ಬೆಂಗಳೂರು | ವಕೀಲೆ ಆತ್ಮಹತ್ಯೆ ಪ್ರಕರಣ; ಡಿವೈಎಸ್‌ಪಿ ಕನಕಲಕ್ಷ್ಮೀ ಬಂಧನ

Date:

ಕರ್ನಾಟಕ ಭೋವಿ ನಿಗಮ ಹಗರಣದ ತನಿಖೆ ವೇಳೆ ತಮ್ಮನ್ನು ವಿವಸ್ತ್ರಗೊಳಿಸಿ, ಹಲ್ಲೆಗೈದು, ಲಂಚಕ್ಕೆ ಬೇಡಿಕೆ ಇಟ್ಟಿದ್ದರೆಂದು ಆರೋಪಿಸಿ ವಕೀಲೆ ಜೀವಾ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣದಲ್ಲಿ ಸಿಐಡಿ ವಿಭಾಗದ ಡಿವೈಎಸ್‌ಪಿ ಕನಕಲಕ್ಷ್ಮೀ ಅವರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಕರ್ನಾಟಕ ಭೋವಿ ನಿಗಮದಲ್ಲಿ ಹಗರಣ ನಡೆದಿದೆ ಎಂಬ ಆರೋಪ ಕೇಳಿಬಂದಿತ್ತು. ಹಗರಣದ ತನಿಖೆಯನ್ನು ಕಾಂಗ್ರೆಸ್‌ ಸರ್ಕಾರ ಸಿಐಡಿ ತನಿಖೆಗೆ ಒಪ್ಪಿಸಿತ್ತು. ಸಿಐಡಿ ವಿಭಾಗದ ಡಿವೈಎಸ್‌ಪಿ ಕನಕಲಕ್ಷ್ಮೀ ನೇತೃತ್ವದ ತಂಡ ಹಗರಣದ ತನಿಖೆ ನಡೆಸುತ್ತಿತ್ತು. ತನಿಖೆ ವೇಳೆ, ವಕೀಲೆ ಜೀವಾ ಅವರನ್ನು ಸಿಐಡಿ ತಂಡ ವಶಕ್ಕೆ ಪಡೆದು ವಿಚಾರಣೆ ನಡೆಸಿತ್ತು.

ವಿಚಾರಣೆ ಎದುರಿಸಿದ್ದ ವಕೀಲೆ ಜೀವಾ, ಆನಂತರ, ಬೆಂಗಳೂರಿನ ಪದ್ಮನಾಭನಗರದ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರು ಬರೆದಿಟ್ಟಿದ್ದ 13 ಪುಟಗಳ ಡೆತ್‌ನೋಟ್‌ನಲ್ಲಿ, “ಡಿವೈಎಸ್‌ಪಿ ಕನಕಲಕ್ಷ್ಮೀ ಮತ್ತು ಇತರ ಅದಿಕಾರಿಗಳು ತಮ್ಮನ್ನು ವಿವಸ್ತ್ರಗೊಳಿಸಿ, ಹಲ್ಲೆ ನಡೆಸಿ, 25 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು” ಎಂದು ಆರೋಪಿಸಿದ್ದರು. ಬಳಿಕ, ಡಿವೈಎಸ್‌ಪಿ ಕನಕಲಕ್ಷ್ಮೀ ವಿರುದ್ಧ ಜೀವಾ ಅವರ ಸಹೋದರಿ ದೂರು ದಾಖಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಕರಣದ ತನಿಖೆಗಾಗಿ ಸರ್ಕಾರ ಎಸ್‌ಐಟಿ ರಚನೆ ಮಾಡಿತ್ತು. ಇದೀಗ, ಎಸ್‌ಐಟಿ ಅಧಿಕಾರಿಗಳು ಡಿವೈಎಸ್‌ಪಿ ಕನಕಲಕ್ಷ್ಮೀ ಅವರನ್ನು ಬಂಧಿಸಿದ್ದಾರೆ.

ಪ್ರಕರಣದ ಹಿನ್ನೆಲೆ;

ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಲ್ಲಿ ಸಾಲ ಕೊಡಿಸುವುದಾಗಿ ಭರವಸೆ ನೀಡಿ ಹಲವಾರು ಮಂದಿಯಿಂದ ಹಣ ಪಡೆದು ವಂಚಿಸಲಾಗಿದೆ ಎಂದು ಕೆ.ಎನ್. ಸೂರ್ಯಕಲಾವತಿ ಎಂಬವರು ಆರೋಪಿಸಿದ್ದರು. 2023ರ ಮಾರ್ಚ್‌ 18ರಂದು ಸಿದ್ದಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

ದೂರಿನಲ್ಲಿ, “2021ರ ಅಕ್ಟೋಬರ್‌ನಲ್ಲಿ ಸರಸ್ವತಿ ಮತ್ತು ಲಕ್ಷ್ಮಿ ಎಂಬುವರು ತಮ್ಮನ್ನು ಸಂಪರ್ಕಿಸಿದ್ದರು. ಭೋವಿ ಅಭಿವೃದ್ಧಿ ನಿಗಮದಲ್ಲಿ ಸಾಲ ಸೌಲಭ್ಯ ದೊರೆಯುತ್ತದೆ. ನೀವು ಅರ್ಜಿ ಸಲ್ಲಿಸಬಹುದು ಎಂದು ಹೇಳಿ ಅಗತ್ಯ ದಾಖಲೆಗಳು ಮತ್ತು ಎರಡು ಖಾಲಿ ಚೆಕ್‌ಗಳನ್ನು ಪಡೆದುಕೊಂಡಿದ್ದರು. ಅಲ್ಲದೆ, ಖಾಲಿ ಕಾಗದಗಳಿಗೆ ತಮ್ಮಿಂದ ಸಹಿ ಹಾಕಿಸಿಕೊಂಡಿದ್ದರು. ಇದೇ ರೀತಿ ಸುಮಾರು 40 ಮಹಿಳೆಯರಿಂದ ದಾಖಲೆಗಳು, ಚೆಕ್ ಹಾಗೂ ಖಾಲಿ ಪೇಪರ್ ಮೇಲೆ ಸಹಿ ಪಡೆಯಲಾಗಿದೆ. ಒಂದು ತಿಂಗಳ ಬಳಿಕ ಎಲ್ಲ ಮಹಿಳೆಯರಿಗೂ, 50,000 ರೂ. ಸಾಲ ಮಂಜೂರು ಮಾಡಿ, ಎಲ್ಲರಿಂದಲೂ ತಲಾ 25,000 ರೂ.ಗಳನ್ನು ಲಂಚವಾಗಿ ವಾಪಸ್‌ ಕಿತ್ತುಕೊಂಡಿದ್ದಾರೆ” ಎಂದು ಆರೋಪಿಸಿದ್ದರು.

“ವಂಚನೆಗೆ ಒಳಗಾದ ತಾವು 2022ರ ಡಿಸೆಂಬರ್‌ನಲ್ಲಿ ಭೋವಿ ನಿಗಮದ ಅಧಿಕಾರಿಗಳು ಭೇಟಿ ಮಾಡಿದ್ದೆವು. ಆಗ, ಅಧಿಕಾರಿಗಳು ‘ತಮಗೆ 5 ಲಕ್ಷ ರೂ. ಸಾಲ ಮಂಜೂರಾಗಿ, ಪಾವತಿಯಾಗಿದೆ. ಆ ಸಾಲವನ್ನು ಮರುಪಾವತಿ ಮಾಡಬೇಕು’ ಎಂದಿದ್ದಾರೆ. ಇದರಿಂದ ಗಾಬರಿಗೊಂಡು ಬ್ಯಾಂಕ್‌ಗೆ ತೆರಳಿ ಪರಿಶೀಲಿದಾಗ, ತಾವು ನೀಡಿದ್ದ ಖಾಲಿ ಚೆಕ್ ಬಳಸಿಕೊಂಡು 4,75,000 ರೂ.ಗಳನ್ನು ‘ನ್ಯೂ ಡ್ರೀಮ್ಸ್ ಎಂಟರ್‌ಪ್ರೈಸಸ್‌’ಗೆ ವರ್ಗಾಯಿಸಲಾಗಿದೆ ಎಂಬುದು ಗೊತ್ತಾಗಿದೆ. ತಮಗೆ ಅನ್ಯಾಯವಾಗಿದೆ” ಎಂದು ಸೂರ್ಯಕಲಾವತಿ ಆರೀಪಿಸಿದ್ದರು.

ಇದೇ ರೀತಿ 40ಕ್ಕೂ ಹೆಚ್ಚು ಮಂದಿಗೆ ವಂಚಿಸಲಾಗಿದೆ ಎಂದು ಹೇಳಲಾಗಿತ್ತು. ಬಳಿಕ, ಹಗರಣ ಬೆಳಕಿಗೆ ಬಂದಿತ್ತು. ತನಿಕೆ ನಡೆಸುವ ವೇಳೆ ಹಲವಾರನ್ನು ಸಿಐಡಿ ವಿಚಾರಣೆಗೆ ಒಳಪಡಿಸಿತ್ತು. ಅವರಲ್ಲಿ ವಕೀಲೆ ಜೀವಾ ಕೂಡ ಒಬ್ಬರು ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...