ಬೆಂಗಳೂರು | ಸಂಚಾರ ಪೊಲೀಸರ ಹೆಸರಲ್ಲಿ ಸೈಬರ್‌ ವಂಚನೆ; ₹2.32 ಲಕ್ಷ ಕಳೆದುಕೊಂಡ ಟೆಕ್ಕಿ

Date:

ಸಂಚಾರ ಪೊಲೀಸರ ಸೋಗಿನಲ್ಲಿ ದಂಡ ಕಟ್ಟಿಸಿಕೊಳ್ಳುವ ನೆಪದಲ್ಲಿ ಟೆಕ್ಕಿಯೊಬ್ಬರಿಂದ ಸುಮಾರು ₹2.32 ಲಕ್ಷ ದೋಚಿರುವ ಘಟನೆ ಬೆಂಗಳೂರು ನಗರದಲ್ಲಿ ವರದಿಯಾಗಿದೆ.

ಸಂಚಾರ ಪೊಲೀಸರ ಹೆಸರಲ್ಲಿ ಸೈಬರ್ ವಂಚಕರು ಕಳಿಸಿದ ಸಂದೇಶ ನಂಬಿದ ಟೆಕ್ಕಿಯೊಬ್ಬರು, ಸಂಚಾರ ನಿಯಮ ಉಲ್ಲಂಘನೆಗೆ ಕೇವಲ ₹500 ದಂಡ ಪಾವತಿಸಲು ಹೋಗಿ ಲಕ್ಷಾಂತರ ಹಣ ಕಳೆದುಕೊಂಡಿದ್ದು, ಸದ್ಯ ವೈಟ್‌ಫೀಲ್ಡ್ ಸಿಇಎನ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ.

ದೂರುದಾರರ ಮೊಬೈಲ್ ಸಂಖ್ಯೆಗೆ ಜ.26ರಂದು ಸಂದೇಶ ಕಳಿಸಿದ್ದ ವಂಚಕರು, ಸಂಚಾರ ದಂಡ ಪಾವತಿಸುವಂತೆ ಸೂಚಿಸಿ ಲಿಂಕ್‌ವೊಂದನ್ನು ಕಳಿಸಿದ್ದಾರೆ. ಅದನ್ನು ನಿಜವೆಂದು ನಂಬಿದ್ದ ದೂರುದಾರರು ತಮ್ಮ ಕ್ರೆಡಿಟ್ ಕಾರ್ಡ್ ಸಂಖ್ಯೆ ಹಾಗೂ ಸಿವಿವಿ ನಂಬರ್ ನಮೂದಿಸಿ ಪಾವತಿಸಿದಾಗ 2.23 ಲಕ್ಷ ರೂಪಾಯಿ ವಂಚಕರ ಖಾತೆಗೆ ವರ್ಗಾವಣೆಯಾಗಿದೆ. ತಕ್ಷಣ ಎಚ್ಚೆತ್ತ ದೂರುದಾರರು ವೈಟ್‌ಫೀಲ್ಡ್ ಸಿಇಎನ್ ಠಾಣೆ ಮೆಟ್ಟಿಲೇರಿದ್ದಾರೆ. ಸದ್ಯ ಪ್ರಕರಣ ದಾಖಲಾಗಿದ್ದು, ಹಣ ವರ್ಗಾವಣೆಯಾದ ಖಾತೆಯ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಪೊಲೀಸರರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಾಗಾದರೆ ಸೈಬರ್‌ ವಂಚನೆಯಿಂದ ಸೇಫ್‌ ಆಗಿರಲು ಸಾರ್ವಜನಿಕರು ಏನು ಮಾಡಬೇಕು?

  • ಟ್ರಾಫಿಕ್‌ ದಂಡ, ಬ್ಯಾಂಕ್‌, ಕೊರಿಯರ್‌, KYC ಹೆಸರಿನಲ್ಲಿ ಬಂದ ಅನಗತ್ಯ SMS/WhatsApp ಲಿಂಕ್‌ಗಳನ್ನು ಕ್ಲಿಕ್ ಮಾಡಬೇಡಿ
  • ಸರ್ಕಾರದ ಇಲಾಖೆ ಎಂದು ಬಂದರೂ ಕೂಡಾ ಅಧಿಕೃತ ವೆಬ್‌ಸೈಟ್ ಅಥವಾ ಆಪ್ ಮೂಲಕವೇ ಪರಿಶೀಲಿಸಿ
  • ʼನಿಮ್ಮ ಖಾತೆ ಬ್ಲಾಕ್ʼ, ʼಇಂದು ಪಾವತಿ ಮಾಡಲೇಬೇಕುʼ ಎನ್ನುವ ಭೀತಿಯ ಭಾಷೆ ಸಾಮಾನ್ಯವಾಗಿ ಮೋಸ
  • OTP, CVV, ಕಾರ್ಡ್‌ ನಂಬರ್, UPI ಪಿನ್ ಯಾರಿಗೂ ಹೇಳಬೇಡಿ
  • Parivahan / Karnataka One / ಬೆಂಗಳೂರು ಟ್ರಾಫಿಕ್ ಪೊಲೀಸ್ ಅಧಿಕೃತ ವೆಬ್‌ಸೈಟ್ ಅಥವಾ ಆಪ್
  • ಯಾವುದೇ ಬಂದ ಲಿಂಕ್‌ ನಂಬದೇ, ನೀವು ಸ್ವತಃ ಸೈಟ್‌ ತೆರೆಯಿರಿ
  • ಬಲವಾದ ಪಾಸ್‌ವರ್ಡ್‌, 2–Factor Authentication (2FA) ಬಳಸಿ
  • ಒಂದೇ ಪಾಸ್‌ವರ್ಡ್‌ ಅನ್ನು ಎಲ್ಲ ಖಾತೆಗಳಿಗೆ ಬಳಸಬೇಡಿ
  • ಆಪ್‌ಗಳನ್ನು Play Store / App Store ನಿಂದ ಮಾತ್ರ ಡೌನ್‌ಲೋಡ್ ಮಾಡಿ
  • ಅಜ್ಞಾತ APK ಫೈಲ್‌ಗಳನ್ನು ಇನ್‌ಸ್ಟಾಲ್ ಮಾಡಬೇಡಿ
  • ಫೋನ್‌, ಲ್ಯಾಪ್‌ಟಾಪ್‌ಗಳನ್ನು ನಿಯಮಿತವಾಗಿ ಅಪ್‌ಡೇಟ್ ಮಾಡಿ
  • ಹಣ ಹೋದರೆ, ತಕ್ಷಣ 1930 ಸೈಬರ್‌ ಕ್ರೈಂ ಹೆಲ್ಪ್‌ಲೈನ್‌ಗೆ ಕರೆ ಮಾಡಿ
  • ಅಥವಾ cybercrime.gov.in ನಲ್ಲಿ ದೂರು ದಾಖಲಿಸಿ
  • ವಿಳಂಬವಾದರೆ ಹಣ ವಾಪಸು ಸಿಗುವ ಸಾಧ್ಯತೆ ಕಡಿಮೆ
  • ಕುಟುಂಬದವರು, ಹಿರಿಯ ನಾಗರಿಕರು, ಮಕ್ಕಳು ಎಲ್ಲರಿಗೂ ಈ ಮಾಹಿತಿ ಹಂಚಿ ಎನ್ನುವ ಸಂದೇಶಕ್ಕೆ ತಲೆಕೊಡಬೇಡಿ. ಮೋಸಗಾರರ ಅಸ್ತ್ರ ಅದೇ

ಇದನ್ನೂ ಓದಿ: ಈ ದಿನ ಸಂಪಾದಕೀಯ | ರಾಜ್ಯ ಪೊಲೀಸ್ ವ್ಯವಸ್ಥೆ ಕೆಡಲು ಕಾರಣರಾರು?

ನೆನಪಿಡಿ: ಸರ್ಕಾರ ಅಥವಾ ಬ್ಯಾಂಕ್‌ OTP ಕೇಳುವುದಿಲ್ಲ. ಲಿಂಕ್‌ ಒತ್ತಲು ಒತ್ತಾಯಿಸುವುದಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...