ಶಂಕಿತ ಉಗ್ರನ ಪತ್ತೆಗೆ ಲುಕ್‌ ಔಟ್ ನೋಟಿಸ್ ಹೊರಡಿಸಲು ಸಿದ್ಧತೆ ನಡೆಸಿದ ಬೆಂಗಳೂರು ಪೊಲೀಸರು

Date:

  • ಇಂಟರ್ ಪೋಲ್ ಮೂಲಕ ಜುನೈದ್ ಪತ್ತೆ ಮಾಡಲು ಸಿಸಿಬಿ ಪ್ರಯತ್ನ
  • ಐವರು ಶಂಕಿತ ಉಗ್ರರಿಗೆ ನಿರ್ದೇಶನ ನೀಡುತ್ತಿದ್ದ ಪ್ರಮುಖ ಆರೋಪಿ ಜುನೈದ್

ಬೆಂಗಳೂರಿನ 10 ಕಡೆ ಸ್ಫೋಟ ನಡೆಸಲು ಸಂಚು ರೂಪಿಸಿದ್ದ ಶಂಕಿತ ಐವರು ಉಗ್ರರ ಬಂಧನದ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರಮುಖ ಆರೋಪಿ ಜುನೈದ್ ಅಹ್ಮದ್ ಇನ್ನೂ ಪತ್ತೆಯಾಗಿಲ್ಲ. ಹಾಗಾಗಿ, ಆತನ ವಿರುದ್ಧ ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ಲುಕ್‌ ಔಟ್ ನೋಟಿಸ್‌ (ಎಲ್‌ಒಸಿ) ಹೊರಡಿಸಲು ಸಿದ್ಧತೆ ನಡೆಸಿದೆ.

ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಇತ್ತೀಚೆಗೆ ಭೇದಿಸಿದ ಭಯೋತ್ಪಾದನಾ ಪ್ರಕರಣಕ್ಕೆ ಸಂಬಂಧಿಸಿದಂತೆ. ಜುನೈದ್ ಎಲ್ಲಿದ್ದಾನೆ ಎಂಬ ಬಗ್ಗೆ ಇನ್ನೂ ತಿಳಿದುಬಂದಿಲ್ಲ. ಪ್ರಾಥಮಿಕ ತನಿಖೆಯಲ್ಲಿ ಪ್ರಮುಖ ಆರೋಪಿ ಕೊಲ್ಲಿ ರಾಷ್ಟ್ರದಲ್ಲಿದ್ದಾರೆ ಎಂದು ತಿಳಿದುಬಂದಿತ್ತು. ಇದೀಗ ಆತ ಇನ್ನೂ ಅಲ್ಲಿಯೇ ಇದ್ದಾನಾ ಎಂಬ ಬಗ್ಗೆ ಸ್ಪಷ್ಟವಾಗಿಲ್ಲ. ತನಿಖೆಯ ಭಾಗವಾಗಿ ಆತನ ವಿರುದ್ಧ ಎಲ್‌ಒಸಿ ಹೊರಡಿಸಲಾಗುವುದು ಎಂದು ಪೊಲೀಸ್ ಇಲಾಖೆಯ ಮೂಲಗಳು ತಿಳಿಸಿವೆ.

ಪೊಲೀಸರು ಸೈಯದ್ ಸುಹೇಲ್ ಖಾನ್, ಮೊಹಮ್ಮದ್ ಉಮರ್, ಜಾಹಿದ್ ತಬ್ರೇಜ್, ಸೈಯದ್ ಮುದಾಸಿರ್ ಪಾಷಾ ಮತ್ತು ಮೊಹಮ್ಮದ್ ಫಾಜಿಲ್ ಎಂಬ ಐವರು ಶಂಕಿತ ಉಗ್ರರನ್ನು ಬಂಧಿಸಿದ್ದರು. ಈ ಐವರು ಪ್ರಸ್ತುತ ಪೊಲೀಸ್ ವಶದಲ್ಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಐವರು ಶಂಕಿತ ಉಗ್ರರಿಗೆ ಪ್ರಮುಖ ಆರೋಪಿ ಜುನೈದ್ ನಿರ್ದೇಶನ ನೀಡುತ್ತಿದ್ದನು. ಈತನನ್ನು ಬಂಧಿಸಲು ಕಾನೂನು ಕ್ರಮ ಕೈಗೊಳ್ಳುವಂತೆ ಸಿಸಿಬಿ ಪೊಲೀಸರು, ಎನ್‌ಐಎ ಸಹಾಯ ಕೋರಿದ್ದು, ತನಿಖೆ ಭಾಗವಾಗಿ ಅಧಿಕಾರಿಗಳು ಲುಕ್‌ಔಟ್‌ ನೋಟಿಸ್‌ ಹೊರಡಿಸಲಿದ್ದಾರೆ.

ಸುಲ್ತಾನಪಾಳ್ಯದ ನಿವಾಸಿ ಜುನೈದ್ ಅಹ್ಮದ್, ಲಷ್ಕರ್-ಎ-ತೊಯ್ಬಾ ಸಂಘಟನೆಯ ಕಾರ್ಯಕರ್ತ ಮತ್ತು 2008 ರ ಬೆಂಗಳೂರು ಸರಣಿ ಸ್ಫೋಟದ ಪ್ರಮುಖ ಆರೋಪಿ. ಈತನು ಬಾಂಬ್‌ ಸ್ಪೋಟ್‌ದ ಪ್ರಮುಖ ಆರೋಪಿ ಟಿ. ನಜೀರ್‌ ಆಪ್ತನಾಗಿದ್ದನು. ಅಪಹರಣ ಮತ್ತು ಕೊಲೆ ಪ್ರಕರಣದಲ್ಲಿ ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿದ್ದಾಗ ಸಂಪರ್ಕಕ್ಕೆ ಬಂದಿದ್ದನು ಎಂದು ತನಿಖೆಯಿಂದ ತಿಳಿದುಬಂದಿದೆ.

ಜುನೈದ್ ಐವರು ಶಂಕಿತರಿಗೆ ದೇಶ ವಿರೋಧಿ ಚಟುವಟಿಕೆಗಳನ್ನು ನಡೆಸಲು ಮಾರ್ಗದರ್ಶನ ನೀಡಿ, ಅವರಿಗೆ ಕೃತ್ಯ ನಡೆಸಲು ಪ್ರೇರೇಪಿಸುತ್ತಿದ್ದನು ಎಂದು ತಿಳಿದುಬಂದಿದೆ.

ಈಗಾಗಲೇ ಪೊಲೀಸ್‌ ವಶದಲ್ಲಿರುವ ಐವರು ಶಂಕಿತರನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದು, ಜುನೈದ್ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕಲು ಪ್ರಯತ್ನಿಸುತ್ತಿದ್ದಾರೆ. ಅಲ್ಲದೆ, ಜುನೈದ್‌ನ ಪ್ರಸ್ತುತ ಸ್ಥಳವನ್ನು ತಿಳಿಯದಿರುವುದು ಸಿಸಿಬಿಗೆ ಇಂಟರ್‌ಪೋಲ್ ಅನ್ನು ಸಂಪರ್ಕಿಸಲು ಅಡ್ಡಿಯಾಗಿದೆ.

“ನಾವು ಇಂಟರ್‌ಪೋಲ್ ಅನ್ನು ಸಂಪರ್ಕಿಸುವ ಹಂತವನ್ನು ತಲುಪಿಲ್ಲವಾದರೂ, ಅವನು ಇರುವ ಸ್ಥಳವನ್ನು ತಿಳಿದುಕೊಳ್ಳುವುದು ಮುಖ್ಯವಾಗಿದೆ. ಏಕೆಂದರೆ ನಾವು ಅವನು ನಿರ್ದಿಷ್ಟ ದೇಶದಲ್ಲಿ ಇದ್ದಾನೆ ಎಂಬ ಕೆಲವು ನಿರ್ದಿಷ್ಟ ವಿವರಗಳನ್ನು ಹೊಂದಿದ್ದರೆ ಮಾತ್ರ ಅವನನ್ನು ಬಂಧಿಸಲು ಇಂಟರ್‌ಪೋಲ್ ಸಹಾಯ ಪಡೆಯಬಹುದು. ಅಲ್ಲಿಯವರೆಗೆ, ನಾವು ಇಂಟರ್‌ಪೋಲ್ ಅನ್ನು ಸಂಪರ್ಕಿಸಲು ಸಾಧ್ಯವಿಲ್ಲ” ಎಂದು ಅಧಿಕಾರಿಯೊಬ್ಬರು ಹೇಳಿದರು.

ಈ ಸುದ್ದಿ ಓದಿದ್ದೀರಾ? ರಾಜ್ಯಾದ್ಯಂತ ಇನ್ನೂ ನಾಲ್ಕು ದಿನ ಮಳೆ ಮುಂದುವರೆಯುವ ಸಾಧ್ಯತೆ: ಹವಾಮಾನ ಇಲಾಖೆ

ಜುನೈದ್​ ಗರ್ಲ್​ ಫ್ರೆಂಡ್ ಪತ್ತೆ ಹಚ್ಚಿದ ಸಿಸಿಬಿ ಪೊಲೀಸರು

ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿ ಜುನೈದ್​ ಪತ್ತೆಗೆ ತನಿಖಾ ತಂಡ ಮಾಹಿತಿ ಕಲೆಹಾಕುತ್ತಿದ್ದು, ಈ ವೇಳೆ ಬೆಂಗಳೂರಿನಲ್ಲಿ ಜುನೈದ್​ಗೆ ಗರ್ಲ್​ ಫ್ರೆಂಡ್ ಇರುವ ಅಂಶ ಬೆಳಕಿಗೆ ಬಂದಿದೆ.

ಸಿಸಿಬಿ ಪೊಲೀಸರು ಜುನೈದ್‌ ಗರ್ಲ್‌ಫ್ರೆಂಡ್‌ ಅನ್ನು ಪತ್ತೆ ಮಾಡಿ ಮಾಹಿತಿ ಕಲೆಹಾಕಿದ್ದು, ಜುನೈದ್​ ಇರುವ ಸ್ಥಳದ ಬಗ್ಗೆ ಸಿಸಿಬಿ ಪೊಲೀಸರು ಮಾಹಿತಿ ಕಲೆಹಾಕಿದ್ದಾರೆ.

ಜುನೈದ್‌ 2021ರಲ್ಲಿ ಬೆಂಗಳೂರನ್ನು ತೊರೆದು ವಿದೇಶದಲ್ಲಿ ವಾಸವಾಗಿದ್ದನು. ಆದರೂ ನಿರಂತರವಾಗಿ ಬೆಂಗಳೂರಿನಲ್ಲಿರುವ ತನ್ನ ಗರ್ಲ್​ ಫ್ರೆಂಡ್​ ಜತೆಗೆ ಸಂಪರ್ಕದಲ್ಲಿದ್ದನು. ಶಂಕಿತ ಉಗ್ರರು ಪೊಲೀಸರಿಗೆ ಸಿಕ್ಕ ಬಳಿಕ ಯುವತಿಯೊಂದಿಗೆ ಜುನೈದ್‌ ಸಂಪರ್ಕ ಮಾಡುವುದನ್ನು ನಿಲ್ಲಿಸಿದ್ದಾನೆ.

ಜುನೈದ್ ಟೆರರ್ ಆ್ಯಕ್ಟಿವಿಟಿ ಬಗ್ಗೆ ಯುವತಿಗೆ ಮಾಹಿತಿ ಇಲ್ಲ. ಆದರೆ, ಈ ಹಿಂದೆ ಆಕೆಯ ಜತೆಗೆ ಜುನೈದ್ ಹೇಗಿದ್ದನು? ಆತನ ವರ್ತನೆಗಳು ಹೇಗಿದ್ದವು ಎಂಬ ಬಗ್ಗೆ ಸಿಸಿಬಿ ಅಧಿಕಾರಿಗಳಿಗೆ ಯುವತಿ ಮಾಹಿತಿ ನೀಡಿದ್ದಾಳೆ.

ದುಬೈನಿಂದ ಮಿಡಲ್ ಈಸ್ಟ್ ನಲ್ಲಿರುವ ಅಝರ್​ಬೈಜಾನ್​ ದೇಶದ ಬಾಕು ಎಂಬ ನಗರದಲ್ಲಿ ಪ್ರಮುಖ ಆರೋಪಿ ಇರುವ ಬಗ್ಗೆ ಮಾಹಿತಿ ಸಿಕ್ಕಿದ್ದು, ಸದ್ಯ ಇಂಟರ್ ಪೋಲ್ ಮೂಲಕ ಜುನೈದ್ ಪತ್ತೆಮಾಡಲು ಸಿಸಿಬಿ ಪ್ರಯತ್ನಿಸುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...