ಬೆಂಗಳೂರು | ಪ್ರಾಧ್ಯಾಪಕರಿಗೆ ಜಾತಿ ನಿಂದನೆ: IIMB ನಿರ್ದೇಶಕ ಸೇರಿ 8 ಮಂದಿ ವಿರುದ್ಧ ಎಫ್ಐಆರ್

Date:

ಬೆಂಗಳೂರಿನ ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಮ್ಯಾನೇಜ್‌ಮೆಂಟ್‌ನಲ್ಲಿ (ಐಐಎಂಬಿ) ಪ್ರಾಧ್ಯಾಪಕರಿಗೆ ಜಾತಿ ನಿಂದನೆ ಮಾಡಿದ ಆರೋಪದ ಮೇಲೆ ಐಐಎಂಬಿ ನಿರ್ದೇಶಕ ಸೇರಿದಂತೆ 8 ಮಂದಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಬೆಂಗಳೂರಿನ ಬಿಳೇಕಹಳ್ಳಿಯಲ್ಲಿರುವ ಐಐಎಂಬಿಯ ಪ್ರಾಧ್ಯಾಪಕ ಗೋಪಾಲ್ ದಾಸ್ ನೀಡಿದ ದೂರಿನ ಆಧಾರದ ಮೇಲೆ ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಐಐಎಂಬಿ ನಿರ್ದೇಶಕ ರಿಶಿಕೇಶ್ ಟಿ. ಕೃಷ್ಣನ್‌ ಮತ್ತು ಇತರ ಸಿಬ್ಬಂದಿಗಳಾದ ದಿನೇಶ್‌ ಕುಮಾರ್‌, ಶೈನೇಶ್‌, ಶ್ರೀನಿವಾಸ್‌ ಪ್ರಖ, ಚೇತನ್‌ ಸುಬ್ರಹ್ಮಣ್ಯ, ಆಶೀಶ್‌ ಮಿಶ್ರಾ, ಶ್ರೀಲೀಲಾ, ರಾಹುಲ್‌ ಡೇ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಕಳೆದ ತಿಂಗಳು ಪ್ರಾಧ್ಯಾಪಕ ಗೋಪಾಲ್‌ ದಾಸ್ ನೀಡಿದ ದೂರಿನ ಮೇಲೆ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ (ಡಿಸಿಆರ್‌ಇ) ಎಡಿಜಿಪಿ ಅರುಣ್ ಚಕ್ರವರ್ತಿ ನೇತೃತ್ವದ ತಂಡ ತನಿಖೆ ನಡೆಸಿತ್ತು. ಈ ವೇಳೆ, ಗೋಪಾಲ್ ಅವರಿಗೆ ಐಐಎಂಬಿ ನಿರ್ದೇಶಕ ಮತ್ತು ಇತರರು ಜಾತಿ ನಿಂದನೆ ಮಾಡಿ, ಕಿರುಕುಳ ನೀಡಿರುವುದು ಮತ್ತು ಕೆಲಸದ ಸ್ಥಳದಿಂದ ಹೊರಗಿಟ್ಟಿರುವ ಬಗ್ಗೆ ಸಾಕ್ಷ್ಯಗಳು ದೊರೆತಿದ್ದವು. ಅವುಗಳ ಆಧಾರದ ಮೇಲೆ ಈಗ ಪ್ರಕರಣ ದಾಖಲಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...