ಬೆಂಗಳೂರು | ಮುಸ್ಲಿಮರು ವಾಸಿಸುವ ಪ್ರದೇಶವನ್ನು ಪಾಕಿಸ್ತಾನ ಎಂದ ಹೈಕೋರ್ಟ್‌ ನ್ಯಾಯಾಧೀಶ

Date:

ಬೆಂಗಳೂರಿನಲ್ಲಿ ಮುಸ್ಲಿಂ ಸಮುದಾಯದ ಜನರು ಹೆಚ್ಚಾಗಿ ವಾಸಿಸುತ್ತಿರುವ ಗೋರಿಪಾಳ್ಯ ಪ್ರದೇಶವನ್ನು ಉಲ್ಲೇಖಿಸಿ ಮಾತನಾಡಿದ್ದ ಕರ್ನಾಟಕ ಹೈಕೋರ್ಟ್‌ ನ್ಯಾಯಾಧೀಶ ವೇದವ್ಯಾಸಾಚಾರ್ ಶ್ರೀಷಾನಂದ ಅವರು, ”ಗೋರಿಪಾಳ್ಯವು ಪಾಕಿಸ್ತಾನವಾಗಿದೆ. ಅದು ಭಾರತದಲ್ಲಿಲ್ಲ” ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ನ್ಯಾಯಾಧೀಶರೇ ಧಾರ್ಮಿಕ ದ್ವೇಷ ಬಿತ್ತುತ್ತಿದ್ದಾರೆ ಎಂಬ ಆರೋಪ ಮುನ್ನೆಲೆಗೆ ಬಂದಿದೆ.

ನ್ಯಾಯಾಧೀಶರು ಪ್ರಕರಣವೊಂದರ ವಿಚಾರಣೆ ವೇಳೆ ಗೋರಿಪಾಳ್ಯವನ್ನು ಪಾಕಿಸ್ತಾನ ಎಂದು ಕರೆದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ, ”ಮೈಸೂರು ರಸ್ತೆ ಮೇಲುಸೇತುವೆಗೆ ಹೋಗಿ ನೋಡಿ, ಪ್ರತಿ ಆಟೋರಿಕ್ಷಾದಲ್ಲೂ 10 ಮಂದಿಯಿರುತ್ತಾರೆ. ಇಲ್ಲಿ ಕಾನೂನು ಅನ್ವಯಿಸುವುದಿಲ್ಲ. ಮೈಸೂರು ಮೇಲ್ಸೇತುವೆಯು ಗೋರಿಪಾಳ್ಯದಿಂದ ಎಡಕ್ಕೆ ಮಾರುಕಟ್ಟೆಗೆ ತೆರಳುತ್ತದೆ. ಇದು ಪಾಕಿಸ್ತಾನದಲ್ಲಿದೆ, ಭಾರತದಲ್ಲಲ್ಲ” ಎಂದಿದ್ದಾರೆ.

“ಅಲ್ಲಿಗೆ (ಗೋರಿಪಾಳ್ಯ ಪ್ರದೇಶ) ಎಷ್ಟೇ ಕಟ್ಟುನಿಟ್ಟಿನ ಪೊಲೀಸ್ ಅಧಿಕಾರಿಯನ್ನು ನೇಮಕ ಮಾಡಿದರೂ, ಅಷ್ಟೇ” ಎಂದು ನ್ಯಾಯಾಧೀಶ ವೇದವ್ಯಾಸಾಚಾರ್ ಶ್ರೀಷಾನಂದ ಸಾಯಿ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅವರ ಹೇಳಿಕೆ ವಿರುದ್ಧ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಂವಿಧಾನಿಕ ಹುದ್ದೆಯಲ್ಲಿರುವ, ಅದರಲ್ಲೂ ಜಾತ್ಯತೀತವಾಗಿ ವರ್ತಿಸಬೇಕಾದ ನ್ಯಾಯಾಧೀಶರು ಇಂತಹ ಹೇಳಿಕೆ ನೀಡುವುದು ಅವರ ಹುದ್ದೆ ಮೇಲಿನ ಭರವಸೆಯನ್ನು ಕಳಚುತ್ತದೆ ಎಂದಿದ್ದಾರೆ.

”ನ್ಯಾಯಾಧೀಶರು ಬಳಸಿದ ಪದಗಳು ಅತ್ಯಂತ ಅನಪೇಕ್ಷಿತವಾಗಿವೆ. ಕಾನೂನನ್ನು ಎತ್ತಿಹಿಡಿಯಬೇಕಾದವರು ಸಹ ಭಾರತೀಯ ಮುಸ್ಲಿಮರನ್ನು ಅಮಾನವೀಯರನ್ನಾಗಿ ಉಲ್ಲೇಖಿಸುವುದು ಸರಿಯಲ್ಲ. ಇದು ಭಾರತೀಯ ಮುಸ್ಲಿಮರನ್ನು ವ್ಯವಸ್ಥಿತವಾಗಿ ಅಮಾನವೀಕರಿಸುವುದರ ಭಾಗವಾಗಿದೆ” ಎಂದು ವಸೀಮ್ ಎಂಬವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

”ನ್ಯಾಯಾಂಗದಲ್ಲಿನ ವ್ಯಕ್ತಿಯೊಬ್ಬರು ಈ ರೀತಿ ಮಾಡಿದರೆ, ಭಾರತೀಯ ಮುಸ್ಲಿಮರೊಂದಿಗೆ ಸಾಮಾನ್ಯ ಜನರು ಮತ್ತಷ್ಟು ಅಮಾನುಷವಾಗಿ ನಡೆದುಕೊಳ್ಳುವಂತಾಗುತ್ತದೆ. ನ್ಯಾಯಾಂಗ, ಪೊಲೀಸ್, ಶೈಕ್ಷಣಿಕ ಸಂಸ್ಥೆಗಳು, ಮಾಧ್ಯಮಗಳು, ಸರಕಾರ ಹಾಗೂ ಸಮಾಜದ ದೊಡ್ಡ ಸಂಖ್ಯೆಯು ಭಾರತೀಯ ಮುಸ್ಲಿಮರನ್ನು ಅವರು ಮುಸ್ಲಿಮರು ಎಂಬ ಕಾರಣಕ್ಕೇ ಹೀಗೆ ನಡೆಸಿಕೊಳ್ಳುತ್ತಿದೆ” ಎಂದು ಅವರು ಕಿಡಿಕಾರಿದ್ದಾರೆ.

ಒಂದು ತಿಂಗಳ ಹಿಂದೆ ಕಲಾಪದ ವೇಳೆ ನ್ಯಾಯಾಧೀಶರು ಈ ಹೇಳಿಕೆ ನೀಡಿರುವುದಾಗಿ ಆಲ್ಟ್‌ನ್ಯೂಸ್‌ನ ಪತ್ರಕರ್ತ ಮೊಹಮ್ಮದ್ ಝುಬೇರ್ ಮಾಹಿತಿ ಹಂಚಿಕೊಂಡಿದ್ದು, ಈ ವಿಡಿಯೋವನ್ನು ಈಗ ಬಿಜೆಪಿ ಸದಸ್ಯರು ಸೇರಿದಂತೆ ಬಲಪಂಥೀಯ ಖಾತೆಗಳು ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಲು ಬಳಸಿಕೊಳ್ಳುತ್ತಿವೆ ಎಂದು ತಿಳಿಸಿದ್ದಾರೆ.

“ನ್ಯಾಯಪೀಠದಲ್ಲಿ ಕುಳಿತಿರುವ ಆ ವ್ಯಕ್ತಿಗೆ ನಿಜಕ್ಕೂ ನ್ಯಾಯ ಪ್ರಜ್ಞೆ ಇದ್ದಿದ್ದರೆ ಗೋರಿಪಾಳ್ಯ, ಮಾರ್ಕೆಟ್ ರೋಡ್‌ಗಳಿಗೆ ಹೋದಾಗ ಅಲ್ಲಿ ‘ಪಾಕಿಸ್ತಾನ’ ಕಾಣುತ್ತಿರಲಿಲ್ಲ. ಬದಲಿಗೆ ಆ ಸ್ಲಂಗಳಲ್ಲಿ ಹೀನಾಯವಾಗಿ ಬದುಕುತ್ತಿರುವ ಮುಸ್ಲಿಮರ ಬಡತನ, ಹಸಿವು, ನಿರುದ್ಯೋಗ, ರೋಗ ರುಜಿನಗಳ ಘೋರ ಸ್ಥಿತಿ ಕಾಣುತ್ತಿತ್ತು. ಅಲ್ಲಿನ ಇಕ್ಕಟ್ಟಾದ ಗಲ್ಲಿಗಳು, ನಾಯಿ ಗೂಡಿನಂತಹ ವಸತಿಗಳು, ತೆರೆದ ಚರಂಡಿ, ಕೆಟ್ಟ ರಸ್ತೆಗಳ ದರ್ಶನ ಆಗುತ್ತಿತ್ತು. ಭಾರತದ ಮುಸ್ಲಿಮರನ್ನು ಇಲ್ಲಿನ ಪ್ರಭುತ್ವ ನಡೆಸಿಕೊಳ್ಳುತ್ತಿರುವ ರೀತಿ, ಮುಸ್ಲಿಮರ ಆರ್ಥಿಕ, ಸಾಮಾಜಿಕ ಸ್ಥಿತಿಗತಿಗಳ ಸ್ಥೂಲ ಚಿತ್ರಣ ದೊರಕುತ್ತಿತ್ತು. ಆದರೇನು ಮಾಡುವುದು, ಈ ‘ನ್ಯಾಯಾಧೀಶ’ನಿಗೆ ಸಾಮಾಜಿಕ ನ್ಯಾಯದ ಸಾಮಾನ್ಯ ಜ್ಞಾನವೂ ಇಲ್ಲದಂತಿದೆ. ಬಹುಷಃ ಇವರು ಸಂಘದ ಪ್ರಾಡಕ್ಟ್ ಇರಬಹುದು. ಇಂತವರು ನ್ಯಾಯ ಪೀಠದಲ್ಲಿ ಮುಂದುವರಿಯಕೂಡದು‌. ಅದು ಭಾರತದ ನ್ಯಾಯಾಂಗಕ್ಕೆ ದೊಡ್ಡ ಅವಮಾನ. ನ್ಯಾಯ ಪೀಠದಲ್ಲಿ ಕೂತು ಮುಸ್ಲಿಮರ ಕುರಿತಾಗಿ ಆತ ಆಡಿರುವ ಮಾತುಗಳು ಜನಾಂಗ ದ್ವೇಷದಿಂದ ಕೂಡಿದೆ. ಇದು ಅಕ್ಷಮ್ಯ” ಎಂದು ಸಾಮಾಜಿಕ ಕಾರ್ಯಕರ್ತ ಮುನೀರ್ ಕಾಟಿಪಳ್ಳ ಕಿಡಿಕಾರಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...