ಸುರಕ್ಷಿತ ಮಟ್ಟಕ್ಕಿಂತ ಕೆಟ್ಟದಾದ ಬೆಂಗಳೂರಿನ ವಾಯು ಗುಣಮಟ್ಟ: ವರದಿ

Date:

  • ಹೊಸದಾಗಿ ರಚನೆಯಾದ ಸರ್ಕಾರ ಈ ಬಿಕ್ಕಟ್ಟನ್ನು ಅತ್ಯಂತ ತುರ್ತಾಗಿ ಪರಿಹರಿಸಬೇಕು
  • ಹೊಸ ಮಾರ್ಗಸೂಚಿ ಮಟ್ಟವನ್ನು ಮೀರಿರುವ ವಾಯು ಮಾನವನ ಆರೋಗ್ಯಕ್ಕೆ ಅಪಾಯಕಾರಿ

ವಿಶ್ವ ಆರೋಗ್ಯ ಸಂಸ್ಥೆ (ಡಬ್ಲೂಎಚ್‌ಓ) ನಿಗದಿಪಡಿಸಿದ ಸುರಕ್ಷಿತ ಮಟ್ಟಕ್ಕಿಂತ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 5.8 ಪಟ್ಟು ವಾಯು ಗುಣಮಟ್ಟ ಕಳಪೆಯಾಗಿದೆ ಎಂದು ಗ್ರೀನ್‌ಪೀಸ್ ಇಂಡಿಯಾ ವರದಿ ಮಾಡಿದೆ.

ಈ ಬಗ್ಗೆ ಗ್ರೀನ್‌ಪೀಸ್‌ ಇಂಡಿಯಾ ಒಂದು ವರ್ಷದ ಅವಧಿಯ ಅಧ್ಯಯನ ಮಾಡಿದ್ದು, ‘ಸ್ಪೇರ್ ದಿ ಏರ್’ ಎಂಬ ಶೀರ್ಷಿಕೆಯ ವರದಿ ನೀಡಿದೆ. ಸೆಪ್ಟೆಂಬರ್ 2021 ರಿಂದ ಸೆಪ್ಟೆಂಬರ್ 2022 ರವರೆಗಿನ ಮಾಹಿತಿಯನ್ನು ವಿಶ್ಲೇಷಿಸಿದೆ.

“ಇತ್ತೀಚಿನ ಡಬ್ಲೂಎಚ್‌ಓ ಮಾರ್ಗಸೂಚಿಗಳಿಗಿಂತ ಬೆಂಗಳೂರಿನಲ್ಲಿ ವಾಯು ಮಾಲಿನ್ಯದ ಮಟ್ಟವು ಅಪಾಯಕಾರಿ ಹಂತದಲ್ಲಿದೆ. ಗಾಳಿಯ ಗುಣಮಟ್ಟವೂ ನಿರಂತರವಾಗಿ ಹದಗೆಡಲು ಹೆಚ್ಚಾಗಿದೆ ಎಂದು ಅಧ್ಯಯನ ಬಹಿರಂಗಪಡಿಸಿದೆ. ಡಬ್ಲ್ಯುಎಚ್‌ಒ ನೀಡಿದ ಮಾರ್ಗಸೂಚಿಗಳಿಗಿಂತ ಐದು ಪಟ್ಟು ಕೆಟ್ಟದಾಗಿರುವ ಗಾಳಿಯಲ್ಲಿ ಬೆಂಗಳೂರಿನವರು ಉಸಿರಾಡುತ್ತಿದ್ದಾರೆ” ಎಂದು ಗ್ರೀನ್‌ಪೀಸ್ ಇಂಡಿಯಾ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಿಶ್ವ ಆರೋಗ್ಯ ಸಂಸ್ಥೆ ಪ್ರತಿ ಘನ ಮೀಟರ್‌ಗೆ 5 ಮೈಕ್ರೋಗ್ರಾಂ ಅನ್ನು ಸುರಕ್ಷಿತ ಮಟ್ಟವಾಗಿ ಇರಿಸಿದೆ. ಆದರೆ, ಬೆಂಗಳೂರಿನ ಗಾಳಿಯಲ್ಲಿ ಕಣದಲ್ಲಿ ವಾರ್ಷಿಕ ಸರಾಸರಿ ಪ್ರತಿ ಘನ ಮೀಟರ್‌ಗೆ 29.01 ಮೈಕ್ರೋಗ್ರಾಂ ಮಾಲಿನ್ಯವಿದೆ. 24ಗಂಟೆಗಳ ಸಾಂದ್ರತೆಯು 283 ದಿನಗಳಲ್ಲಿ ಪ್ರತಿ ಘನ ಮೀಟರ್‌ಗೆ 60 ಮೈಕ್ರೋಗ್ರಾಂಗಿಂತ ಹೆಚ್ಚು. ಇದು ಡಬ್ಲ್ಯುಎಚ್‌ಒ ನಿಗದಿಪಡಿಸಿದ ಸುರಕ್ಷಿತ ಮಟ್ಟಗಳಿಗಿಂತ 5.8 ಪಟ್ಟು ಹೆಚ್ಚಾಗಿದೆ” ಎಂದು ಹೇಳಿದೆ.

“ಬೆಂಗಳೂರಿನ ಜನರು ಅಪಾಯಕಾರಿ ಕಲುಷಿತ ಗಾಳಿಯನ್ನು ಉಸಿರಾಡುತ್ತಿದ್ದಾರೆ ಎಂಬ ಕಠೋರ ವಾಸ್ತವವನ್ನು ಮತ್ತೊಮ್ಮೆ ಈ ವರದಿ ತಿಳಿಸಿಕೊಟ್ಟಿದೆ. ವಾಹನಗಳ ಹೊರಸೂಸುವಿಕೆಯು ನಗರದಲ್ಲಿ 2.5ಮಾಲಿನ್ಯದ ಮಟ್ಟ ಮತ್ತು ಸಾರಜನಕ ಡೈ ಆಕ್ಸೈಡ್(NO2) ಸರಾಸರಿ ಸಾಂದ್ರತೆಯು ಸುರಕ್ಷಿತ ಮಟ್ಟಕ್ಕಿಂತ ಹೆಚ್ಚಾಗಿದೆ. ಹೊಸದಾಗಿ ರಚನೆಯಾದ ಸರ್ಕಾರವು ಈ ಬಿಕ್ಕಟ್ಟನ್ನು ಅತ್ಯಂತ ತುರ್ತಾಗಿ ಪರಿಹರಿಸಬೇಕು” ಎಂದು ಗ್ರೀನ್‌ಪೀಸ್ ಇಂಡಿಯಾದ ಪ್ರಚಾರ ವ್ಯವಸ್ಥಾಪಕ ಅವಿನಾಶ್ ಚಂಚಲ್ ಹೇಳಿದರು.

ಬೆಂಗಳೂರಿನ ಹೊರತಾಗಿ, ಭೋಪಾಲ್, ಚೆನ್ನೈ, ಕೊಚ್ಚಿ, ಹೈದರಾಬಾದ್, ಜೈಪುರ, ಕೋಲ್ಕತ್ತಾ, ಲಕ್ನೋ, ಮುಂಬೈ, ಪಾಟ್ನಾ ಮತ್ತು ಪುಣೆಯಲ್ಲೂ ಅಧ್ಯಯನ ನಡೆಸಲಾಗಿದೆ. ಮೂರು ಪ್ರಮುಖ ಮಾಲಿನ್ಯಕಾರಕಗಳಾದ PM 2.5, PM10 ಮತ್ತು NO2 ಕಳಪೆಯಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಯುವಕನ ಕಿರುಕುಳಕ್ಕೆ ಬೇಸತ್ತು ಠಾಣೆ ಮೆಟ್ಟಿಲೇರಿದ ಯುವತಿ

“2021ರಲ್ಲಿ ನಾಗರಿಕರ ಆರೋಗ್ಯದ ಮೇಲೆ ಪರಿಣಾಮ ಬೀರುವ ವಾಯು ಮಾಲಿನ್ಯದ ಹೆಚ್ಚುತ್ತಿರುವ ಪುರಾವೆಗಳೊಂದಿಗೆ, ಡಬ್ಲ್ಯುಎಚ್‌ಒ ಎಲ್ಲ ಗಾಳಿಯ ಗುಣಮಟ್ಟದ ಮಾರ್ಗಸೂಚಿಗಳ ಮಟ್ಟವನ್ನು ಕೆಳಕ್ಕೆ ಸರಿಹೊಂದಿಸುವ ವ್ಯವಸ್ಥಿತ ಕೆಲಸವನ್ನು ನಡೆಸಿತು. ಹೊಸ ಮಾರ್ಗಸೂಚಿ ಮಟ್ಟವನ್ನು ಮೀರುವುದು ಮಾನವನ ಆರೋಗ್ಯಕ್ಕೆ ಅಪಾಯಕಾರಿ” ಎಂದು ತಿಳಿಸಿದೆ.

“ತೀವ್ರವಾದ ವಾಯುಮಾಲಿನ್ಯಕ್ಕೆ ಒಡ್ಡಿಕೊಳ್ಳುವುದರಿಂದ ಅಕಾಲಿಕ ಮರಣ, ಆಸ್ತಮಾ, ಅವಧಿಪೂರ್ವ ಜನನ, ಕಡಿಮೆ ಜನನ ತೂಕ, ಖಿನ್ನತೆ, ಸ್ಕಿಜೋಫ್ರೇನಿಯಾ, ಮಧುಮೇಹ, ಪಾರ್ಶ್ವವಾಯು ಮತ್ತು ಶ್ವಾಸಕೋಶದ ಕ್ಯಾನ್ಸರ್ ಸೇರಿದಂತೆ ಅನೇಕ ರೋಗಗಳಿಗೆ ದಾರಿ ಮಾಡಿಕೊಡುತ್ತದೆ” ಎಂದು ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...