ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

Date:

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎರಡೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ. ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.

ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ‘ಒಳಮೀಸಲಾತಿ ಹೋರಾಟ ಸಮಿತಿ’ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯುತ್ತಿದ್ದು, ಸಾವಿರಾರು ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೆ ಮೊಳಗಿಸಿದ್ದಾರೆ.

“ಸರ್ಕಾರವು ತರಾತುರಿಯಲ್ಲಿ ಹೊರಡಿಸಿರುವ ನೇಮಕಾತಿ ಆದೇಶವನ್ನು ಹಿಂಪಡೆಯಬೇಕು. ಗುರುವಾರದ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಅಳವಡಿಕೆಗೆ ತೀರ್ಮಾನಿಸಿ, ಕೂಡಲೇ ಆದೇಶ ಹೊರಡಿಸಬೇಕು” ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯದಲ್ಲಿ ದಲಿತರ ಜನಸಂಖ್ಯೆ 18% ನಷ್ಟಿದೆ. ಹಾಗಾಗಿಯೇ ನಿವೃತ್ತ ನ್ಯಾಯಮರ್ತಿ ನಾಗಮೋಹನ್‌ದಾಸ್‌ರವರು 17%ಗೆ ಪರಿಶಿಷ್ಟ ಜಾತಿಗಳ ಮೀಸಲಾತಿ ಹೆಚ್ಚಿಸಲು ಶಿಫಾರಸ್ಸು ಮಾಡಿರುತ್ತಾರೆ ಮತ್ತು ಅದು ಜಾರಿಯಲ್ಲಿದೆ. ಈ ಸಾಮಾಜಿಕ ನ್ಯಾಯದ ನೀತಿಯನ್ನು ನ್ಯಾಯಾಂಗೀಯ ಸವಾಲುಗಳಿಂದ ರಕ್ಷಿಸಲು ರಾಜ್ಯದ 56% ಮೀಸಲಾತಿ ಸಂರಕ್ಷಣೆಗಾಗಿ ಕೇಂದ್ರ ರ‍್ಕಾರಕ್ಕೆ ಶಿಫಾರಸ್ಸು ಮಾಡಿ, ರ‍್ವ ಪಕ್ಷಗಳ ನಿಯೋಗದೊಂದಿಗೆ ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿ, ಸಂವಿಧಾನದ 9ನೇ ಅನುಸೂಚಿಯಲ್ಲಿ ಸೇರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

“ನೇರ ನೇಮಕಾತಿ, ಬಡ್ತಿ ನೇಮಕಾತಿ ಮತ್ತು ಮುಂಬಡ್ತಿ ಬ್ಯಾಕ್‌ಲಾಗ್ ಹುದ್ದೆಗಳ ನೇಮಕಾತಿಯಲ್ಲಿ 2001ರ ಹಿಂದಿನ ಬ್ಯಾಕ್‌ಲಾಗ್ ಹುದ್ದೆಗಳಿಗೆ ಮಾತ್ರ ಅನ್ವಯಿಸುತ್ತಿದೆ. ಈ ನಿಯಮವನ್ನು 2001ರ ನಂತರದ ಬ್ಯಾಕ್‌ಲಾಗ್ ಹುದ್ದೆಗಳಿಗೂ ಮುಂದುವರೆಸಬೇಕು ಹಾಗೂ ಒಳ ಮೀಸಲಾತಿ ಜಾರಿಯಾಗಬೇಕು. ಎಸ್‌ಇಪಿ-ಟಿಎಸ್‌ಪಿ ಅನುದಾನ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಒಳಮೀಸಲಾತಿ ಸಂಪೂರ್ಣವಾಗಿ ಜಾರಿಯಾಗಬೇಕು” ಎಂದು ಆಗ್ರಹಿಸಿದ್ದಾರೆ.

“ನೇಮಕಾತಿಗಳಲ್ಲಿ ವಿಶ್ವವಿದ್ಯಾಲಯಗಳು ಒಂದು ಘಟಕ ಎಂದು ಪರಿಗಣಿಸಬೇಕೆನ್ನುವ ಪ್ರಸ್ತಾವನೆಯನ್ನು ಕೈಬಿಡಬೇಕು. ಅಲೆಮಾರಿ ಸಮುದಾಯಗಳಿಗೆ 1% ಪ್ರತ್ಯೇಕ ಮೀಸಲಾತಿ ನೀಡಲೇಬೇಕು. ಸಮಾಜ ಕಲ್ಯಾಣವನ್ನು ಸಮರ್ಪಕವಾಗಿ ನಿರ್ವಹಿಸದೇ ಪಕ್ಷಪಾತಿಯಾಗಿ ನಡೆದುಕೊಳ್ಳುತ್ತಿರುವ ಸಚಿವ ಎಚ್.ಸಿ. ಮಹಾದೇವಪ್ಪ ಅವರನ್ನು ಕೂಡಲೇ ಬದಲಾಯಿಸಬೇಕು” ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ವೇದಿಕೆಯಲ್ಲಿ ಮಾದರ ಚೆನ್ನಯ್ಯ ಸ್ವಾಮಿ, ಮಾರಸಂದ್ರ ಮುನಿಯಪ್ಪ, ಹನುಮೇಗೌಡ ಬೀರರಕಲ್ಲು, ಎಸ್.ಮಾರಪ್ಪ , ಬಸವರಾಜ್ ಕೌತಾಳ್, ಅಂಬಣ್ಣ ಅರೋಲಿಕರ್, ನರಸಪ್ಪ ದಂಡೋರ, ಬಿ.ಆರ್. ಭಾಸ್ಕರ್ ಪ್ರಸಾದ್, ಹರಿರಾಮ್, ಡಾ. ಪಿ.ಮರ್ತಿ, ಶಿವರಾಯ ಅಕ್ಕರಕಿ, ಕೇಶವಮೂರ್ತಿ, ಫರ್ನಾಂಡಿಸ್ ಇಪ್ಪಳಗಾಂವ್, ಕರಿಯಪ್ಪ ಗುಡಿಮನಿ, ಎಂ. ಶಕರಪ್ಪ, ಜೆ.ಬಿ. ರಾಜು, ಬಿ.ಪಿ. ಪ್ರಕಾಶ್ ಮರ್ತಿ, ರವಿಕುಮಾರ್ ಮರಡಿಪುರ, ನಾಗೇಂದ್ರ ಅರಕಲವಾಡಿ , ಕೃಷ್ಣಪ್ಪ ಕನಕೇನಹಳ್ಳಿ, ವೈ.ಸಿ. ಕಾಂಬ್ಳೆ , ಪಾವಗಡ ಶ್ರೀರಾಮ್, ಆರ್. ಮುನಿಯಪ್ಪ, ಗುರುಮರ್ತಿ ಶಿವಮೊಗ್ಗ , ಪ್ರಭುರಾಜ್ ಕೊಡ್ಲಿ ,  ವೇಣುಗೋಪಾಲ್ ಮೌರ್ಯ,   ಚಂದ್ರು ತರಹುಣಿಸೆ, ಹನುಮೇಶ್ ಗುಂಡೂರು, ಕೆ.ಬಿ. ವಾಸು, ಚಾವಡಿ ಲೋಕೇಶ್, ಪ್ರೇಮ ಕಲ್ಕೇರಿ, ಉಮಾದೇವಿ, ಸುಧಾರಾಣಿ, ಸುಬ್ಬಣ್ಣ ಹೊಸಕೋಟೆ, ಸುಬ್ಬರಾಯುಡು , ತ್ಯಾಗರಾಜು, ಎಂ.ಸಿ. ಶ್ರೀನಿವಾಸ್, ರಮೇಶ್ ಚಕ್ರವರ್ತಿ, ವೈ.ಕೆ. ಬಾಲಕೃಷ್ಣ ಇದ್ದರು. 

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...