ಬೆಂಗಳೂರು | ‘ನಿನಗಾಗಿ ನನ್ನ ಹೆಂಡತಿಯನ್ನು ಕೊಂದಿದ್ದೇನೆ’: ಪ್ರೇಯಸಿಗೆ ಸಂದೇಶ ಕಳಿಸಿದ್ದ ವೈದ್ಯ

Date:

ವೈದ್ಯೆಯಾಗಿದ್ದ ಪತ್ನಿಯನ್ನು ಕೊಂದಿದ್ದಾರೆಂಬ ಆರೋಪ ಹೊತ್ತಿರುವ ಬೆಂಗಳೂರಿನ ಸರ್ಜನ್ (ಶಸ್ತ್ರಚಿಕಿತ್ಸಕ), ಕೊಲೆ ಮಾಡಿದ ಕೆಲವೇ ನಿಮಿಷದಲ್ಲಿ ತನ್ನ ಪ್ರೇಯಸಿಗೆ ‘ನಿನಗಾಗಿ ನನ್ನ ಪತ್ನಿಯನ್ನು ಕೊಂದಿದ್ದೇನೆ’ ಎಂದು ಸಂದೇಶ ಕಳಿಸಿದ್ದರು ಎಂಬುದು ವರದಿಯಾಗಿದೆ.

ಪ್ರಕರಣದ ತನಿಖೆ ನಡೆಸುತ್ತಿರುವ ಅಧಿಕಾರಿಗಳ ಪ್ರಕಾರ, ಆರೋಪಿ ಜನರಲ್ ಸರ್ಜನ್ ಡಾ. ಮಹೇಂದ್ರ ರೆಡ್ಡಿ ಅವರು ಡಿಜಿಟಲ್ ಪಾವತಿ ಆ್ಯಪ್‌ನಲ್ಲಿ ತನ್ನ ಪ್ರೇಯಸಿಗೆ ಸಂದೇಶ ಕಳಹಿಸಿದ್ದಾರೆ. ಅವರ ಫೋನ್‌ಅನ್ನು ವಿಧಿವಿಜ್ಞಾನ ವಿಶ್ಲೇಷಣೆಗೆ ಒಳಪಡಿಸಿದಾಗ ಈ ಸಂದೇಶ ಪತ್ತೆಯಾಗಿದೆ.

ಆರೋಪಿಯ ಪ್ರೇಯಸಿಯನ್ನು ವಿಚಾರಣೆಗೆ ಒಳಪಡಿಸಲಾಗಿದ್ದು, ಆಕೆಯ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಧಿವಿಜ್ಞಾನ ಪ್ರಯೋಗಾಲಯದ (ಎಫ್‌ಎಸ್‌ಎಲ್) ವರದಿಯು, ಮೃತ ವೈದ್ಯೆಯ ಅಂಗಗಳಲ್ಲಿ ಹೆಚ್ಚಿನ ಪ್ರಮಾಣದ ಅರಿವಳಿಕೆ ಔಷಧ ಇರುವುದನ್ನು ದೃಢಪಡಿಸಿದೆ. ಇದು ಅಪರಾಧ ಕೃತ್ಯವನ್ನು ಸೂಚಿಸುತ್ತದೆ. ಅವರ ಮನೆಯಲ್ಲಿ ತಪಾಸಣೆ ನಡೆಸಿದಾಗ, ಕ್ಯಾನುಲಾ ಸೆಟ್, ಇಂಜೆಕ್ಷನ್ ಟ್ಯೂಬ್ ಹಾಗೂ ಇತರ ವೈದ್ಯಕೀಯ ವಸ್ತುಗಳು ಪತ್ತೆಯಾಗಿವೆ. ಆ ವಸ್ತುಗಳು ಸೇರಿದಂತೆ ಪ್ರಮುಖ ಪುರಾವೆಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಹೇಂದ್ರ ತನ್ನ ಪತ್ನಿ, ಚರ್ಮರೋಗ ತಜ್ಞೆ ಡಾ. ಕೃತಿಕಾ ರೆಡ್ಡಿಗೆ ಅಧಿಕ ಪ್ರಮಾಣದಲ್ಲಿ ಅರಿವಳಿಕೆ ಔಷಧ ನೀಡಿ, ಕೊಂದಿದ್ದಾರೆ. ಘಟನೆಯು ಏಪ್ರಿಲ್ 21ರಂದು ನಡೆದಿದ್ದರೂ, ತಡವಾಗಿ ಪ್ರಕರಣ ದಾಖಲಾಗಿತ್ತು. ಕೃತಿಕಾ ಅವರ ತಂದೆ ತಮ್ಮ ಮಗಳನ್ನು ಆಕೆಯ ಪತಿ ಕೊಲೆ ಮಾಡಿದ್ದಾರೆ ಎಂದು ದೂರು ನೀಡಿದ್ದರು. ಅವರ ದೂರಿನ ಆಧಾರದ ಮೇಲೆ ಅಕ್ಟೋಬರ್ 15ರಂದು ಆರೋಪಿಯನ್ನು ಬಂಧಿಸಲಾಗಿದೆ.

ಈ ಲೇಖನ ಓದಿದ್ದೀರಾ?: ಹಿಂದುತ್ವವಾದಿಗಳ ಕೃತ್ಯಕ್ಕೆ ಮುಸ್ಲಿಮರ ಹೆಸರು!

“ಇಲ್ಲಿಯವರೆಗೆ ಸಂಗ್ರಹಿಸಲಾದ ಪುರಾವೆಗಳು ಡಾ. ಮಹೇಂದ್ರ ಕೃತ್ಯ ಎಸಗಿದ್ದಾರೆ ಎಂಬುದನ್ನು ಸೂಚಿಸುತ್ತವೆ. ಯಾಕೆಂದರೆ, ಆರಂಭದಲ್ಲಿ ಆಕೆಯನ್ನು ಆಸ್ಪತ್ರೆಗೆ ಕರೆತಂದದ್ದೂಆತನೇ. ಆದರೆ, ಆಕೆಗೆ ಏನಾಗಿದೆ ಎಂಬುದನ್ನು ಆತ ತಿಳಿಸಿರಲಿಲ್ಲ. ಬದಲಾಗಿ, ಆಕೆ ಹಲವು ಸಮಯಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದರು, ಚಿಕಿತ್ಸೆ ಪಡೆಯುತ್ತಿದ್ದರೆಂದು ಹೇಳಿಕೊಂಡಿದ್ದರು. ಆದರೆ, ಆಕೆಗೆ ನಿದ್ರಾಜನಕಗಳನ್ನು ಚುಚ್ಚುಮದ್ದು ನೀಡಲಾಗಿದೆ ಎಂಬುದು ತನಿಖೆ ವೇಳೆ ತಿಳಿದುಬಂದಿದೆ. ಇದು ದುರುದ್ದೇಶಪೂರಿತ ಕೃತ್ಯವೆಂದು ಕಾಣುತ್ತಿದೆ” ಎಂದು ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಹೇಳಿದ್ದಾರೆ.

ಕಳೆದ ವರ್ಷ ಮೇ 26ರಂದು ಮಹೇಂದ್ರ ಮತ್ತು ಕೃತಿಕಾ ವಿವಾಹವಾದರು. ಅವರಿಬ್ಬರೂ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...