ಬೆಂಗಳೂರು ಕಾಲ್ತುಳಿತ | ಐಪಿಎಸ್‌ ಅಧಿಕಾರಿ ಅಮಾನತು ಆದೇಶ ರದ್ದು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಸರ್ಕಾರ ಮೇಲ್ಮನವಿ

Date:

ಆರ್‌ಸಿಬಿ ಸಂಭ್ರಮಾಚರಣೆ ವೇಳೆ, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ಕರ್ತವ್ಯಲೋಪ ಆರೋಪದ ಮೇಲೆ ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅವರನ್ನು ಸರ್ಕಾರ ಅಮಾನತು ಮಾಡಿತ್ತು. ಸರ್ಕಾರದ ಅಮಾನತು ಆದೇಶವನ್ನು ಕೇಂದ್ರೀಯ ಅಡಳಿತಾತ್ಮಕ ನ್ಯಾಯಮಂಡಳಿ (ಸಿಎಟಿ) ರದ್ದುಗೊಳಿಸಿದೆ. ಈ ಬೆನ್ನಲ್ಲೇ, ಸಿಎಟಿ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರವು ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ.

ಸಿಎಟಿ ಆದೇಶವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿರುವ ಸರ್ಕಾರದ ಪರ ಎ.ಜಿ ಶಶಿಕಿರಣ್ ಶೆಟ್ಟಿ ಅವರು ತುರ್ತು ವಿಚಾರಣೆ ಕೋರಿ ಮನವಿ ಮಾಡಿದ್ದರು. ಅರ್ಜಿಯ ವಿಚಾರಣೆ ನಡೆಸಿರುವ ಹೈಕೋರ್ಟ್‌, “ಇಂದೇ ವಿಚಾರಣೆಯಾಗಬೇಕೆಂಬ ತರಾತುರಿ ಯಾಕೆ” ಎಂದು ಪ್ರಶ್ನಿಸಿದೆ.

ನ್ಯಾಯಾಲಯದ ಪ್ರಶ್ನೆಗೆ ಉತ್ತರಿಸಿದ ಎ.ಜಿ ಶಶಿಕಿರಣ್ ಶೆಟ್ಟಿ, “ಸಿಎಟಿ ಆದೇಶದ ಬಳಿಕ ಅಧಿಕಾರ ವಹಿಸಿಕೊಳ್ಳಲು ಅಧಿಕಾರಿ ವಿಕಾಸ್ ಕುಮಾರ್ ಮುಂದಾಗಿದ್ದಾರೆ. ಹೀಗಾಗಿ, ತುರ್ತು ವಿಚಾರಣೆ ನಡೆಸಬೇಕು” ಎಂದು ಮನವಿ ಮಾಡಿದರು. ಆದಾಗ್ಯೂ, ನ್ಯಾಯಾಲಯವು ಅರ್ಜಿಯ ವಿಚಾರಣೆಯನ್ನು ಜುಲೈ 3ಕ್ಕೆ ಮುಂದೂಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...