ಬೆಂಗಳೂರು | ಪ್ರಜಾಪ್ರಭುತ್ವ ಸಂಸ್ಥೆಗಳ ಮೇಲಿನ ನಂಬಿಕೆ ಕುಸಿದಿದೆ: ಜಸ್ಟಿಸ್ ಗೋಪಾಲಗೌಡ

Date:

“ಪ್ರಸ್ತುತ ಸನ್ನಿವೇಶದಲ್ಲಿ ಸಂವಿಧಾನವನ್ನು ಉಳಿಸಿಕೊಳ್ಳಬೇಕಾಗಿದೆ. ಪ್ರಜಾಪ್ರಭುತ್ವ ಸಂಸ್ಥೆಗಳ ಮೇಲಿನ ನಂಬಿಕೆ ಕುಸಿತವಾಗಿದೆ. ಜಸ್ಟಿಸ್ ಓಕಾ ಅವರು ಈ ಹಿಂದೆ, ‘ನ್ಯಾಯಾಂಗದ ಮೇಲೆ ಗಾಢವಾದ ನಂಬಿಕೆ ನಾಗರಿಕರಲ್ಲಿತ್ತು. ಆದರೆ, ಈಗ ನಂಬಿಕೆ ಕಾಣಯಾಗುತ್ತಿದೆ’ ಎಂದಿದ್ದರು. ಈ ಪರಿಸ್ಥಿತಿಯಲ್ಲಿ ಭಾರತವನ್ನು ಮುನ್ನಡೆಸಲು ಹೃದಯವಂತಿಕೆ ಇರುವ ನೌಕರಶಾಹಿಗಳ ಅಗತ್ಯವಿದೆ” ಎಂದು ನಿವೃತ್ತ ನ್ಯಾಯಮೂರ್ತಿ ವಿ ಗೋಪಾಲಗೌಡ ಹೇಳಿದರು.

ಬೆಂಗಳೂರಿನಲ್ಲಿ ಭಾರತ ಉಳಿಸಿ ಸಮಿತಿ ಆಯೋಜಿಸಿದ್ದ ‘ಗಣರಾಜ್ಯ ಭಾರತ @75 – ಪ್ರಸಕ್ತ ಸವಾಲುಗಳು’ ಚಿಂತನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. “ಜನರಿಗೆ ಯಾವುದು ಮುಖ್ಯ, ಯಾವುದು ಮುಖ್ಯವಲ್ಲ ಎಂಬ ತಿಳುವಳಿಕೆ ಇಲ್ಲವಾಗಿದೆ. ರೈತರು, ಕಾರ್ಮಿಕರು ಇಂತಹ ವಿಚಾರ ಸಂಕಿರಣದಲ್ಲಿ ಪಾಲ್ಗೊಳ್ಳಬೇಕಿತ್ತು. ಆದರೆ, ಜನರ ಪಾಲ್ಗೋಳ್ಳುವಿಕೆ ಕಡಿಮೆಯಾಗಿದೆ. ಅಲ್ಲದೆ, ಅಭಿಪ್ರಾಯಗಳನ್ನು ರೂಪಿಸುವ ಸಾಮೂಹಿಕ ಚಳುವಳಿಗಳು ಸ್ಥಗಿತವಾಗಿವೆ. ನವ ಆರ್ಥಿಕತೆ ನೀತಿ ಸಂಪೂರ್ಣವಾಗಿ ವಿನಾಶಕಾರಿ ನೀತಿಗಳಾಗಿವೆ. ಅನೈತಿಕ ಕಾರ್ಯಗಳ ಸಾಮಾನ್ಯೀಕರಣ, ಮತಗಳ ಖರೀದಿ, ಅಧಿಕಾರದ ದುರುಪಯೋಗ ಹೆಚ್ಚಾಗುತ್ತಿದೆ” ಎಂದರು.

“ಜನರಿಗೆ ರಾಜಕೀಯವನ್ನು ಅರ್ಥ ಮಾಡಿಸದೆ, ಆರ್ಥಿಕ ವಿಚಾರಗಳ ಬಗ್ಗೆ ಹೇಳಲು ಹೋಗುತ್ತಿದ್ದೇವೆ. ಹೀಗಾಗಿ, ಸಮಾಜದಲ್ಲಾಗುತ್ತಿರುವ ದಮನಕಾರಿ ವಿಚಾರಗಳನ್ನು ಜನರಿಗೆ ಅರ್ಥ ಮಾಡಿಸುವಲ್ಲಿ ಹಿಂದೆ ಉಳಿಯುತ್ತಿದ್ದೇವೆ. ಮಾರ್ಕ್ಸ್‌ವಾದಿ ಪಕ್ಷಗಳು ಒಳ್ಳೆಯ ವಿಚಾರ-ಚಿಂತನೆಗಳನ್ನು ಹೊಂದಿವೆ. ಆದರೆ, ಜನರ ಮಧ್ಯೆ ಹೋಗಲು ಅವುಗಳಿಗೆ ಸಾಧ್ಯವಾಗುತ್ತಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಿಜವಾಗಿ ಏನು ನಡೆಯುತ್ತಿದೆ? ರಾಜಕೀಯ ದೃವೀಕರಣ ಹೇಗೆ ನಡೆಯುತ್ತಿದೆ ಎಂಬುದು ಜನರಿಗೆ ತಿಳಿದಿಲ್ಲ. ಜನರಿಗೆ ಅರ್ಥ ಮಾಡಿಸಲು ಆಗುತ್ತಿಲ್ಲ. ಯಾವ ರಾಜಕೀಯ ಪಕ್ಷದಲ್ಲೂ ಜನರ ಬಗ್ಗೆ ಯೋಚನೆ ಮಾಡುವ ಪ್ರಣಾಳಿಕೆ ಇಲ್ಲ. ಕೆಳ ಮಟ್ಟದ ಭಾಷೆ ಬಳಿಸಿ ರಾಜಕೀಯ ನಾಯಕರು ಮಾತಾಡುತ್ತಿದ್ದಾರೆ. ಒಬ್ಬರ ಮೇಲೆ ಒಬ್ಬರು ಹರಿಹಾಯುತ್ತಿದ್ದಾರೆ. ನಾಗರಿಕ ಚರ್ಚೆಯ ಕೊರತೆ ಇದೆ. ಮಾಧ್ಯಮಗಳಲ್ಲಿ ಸೆಲೆಬ್ರೆಟಿಗಳ ಬಗ್ಗೆ ಡಿಬೇಟ್ ನಡೆಯುತ್ತದೆ. ಆದರೆ, ರೈತರು, ಕಾರ್ಮಿಕರು, ವಿದ್ಯಾರ್ಥಿಗಳು, ಮಹಿಳೆಯರ ಬಗ್ಗೆ ಯಾವುದೇ ಚರ್ಚೆಗಳು ನಡೆಯುತ್ತಿಲ್ಲ” ಎಂದು ಅಸಮಾಧಾನದಿಂದ ಮಾತನಾಡಿದರು.

“ಮತದಾರರ ಮೇಲೆ ಬಲವಂತ, ಬಲಾತ್ಕಾರ, ಹಣ ಬಳಿಸಿ ಮತ ಖರೀದಿಸುವುದು ಪ್ರಚಲಿತವಾಗಿದೆ. ಮಹಾರಾಷ್ಟ್ರದಲ್ಲಿ 5 ಗಂಟೆ ಮೇಲೆ ಹೆಚ್ಚಿನ ಪ್ರಮಾಣದಲ್ಲಿ ಮತದಾನವಾಗಿದೆ. ಸಾಯಂಕಾಲದ ನಂತರ ಇಷ್ಟೋಂದು ಮತ ಹೇಗೆ ಬಂತು? ಇದಕ್ಕೆ ಚುನಾವಣಾ ಆಯೋಗದ ಬಳಿ ಉತ್ತರ ಇಲ್ಲ. ಮತದಾನದ ಮೇಲೆಯೇ ಅನುಮಾನ ಮೂಡುತ್ತಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಭಾರತದ ಸಂವಿಧಾನ ಕೇವಲ ದಾಖಲೆಗಳ ಪುಸ್ತಕವಲ್ಲ, ದೇಶದ ಚೇತನ: ಡಾ. ಕೆ ಷರೀಫಾ

“ಪ್ರತಿಯೊಬ್ಬರಿಗೂ ಓದು, ಕಲಿಕೆ, ಉದ್ಯೋಗ ನೀಡಬೇಕು ಎಂಬುದು ಸಂವಿಧಾನದ ಆಶಯ. ನ್ಯಾಯಾಂಗದ ಮೇಲೆ ರಾಜಕೀಯ ಪ್ರಭಾವ ಇದೆ ಎಂದು ಜನರು ಹೇಳುತ್ತಿದ್ದಾರೆ. ನ್ಯಾಯಾಲಯದ ನಿರ್ಧಾರಗಳಲ್ಲಿ ರಾಜಕೀಯ ಪ್ರಭಾವಿಗಳ ಒಳನುಸುಳುವಿಕೆ ಜನರ ನಂಬಿಕೆಯನ್ನು ಕುಂದಿಸುತ್ತಿದೆ. ಪಾರದರ್ಶಕತೆಯ ಕೊರತೆಯು ನೀತಿಪಾಲನೆಗೆ ತೊಂದರೆಯಾಗುತ್ತಿದೆ. ಪಾರದರ್ಶಕತೆಯನ್ನು ಗಾಳಿಗೆ ತೂರಲಾಗುತ್ತಿದೆ” ಎಂದು ಆರೋಪಿಸಿದರು.

“ಸಮಾಜದಲ್ಲಿ ಅಸಮಾನತೆ ಹೆಚ್ಚುತ್ತಿದೆ. ಆರ್ಥಿಕ ಮತ್ತು ಅದಾಯದ ಅಸಮಾನತೆ ಹೆಚ್ಚಾಗಿದೆ. 1% ಜನರು ದೇಶದ 41% ಆದಾಯ ಹೊಂದಿದ್ದಾರೆ. 50% ಜನರು 13% ಆಸ್ತಿಯನ್ನು ನಿಯಂತ್ರಿಸುತ್ತಿದ್ದಾರೆ. ಖಾಸಗಿ ವಿದ್ಯಾಸಂಸ್ಥೆಗಳು ಹೆಚ್ಚಿನ ಹಣ ಪಡೆಯುತ್ತಿವೆ. ಸರ್ಕಾರಿ ಆಸ್ಪತ್ರೆಗಳು ಜನರ ಆರೋಗ್ಯದ ಬಗ್ಗೆ ಗಮನ ಕೊಡಬೇಕು. ವಿದ್ಯಾಭ್ಯಾಸ ಮತ್ತು ಆರೋಗ್ಯದ ಅಸಮಾನತೆ ಬಡವರನ್ನು ಕಾಡುತ್ತಿದೆ. ಎಷ್ಟು ಅಸಮಾನತೆ ಇದೆಯೋ, ಅದಕ್ಕಿಂತ ಹೆಚ್ಚು ಶೋಷಣೆ ಇದೆ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...