ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಹಿಂದಿ ತೆರವು; ಮಾಹಿತಿ ಫಲಕಗಳಲ್ಲಿ ಕನ್ನಡ ಬಳಕೆ

Date:

ದಕ್ಷಿಣ ರಾಜ್ಯಗಳ ಮೇಲೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಹಿಂದಿ ಹೇರಿಕೆ ಮಾಡುತ್ತಿದೆ ಎಂಬ ಆರೋಪ ಮತ್ತು ಹಿಂದಿ ಹೇರಿಕೆ ವಿರುದ್ಧದ ಹೋರಾಟಗಳು ನಡೆಯುತ್ತಿವೆ. ಹಿಂದಿ ಹೇರಿಕೆ ವಿರುದ್ಧ ತಮಿಳುನಾಡು, ಕರ್ನಾಟಕದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಇದೇ ಹೊತ್ತಿನಲ್ಲಿ, ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಡಿಜಿಟಲ್‌ ಫಲಕಗಳಲ್ಲಿ ಹಿಂದಿಯನ್ನು ತೆಗೆದು, ಕನ್ನಡದಲ್ಲಿ ಮಾಹಿತಿ ನೀಡಲಾಗುತ್ತಿದೆ. ಏರ್‌ಪೋರ್ಟ್‌ನಲ್ಲಿ ಕನ್ನಡ ಫಲಕಗಳ ಅಳವಡಿಕೆಗೆ ಭಾರೀ ಮೆಚ್ಚುಗೆ, ಶ್ಲಾಘನೆ ವ್ಯಕ್ತವಾಗುತ್ತಿದೆ.

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ವಿಮಾನಗಳ ಆಗಮನ, ನಿರ್ಗಮನ ಸೇರಿದಂತೆ ಇನ್ನಿತರೆ ಮಾಹಿತಿ ನೀಡುವ ಡ್ಯಾಶ್‌ಬೋರ್ಡ್‌ಗಳಲ್ಲಿ ಹಿಂದಿಯನ್ನು ತೆಗೆಯಲಾಗಿದೆ. ಹಿಂದಿ ಬದಲಿಗೆ ಕನ್ನಡದಲ್ಲಿ ಮಾಹಿತಿ ನೀಡಲಾಗುತ್ತಿದೆ. ಸದ್ಯ, ವಿಮಾನ ನಿಲ್ದಾಣದಲ್ಲಿ ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಮಾಹಿತಿಯನ್ನು ಪ್ರಕಟಿಸಲಾಗುತ್ತಿದೆ. ಕನ್ನಡ ಅಳವಡಿಕೆ ಬಗ್ಗೆ ಕನ್ನಡಿಗರು ಶ್ಲಾಘಿಸುತ್ತಿರುವ ಹೊರತಾಗಿಯೂ ಅನ್ಯ ರಾಜ್ಯದವರು, ಅದರಲ್ಲೂ ಉತ್ತರ ಭಾರತದ ರಾಜ್ಯಗಳ ಪ್ರಯಾಣಿಕರು ಹಿಂದಿಯನ್ನು ಕೈಬಿಟ್ಟಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕನ್ನಡೇತರರಿಗೆ ಮಾಹಿತಿ ಪಡೆಯಲು ಸಮಸ್ಯೆಯಾಗುತ್ತದೆ ಎಂದು ಹೇಳುತ್ತಿದ್ದಾರೆ.

ವಿಮಾನ ನಿಲ್ದಾಣದಲ್ಲಿ ಪ್ರಕಟವಾಗುತ್ತಿದ್ದ ವೇಳಾಪಟ್ಟಿಯಲ್ಲಿ ಕನ್ನಡ ಭಾಷೆ ಬಳಸಿರುವ ಬಗ್ಗೆ ಟ್ವೀಟ್‌ ಮಾಡಿರುವ ನೆಟ್ಟಿಗರರೊಬ್ಬರು, “ಬೆಂಗಳೂರಿನ ಕೆಂಪೆಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್‌ 1ರಲ್ಲಿ ಒಂದು ಅಚ್ಚರಿ ಕಾದಿತ್ತು. ಎಲ್ಲ ಡಿಜಿಟಲ್‌ ಬೋರ್ಡ್‌ಗಳಲ್ಲಿ ವಿಮಾನಗಳ ಆಗಮನ-ನಿರ್ಗಮನದ ಕುರಿತ ಮಾಹಿತಿಗಳನ್ನು ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಮಾತ್ರವೇ ನೀಡಲಾಗುತ್ತಿತ್ತು” ಎಂದು ಅಚ್ಚರಿ ಮತ್ತು ಹರ್ಷ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕನ್ನಡ ನಾಡಿನಲ್ಲಿ ಕನ್ನಡ ಬಳಕೆ, ಉತ್ತೇಜನ ತಪ್ಪಲ್ಲ. ಇಲ್ಲಿ ಕನ್ನಡವೇ ಸಾರ್ವಭೌಮ. ಹಿಂದಿಯನ್ನು ಬಳಸದಿರುವ ಕ್ರಮ ಸರಿಯಾಗಿದೆ” ಎಂದು ಹಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಹಿಂದಿ ತೆಗೆದಿರುವ ಕುರಿತು ಆಕ್ಷೇಪಗಳೂ ವ್ಯಕ್ತವಾಗಿವೆ. “ಪ್ರಾದೇಶಿಕ ಭಾಷೆಯನ್ನು ಉತ್ತೇಜಿಸುವುದು ಮುಖ್ಯವಾದರೂ, ಪ್ರಮುಖ ಅಂತರರಾಷ್ಟ್ರೀಯ ದ್ವಾರದಲ್ಲಿ ಹಿಂದಿಯನ್ನು ಬಳಸದೇ ಇರುವುದು ತಪ್ಪು ಸಂದೇಶ ರವಾನಿಸುತ್ತದೆ. ಪ್ರವಾಸಿಗರು, ವಲಸಿಗರು ಹಾಗೂ ಇತರ ರಾಜ್ಯಗಳ ಪ್ರಯಾಣಿಕರ ಮೇಲೆ ಪರಿಣಾಮ ಬೀರಬಹುದು” ಎಂಬ ಅಭಿಪ್ರಾಯಗಳು ವ್ಯಕ್ತವಾಗಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...