ರಸ್ತೆ ಗುಂಡಿ ಗುರುತಿಸಲು ಬಿಬಿಎಂಪಿಯಿಂದ ಮೊಬೈಲ್‌ ಅಪ್ಲಿಕೇಶನ್

Date:

ನಗರದಲ್ಲಿ ರಸ್ತೆ ಗುಂಡಿಗಳನ್ನು ಗುರುತಿಸಲು ಮತ್ತು ನಿಗದಿತ ಅವಧಿಯಲ್ಲಿ ದುರಸ್ತಿ ಕಾಮಗಾರಿ ಕೈಗೊಳ್ಳಲು ಬಿಬಿಎಂಪಿ ‘ರಸ್ತೆ ಗುಂಡಿ ಗಮನ- ಮೊಬೈಲ್ ಅಪ್ಲಿಕೇಶನ್ ತಯಾರಿಸಿದೆ.

ಪಾಲಿಕೆ ವ್ಯಾಪ್ತಿಯ ಎಲ್ಲ ರಸ್ತೆಗಳನ್ನು ಜಿಪಿಎಸ್ ಆಧಾರದ ಮೇಲೆ ಗುರುತಿಸಲಾಗುತ್ತದೆ. ಆ ರಸ್ತೆಗಳಲ್ಲಿ ಉಂಟಾಗಬಹುದಾದ ಗುಂಡಿಗಳನ್ನು ಅಕ್ಷಾಂಶ ಮತ್ತು ರೇಖಾಂಶದಲ್ಲಿ ನಿಖರವಾಗಿ ಗುರುತಿಸಿ, ಮೊಬೈಲ್‌ನಲ್ಲಿ ಗುಂಡಿಯ ಅಳತೆಯನ್ನು ನಮೂದಿಸ ಲಾಗುತ್ತದೆ. ಪ್ರತ್ಯೇಕ ಕಾರ್ಯಾದೇಶ ತಯಾರಿಸಿ ಗುಂಡಿ ಮುಚ್ಚಲು ಕ್ರಮವಹಿಸುವ ಪದ್ಧತಿಯನ್ನು ಮೊಬೈಲ್ ಆ್ಯಪ್‌ನಲ್ಲಿ ಅಳವಡಿಸಲಾಗಿದೆ.

ಈ ತಂತ್ರಾಂಶ ಅಳವಡಿಸುವುದರಿಂದ ರಸ್ತೆ ಗುಂಡಿ ಗುರುತಿಸುವ ಮತ್ತು ಅವುಗಳನ್ನು ಮುಚ್ಚುವ ಪ್ರಕ್ರಿಯೆ ಪಾರದರ್ಶಕವಾಗಿ ನಡೆಯಲಿದೆ. ವೆಚ್ಚದ ಮೇಲೆ ನಿಯಂತ್ರಣ ಇಡಲು ಸಾಧ್ಯವಾಗುತ್ತದೆ. ನಿಗಾ ಇಡುವುದು ಸುಲಭವಾಗುತ್ತದೆ. ಸಾಂದರ್ಭಿಕ ಅಂದಾಜು ವೆಚ್ಚದ ಪಟ್ಟಿ ತಯಾರಿ ಸಹಿತ ಅನೇಕ ಕಾರ್ಯಗಳ ಅಗತ್ಯ ಇರುವುದಿಲ್ಲ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗುಂಡಿ ಮುಚ್ಚಲು 2024-25ನೇ ಸಾಲಿನಲ್ಲಿ ಪ್ರತಿ ವಾರ್ಡ್‌ಗಳಿಗೆ ₹15 ಲಕ್ಷದಂತೆ 225 ವಾರ್ಡ್‌ಗಳಿಗೆ ₹33.75 ಕೋಟಿ ಮೀಸಲಿಡಲಾಗಿದೆ.

ಈ ಸುದ್ದಿ ಓದಿದ್ದೀರಾ? ಜುಲೈ 31ರಿಂದ ಬೆಂಗಳೂರು – ಎರ್ನಾಕುಲಂ ವಂದೇ ಭಾರತ್ ಎಕ್ಸ್‌ಪ್ರೆಸ್ ಆರಂಭ

ಬೆಂಗಳೂರಿನ ರಸ್ತೆಜಾಲ:

ನಗರದಲ್ಲಿ 12,828 ಕಿ.ಮೀ ಉದ್ದದ ರಸ್ತೆ ಜಾಲವಿದೆ. ಈ ಪೈಕಿ 1,344 ಕಿ.ಮೀ ಪ್ರಮುಖ ರಸ್ತೆಗಳು ಹಾಗೂ 11,533 ಕಿ.ಮೀ ವಲಯ ಮಟ್ಟದ ರಸ್ತೆಗಳು ಇವೆ. ಈ ರಸ್ತೆಗಳ ತಳಭಾಗದಲ್ಲಿ ಬೆಸ್ಕಾಂ ಕೇಬಲ್, ನೀರು ಸರಬರಾಜು ಮತ್ತು ಒಳಚರಂಡಿ ಕೊಳವೆಗಳು, ಅನಿಲ ಕೊಳವೆಗಳು, ಒಎಫ್‌ಸಿ, ಕೆಪಿಟಿಸಿಎಲ್‌ನ ಹೆಚ್ಚಿನ ಸಾಮರ್ಥ್ಯದ ಕೇಬಲ್‌ಗಳ ಅಳವಡಿಕೆಯಿಂದ ರಸ್ತೆಗಳ ಮೇಲ್ಮೈ ಭಾಗವು ಶಿಥಿಲಗೊಂಡು ರಸ್ತೆಗಳಲ್ಲಿ ಗುಂಡಿಗಳು ಬೀಳುತ್ತಿವೆ.

ಸಾರ್ವಜನಿಕರಿಗೂ ಅವಕಾಶ

‘ರಸ್ತೆ ಗುಂಡಿ ಗಮನ’ ತಂತ್ರಾಂಶದಲ್ಲಿ ಬಿಬಿಎಂಪಿ ಅಧಿಕಾರಿಗಳು, ಸಂಚಾರ ಠಾಣೆಗಳ ಪೊಲೀಸರು ಮಾತ್ರವಲ್ಲದೇ ಸಾರ್ವಜನಿಕರೂ ಗುಂಡಿಗಳ ಬಗ್ಗೆ ಮಾಹಿತಿ ಅಪ್‌ಲೋಡ್‌ ಮಾಡಲು ಅವಕಾಶ ಕಲ್ಪಿಸಲಾಗಿದೆ.

(https://play.google.com/store/apps/details?id=com.indigo.bbmp.fixpothole) ಆ್ಯಪ್‌ ಡೌನ್‌ಲೋಡ್‌ ಮಾಡಿಕೊಂಡು ಗುಂಡಿಗಳ ಫೋಟೊ, ದುರಸ್ತಿ ಫೋಟೊಗಳ ಸಹಿತ ಮಾಹಿತಿ ನೀಡಬಹುದು ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...