ಬೆಂಗಳೂರು: ಸರಿಯಾಗಿ ಬಟ್ಟೆ ಧರಿಸದಿದ್ದರೆ ಆಸಿಡ್ ಎರಚುವೆ ಎಂದ ಯುವಕನ ವಿರುದ್ಧ ಪ್ರಕರಣ ದಾಖಲು

Date:

ಸರಿಯಾಗಿ ಬಟ್ಟೆ ಧರಿಸು ಇಲ್ಲದಿದ್ದರೆ ಆಸಿಡ್ ಎರಚುವೆ ಎಂದು ಮಹಿಳಾ ಉದ್ಯೋಗಿಗೆ ಬೆದರಿಸಿದ ಯುವ ಉದ್ಯೋಗಿಯೋರ್ವನನ್ನು ಸಂಸ್ಥೆಯೊಂದು ಕೆಲಸದಿಂದ ವಜಾಗೊಳಿಸಿದೆ. ಈ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಈ ಬಗ್ಗೆ ಮಹಿಳೆಯ ಪತಿ ಶಹ್ಬಾಜ್ ಅನ್ಸರ್ ಎಂಬುವವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ, ಪೊಲೀಸರು ಹಾಗೂ ಯುವಕ ಕೆಲಸ ಮಾಡುತ್ತಿದ್ದ ಸಂಸ್ಥೆಗೆ ಟ್ಯಾಗ್ ಮಾಡಿದ್ದರು.

ಈ ಹಿನ್ನೆಲೆಯಲ್ಲಿ ಈಗ ಯುವಕನ ವಿರುದ್ಧ ಪ್ರಕರಣವೂ ದಾಖಲಾಗಿದೆ. ನಿಕಿತ್ ಶೆಟ್ಟಿ ಎಂಬ ವ್ಯಕ್ತಿ ನನ್ನ ಪತ್ನಿಗೆ ಆಕೆ ಧರಿಸುವ ಬಟ್ಟೆಯ ಬಗ್ಗೆ ಅವಹೇಳನ ಮಾಡಿ ಆಕೆಯ ಮುಖದ ಮೇಲೆ ಆಸಿಡ್ ದಾಳಿ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಈತನ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು ಹಾಗೂ ಮುಂದಾಗುವ ಅನಾಹುತ ತಪ್ಪಿಸಬೇಕು ಎಂದು ಬರೆದು ಸಾಮಾಜಿಕ ಜಾಲತಾಣದಲ್ಲಿ ಕರ್ನಾಟಕ ಸಿಎಂ, ಡಿಜಿಪಿಗೆ ಟ್ಯಾಗ್ ಮಾಡಿದ್ದರು.

ಈತ ಯಾರು ಎಂಬುದನ್ನು ನೆಟ್ಟಿಗರು ಸಾಮಾಜಿಕ ಮಾಧ್ಯಮ ಬಳಕೆದಾರರು ಪತ್ತೆ ಮಾಡಿದ್ದು, ಆತ ಇಟಿಯೋಸ್‌ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದಾನೆ ಎಂಬುದು ತಿಳಿದು ಬಂದಿದೆ. ಕೂಡಲೇ ಈ ವಿಚಾರ ಸಂಸ್ಥೆಯ ಗಮನಕ್ಕೂ ಬಂದಿದ್ದು, ಸಂಸ್ಥೆ ನಿಖಿತ್‌ ಶೆಟ್ಟಿಯನ್ನು ಕೆಲಸದಿಂದ ವಜಾಗೊಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಣೆ ನೀಡಿರುವ ಸಂಸ್ಥೆ, ನಮ್ಮ ಉದ್ಯೋಗಿಯೊಬ್ಬರು ಭಾಗಿಯಾಗಿರುವ ಗಂಭೀರ ಘಟನೆಯೊಂದರಿಂದ ನಾವು ತೀವ್ರ ಬೇಸರಕ್ಕೊಳಗಾಗಿದ್ದೇವೆ. ನಿಖಿತ್ ಶೆಟ್ಟಿ, ಮತ್ತೊಬ್ಬ ಮಹಿಳಾ ಉದ್ಯೋಗಿಯ ಅವರಿಷ್ಟದ ಬಟ್ಟೆ ಧರಿಸಿದ್ದ ಕಾರಣ ಆಸಿಡ್ ಎರಚುವುದಾಗಿ ಬೆದರಿಕೆಯೊಡ್ಡಿದ್ದು, ಇಂತಹ ವರ್ತನೆಯನ್ನು ಸಹಿಸಲಾಗದು ಹಾಗೂ ಇಟಿಯೋಸ್‌ನ ಸೇವಾ ಮೌಲ್ಯಕ್ಕೆ ವಿರುದ್ಧವಾಗಿದೆ ಎಂದು ಹೇಳಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಜಾತಿ ಜನಗಣತಿ ಎತ್ತುವ ಹಲವು ಪ್ರಶ್ನೆಗಳು

ಉದ್ಯೋಗಿಗಳಿಗೆ ಸುರಕ್ಷಿತ ಮತ್ತು ಗೌರವಾನ್ವಿತ ವಾತಾವರಣವನ್ನು ಬೆಳೆಸಲು ಬದ್ಧವಾಗಿರುವ ನಮ್ಮ ಕಂಪನಿಯೂ ನಿಕಿತ್ ಶೆಟ್ಟಿ ವಿರುದ್ಧ ತಕ್ಷಣದ ಕ್ರಮವನ್ನು ತೆಗೆದುಕೊಂಡಿದ್ದೇವೆ. ನಿಕಿತ್ ಅವರ ಉದ್ಯೋಗವನ್ನು ಐದು ವರ್ಷಗಳ ಕಾಲದ ಅವಧಿಗೆ ವಜಾ ಮಾಡಲಾಗಿದೆ ಮತ್ತು ಆತನ ವರ್ತನೆ ಖಚಿತಪಡಿಸಿಕೊಳ್ಳಲು ನಾವು ಅವರ ವಿರುದ್ಧ ಪ್ರಕರಣವನ್ನು ದಾಖಲಿಸಿದ್ದೇವೆ ಎಂದು ಎಟಿಯೋಸ್ ಡಿಜಿಟಲ್ ಹೇಳಿದೆ. ಇಟಿಯೋಸ್ ಪೂರ್ಣ ಸ್ಟಾಕ್ ಮಾರ್ಕೆಟಿಂಗ್ ಏಜೆನ್ಸಿಯಾಗಿದೆ.

ನನ್ನ ಪತ್ನಿ ಮೇಲೆ ಆಸಿಡ್ ದಾಳಿ ಮಾಡುವುದಾಗಿ ಹೇಳಿದ ವ್ಯಕ್ತಿ ತನ್ನ ಉದ್ಯೋಗವನ್ನು ಕಳೆದುಕೊಂಡಿದ್ದಾನೆ. ಕಂಪನಿಯೂ ದೂರು ನೀಡಿದ ಕೂಡಲೇ ಕ್ರಮ ಕೈಗೊಂಡು ಆತನನ್ನು ವಜಾ ಮಾಡಿದೆ. ಎಲ್ಲರಿಗೂ ಧನ್ಯವಾದಗಳು ಎಂದು ಅನ್ಸರ್ ಸಾಮಾಜಿಕ ಜಾಲತಾಣದಲ್ಲಿ ನಂತರ ಬರೆದುಕೊಂಡಿದ್ದಾರೆ. ನಿಕಿತ್ ಶೆಟ್ಟಿ ವಿರುದ್ಧ ಈಗ ಭಾರತದ ನ್ಯಾಯ ಸಂಹಿತೆಯ ಸೆಕ್ಷನ್ 124ರ ಅಡಿ ಪ್ರಕರಣ ದಾಖಲಾಗಿದೆ. 

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...