ಬೆಂಗಳೂರು | 400 ಮರಗಳ ಮಾರಣಹೋಮಕ್ಕೆ ರೈಲ್ವೆ ಸಿದ್ಧತೆ; ಪರಿಸರವಾದಿಗಳ ಆಕ್ರೋಶ

Date:

ಬೆಂಗಳೂರಿನ ಕಂಟೋನ್ಮೆಂಟ್‌ ರೈಲು ನಿಲ್ದಾಣದ ಆವರಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲು ರೈಲ್ವೆ ಇಲಾಖೆ ಮುಂದಾಗಿದೆ. ಅದಕ್ಕಾಗಿ, ಅಲ್ಲಿರುವ 468 ಮರಗಳನ್ನು ಕಡಿಯಲು ನಿರ್ಧರಿಸಿದೆ. ಮರ ಕಡಿಯುವ ವಿಚಾರವಾಗಿ ಬಿಬಿಎಂಪಿ ಅರಣ್ಯ ವಿಭಾಗಕ್ಕೆ ರೈಲ್ವೆ ಪ್ರಸ್ತಾವನೆಯನ್ನೂ ಸಲ್ಲಿಸಿದೆ.

ರೈಲ್ವೆ ಪ್ರದೇಶ ಅಭಿವೃದ್ಧಿ ಪ್ರಾಧಿಕಾರವು ಕಂಟೋನ್ಮೆಂಟ್‌ ರೈಲು ನಿಲ್ದಾಣದ ಆವರಣವನ್ನು ನವೀಕರಿಸಲು ಮುಂದಾಗಿದೆ. ಬಹುಮಹಡಿ ಪಾರ್ಕಿಂಗ್ ಸಂಕೀರ್ಣ, ಕಾಯುವ ಕೋಣೆ, ಟಿಕೆಟ್‌ ಕೌಂಟರ್‌ಗಳು ಸೇರಿದಂತೆ ನಾನಾ ಕಾಮಗಾರಿ ನಡೆಸಲು ಯೋಜನೆ ರೂಪಿಸಿದೆ. ಈ ಕಾಮಗಾರಿಗಳನ್ನು ನಡೆಸಲು, ರೈಲ್ವೆ ಆವರಣದಲ್ಲಿರುವ 368 ಮರಗಳನ್ನು ಕಡಿಯಬೇಕೆಂದು ಪ್ರಸ್ತಾವನೆಯಲ್ಲಿ ಹೇಳಿದೆ.

ಪ್ರಸ್ತಾವನೆ ಸ್ವೀಕರಿಸಿರುವ ಬಿಬಿಎಂಪಿ ಅರಣ್ಯ ವಿಭಾಗವು ಆಕ್ಷೇಪಣೆಗಳನ್ನು ಸಲ್ಲಿಸಲು ಸಾರ್ವಜನಿಕರಿಗೆ ಮನವಿ ಮಾಡಿದೆ. ಮರ ಕಡಿಯುವುದಕ್ಕೆ ಹೆಚ್ಚು ಹೆಚ್ಚಾಗಿ ವಿರೋಧ ವ್ಯಕ್ತವಾದರೆ ಮತ್ತು ಆಕ್ಷೇಪಗಳಿಗೆ ರೈಲ್ವೆ ಅಧಿಕಾರಿಗಳು ಸೂಕ್ತ ಉತ್ತರ ನೀಡದಿದ್ದರೆ, ಮರ ಕಡಿಯಲು ಅನುಮತಿ ನೀಡುವುದಿಲ್ಲ ಎಂದು ಬಿಬಿಎಂಪಿ ಅರಣ್ಯ ವಿಭಾಗ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಸ್ತಾವನೆಯ ಬಗ್ಗೆ ತಿಳಿದ ಹಲವಾರು ಪರಿಸರವಾದಿಗಳು ರೈಲ್ವೆ ಯೋಜನೆಯನ್ನು ವಿರೋಧಿಸಿದ್ದಾರೆ. ಮರ ಕಡಿಯಲು ಅವಕಾಶ ನೀಡಬಾರದು ಎಂದು ಆಗ್ರಹಿಸಿದ್ದಾರೆ.

ಈ ವರದಿ ಓದಿದ್ದೀರಾ?: ಕಾಶ್ಮೀರಿಯೊಬ್ಬಳ ನಿತ್ಯ ನಿಜಾಯಿತಿಯ ಸತ್ಯ ಸ್ವಗತ 

ಈಗಾಗಾಲೇ, ಬೆಂಗಳೂರು ಕಾಂಕ್ರೀಟ್‌ ಕಾಡಿನಂತಾಗಿದೆ. ಎಲ್ಲೆಡೆ ಬಹುಮಹಡಿ ಕಟ್ಟಡಗಳು ತಲೆ ಎತ್ತಿವೆ. ನಿರಂತರವಾಗಿ ಮರಗಳ ಮಾರಣಹೋಮ ನಡೆಯುತ್ತಿದೆ. ಪರಿಸರ ರಕ್ಷಣೆಗೆ ಆಡಳಿತ ಸಂಸ್ಥೆಗಳು ಒತ್ತುಕೊಡುತ್ತಿಲ್ಲ. ಬೆಂಗಳೂರಿನಲ್ಲಿ ವಾಯುಮಾಲಿನ್ಯ ಪ್ರಮಾಣವೂ ಹೆಚ್ಚತ್ತಿದೆ. ಹೀಗಿರುವಾಗ ಹೆಚ್ಚು ಮರಗಳನ್ನು ಬೆಳೆಸಬೇಕು. ಯಾವುದೇ ಕಾರಣಕ್ಕೂ ಮರ ಕಡಿಯಲು ಅವಕಾಶ ನೀಡಬಾರದು ಎಂದು ಪರಿಸರ ಪ್ರೇಮಿಗಳು ಒತ್ತಾಯಿಸಿದ್ದಾರೆ.

ಸದ್ಯಕ್ಕೆ, ಕಂಟೋನ್ಮೆಂಟ್‌ ರೈಲು ನಿಲ್ದಾಣವನ್ನು 480 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ರೈಲ್ವೆ ಮುಂದಾಗಿದೆ. ಅದರಲ್ಲಿ, 1,000 ಬೈಕ್ ಮತ್ತು 2,000 ಕಾರುಗಳನ್ನು ನಿಲ್ಲಿಸುವ ಸಾಮರ್ಥ್ಯದ ಬಹುಮಹಡಿ ಪಾರ್ಕಿಂಗ್ ಸಂಕೀರ್ಣ, ಬೃಹತ್ ಕಾಯುವ ಕೋಣೆ, ಹೆಚ್ಚುವರಿ ಟಿಕೆಟ್‌ ಕೌಂಟರ್‌ಗಳು, ಸೋಲಾರ್‌ ಪವರ್‌ ಮೇಲ್ಚಾವಣಿ ಸೇರಿದಂತೆ ವಿವಿಧ ಕಾಮಗಾರಿಗಳನ್ನು ನಡೆಸಲು ಯೋಜಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...