿಗೆ ಪಿ.ಜಿಯಲ್ಲಿ ನಡೆದ ಹುಟ್ಟಹಬ್ಬದ ಸಂಭ್ರಮದಲ್ಲಿ ಭಾಗಿಯಾಗಿದ್ದ. ಆದರೆ, ಕಾರ್ಯಕ್ರಮ ಮುಗಿದ ಬಳಿಕ, ನಜಾಸ್ ಮತ್ತು ಆತನ ತಂಡ ಪಿ.ಜಿಯಲ್ಲಿದ್ದ ಕೊಠಡಿಗಳಿಗೆ ತೆರಳಿ, ತಾವು ಪೊಲೀಸರೆಂದು ಹೇಳಿಕೊಂಡು, ಯುವತಿಯರ ಬಳಿಯಿದ್ದ 2 ಮೊಬೈಲ್‌ಗಳನ್ನು ಕಸಿದುಕೊಂಡಿದ್ದಾರೆ. ಅಲ್ಲದೆ, 5 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಲಾಗಿದೆ.

ಆರೋಪಿಗಳ ವರ್ತನೆ ಕಂಡು ಅನುಮಾನಗೊಂಡ ಯುವತಿಯರು ಎಚ್‌ಎಎಲ್‌ ಪೊಲೀಸ್‌ ಠಾಣೆಗೆ ಕರೆ ಮಾಡಿದ್ದಾರೆ. ಆಗ, ಅದು ನಕಲಿ ಪೊಲೀಸ್‌ ಗ್ಯಾಂಗ್‌ ಎಂಬುದು ಗೊತ್ತಾಗಿದೆ. ಬಳಿಕ, ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧತ ಆರೋಪಿಗಳಲ್ಲಿ ಒಬ್ಬನಾದ ಸರುಣ್ ಎಂಬಾತ, ಈ ಹಿಂದೆ ಹನಿಟ್ರ್ಯಾಪ್ ಪ್ರಕರಣದಲ್ಲಿ ಬಂಧಿಸಲಾಗಿತ್ತು ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...