ಮಹಿಳೆಯರಿಗೆ ಸುರಕ್ಷತೆ ಇಲ್ಲದಂತಾದ ಬೆಂಗಳೂರು ನಗರ – ನಿಷ್ಕ್ರಿಯ ಪೊಲೀಸ್ ಇಲಾಖೆ

Date:

ಮಂಗಳವಾರ ನಗರದ ಚರ್ಚ್ ಸ್ಟ್ರೀಟ್ ಕಚೇರಿವೊಂದಕ್ಕೆ ಏಕಾಏಕಿ ಪ್ರವೇಶಿಸಿದ ಕಾಮುಕನೊಬ್ಬ ಕಚೇರಿಯಲ್ಲಿದ್ದ ಮಹಿಳಾ ಉದ್ಯೋಗಿಗಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ಇದೀಗ ಬೆಳಕಿಗೆ ಬಂದಿದೆ. ಯುವಕನೊಬ್ಬ ಕಚೇರಿ ಪ್ರವೇಶಿಸಿ ಉದ್ಯೋಗಿಗೆ ನೇರವಾಗಿ ಲೈಂಗಿಕ ಚಟುವಟಿಕೆಗೆ ಬರಬೇಕೆಂದು ಪೀಡಿಸಿದ ಪ್ರಸಂಗ ನಿಜಕ್ಕೂ ಬೆಂಗಳೂರಿನ ಖ್ಯಾತಿಗೆ ಮಸಿ ಬೆಳೆಯುವಂತಿದೆ ಎಂದು ಎಎಪಿ ಆರೋಪಿಸಿದೆ.

ಈ ಪ್ರಕರಣವನ್ನು ಬೆಳಕಿಗೆ ತಂದ ಆಮ್ ಆದ್ಮಿ ಪಕ್ಷದ ಬೆಂಗಳೂರು ಮಾಧ್ಯಮ ಸಂಚಾಲಕ ಅನಿಲ್ ನಾಚಪ್ಪ ವಿಡಿಯೋ ಮತ್ತು ಆಡಿಯೋ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಘಟನೆ ನಡೆದ ತಕ್ಷಣವೇ ಹತ್ತಿರದ ಕಬ್ಬನ್ ಪಾರ್ಕ್ ಪೊಲೀಸರಿಗೆ ಕರೆ ಮಾಡಿದರು ಸಹ, ದೂರನ್ನು ನೀಡಿದರು ಸಹ ಪೊಲೀಸರು ತಕ್ಷಣ ಸಹಕರಿಸದೆ ಕೈ ಚೆಲ್ಲಿ ಕುಳಿತರು. ಸೂಕ್ತ ಸಮಯದಲ್ಲಿ ಸ್ಥಳಕ್ಕೆ ಆಗಮಿಸದೆ ನಂತರ ಒತ್ತಡ ಬಂದಾಗ ನಾಮ್ ಕೆ ವಾಸ್ತೆ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುವ ಕಾರ್ಯವನ್ನು ಕೈಗೊಂಡರು. ಹತ್ತಿರದ ರಸ್ತೆಯಲ್ಲಿ ಇದ್ದ ಸಿಸಿ ಕ್ಯಾಮರಾಗಳು ಕಾರ್ಯ ನಿರ್ವಹಣೆ ಮಾಡುತ್ತಿಲ್ಲವೆಂದು, ಆರೋಪಿಯನ್ನು ಹಿಡಿಯಲು ಸಾಕಷ್ಟು ಕಷ್ಟವಾಗುತ್ತದೆ ಎಂದು ತಿಳಿಸಿದ ವಿಚಾರ ಬೆಂಗಳೂರು ಪೊಲೀಸರು ಮಹಿಳಾ ಸುರಕ್ಷತೆಯ ವಿಚಾರದಲ್ಲಿ ಸಾಕಷ್ಟು ಬೇಜವಾಬ್ದಾರಿಯನ್ನು ಹೊಂದಿದ್ದಾರೆ ಎಂಬುದು ಸಾಬೀತಾಗುತ್ತದೆ ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ರಾಜ್ಯಾದ್ಯಂತ ಒಂದು ವಾರ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬೆಂಗಳೂರಿನ ಅನೇಕ ಪ್ರಮುಖ ರಸ್ತೆಗಳಲ್ಲಿ ಸುರಕ್ಷತೆಗಾಗಿ ಹಾಕಿರುವ ಸಿಸಿ ಕ್ಯಾಮೆರಾಗಳು ಸಂಪೂರ್ಣ ನಿಷ್ಕ್ರಿಯವಾಗಿರುವ ವಿಚಾರ ಪೊಲೀಸರಿಂದಲೇ ಬೆಳಕಿಗೆ ಬಂದಿದೆ. ಠಾಣೆಯಲ್ಲಿ ಯಾವುದೇ ದೂರು ನೀಡಿದರು ಸಿ ಸಿ ಕ್ಯಾಮೆರಾಗಳು ಕೆಲಸ ಮಾಡುತ್ತಿಲ್ಲವೆಂಬ ಉತ್ತರ ಸಿಗುತ್ತದೆ. ಇದು ನಿಜಕ್ಕೂ ಬೆಂಗಳೂರಿನ ಘನತೆಗೆ ಗೌರವ ತರುವಂತದ್ದಲ್ಲ, ಸರ್ಕಾರ ಕೋಟ್ಯಂತರ ರೂಪಾಯಿಗಳನ್ನು ವೆಚ್ಚ ಮಾಡಿ ನಗರ ಸುರಕ್ಷತೆಗೆ ಹಾಕಿರುವ ಸಿಸಿ ಕ್ಯಾಮೆರಾಗಳು ನಿಷ್ಕ್ರಿಯಗೊಂಡಿವೆ. ಹಾಗಾಗಲು ಸ್ಥಳೀಯ ರಾಜಕಾರಣಿಗಳ, ಅಧಿಕಾರಿಗಳ ಪಾಲೂ ಇದೆ. ಬೆಂಗಳೂರಿನ ಜನತೆಗೆ ಈ ಕ್ಯಾಮೆರಾಗಳಿಂದ ಯಾವುದೇ ಸುರಕ್ಷತೆ, ರಕ್ಷಣೆ ಲಭ್ಯವಿಲ್ಲದಂತಾಗಿದೆ. ಕೂಡಲೇ ಗೃಹ ಸಚಿವರು ತನಿಖೆಯನ್ನು ನಡೆಸಿ ಸಿಸಿ ಕ್ಯಾಮೆರಾಗಳ ಕಾರ್ಯ ಶೈಲಿಯನ್ನು ಪರಿಶೀಲಿಸಿ ಮಹಿಳೆಯರ ಸುರಕ್ಷತೆಗೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು” ಎಂದು ಆಗ್ರಹಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...