ಭವಾನಿ ರೇವಣ್ಣ ವರ್ತನೆ ಮಾಜಿ ಪ್ರಧಾನಿ ಕುಟುಂಬಕ್ಕೆ ಶೋಭೆ ತರುವಂತದಲ್ಲ: ಬಿ.ಟಿ.ನಾಗಣ್ಣ

Date:

ಅಪಘಾತಕ್ಕೆ ಸಂಬಂಧಿಸಿದಂತೆ ಹೊಳೆನರಸೀಪುರ ಶಾಸಕ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅವರ ವರ್ತನೆ ದರ್ಪ ಮತ್ತು ದುರಹಂಕಾರದಿಂದ ಕೂಡಿದೆ. ಶಾಸಕ, ಮಂತ್ರಿ, ಮುಖ್ಯಮಂತ್ರಿ, ಪ್ರಧಾನಿಗಳನ್ನು ಕೊಟ್ಟಿರುವ ದೇವೇಗೌಡರ ಕುಟುಂಬಕ್ಕೆ ಈ ವರ್ತನೆ ಶೋಭೆ ತರುವಂತದ್ದಲ್ಲ ಎಂದು ಆಮ್‌ ಆದ್ಮಿ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಬಿ.ಟಿ.ನಾಗಣ್ಣ ಆಕ್ಷೇಪ ವ್ಯಕ್ತಪಡಿಸಿದರು.

ಅಪಘಾತಕ್ಕೆ ಸಂಬಂಧಿಸಿ ಭವಾನಿ ರೇವಣ್ಣ ಅವರು ಬೈಕ್‌ ಸವಾರನಿಗೆ ಅವಾಚ್ಯವಾಗಿ ನಿಂದಿಸಿದ ವಿಡಿಯೋಗೆ ಸಂಬಂಧಿಸಿ ನಗರದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಬಿ.ಟಿ.ನಾಗಣ್ಣ ಅವರು, “ಅಪಘಾತದ ಬಳಿಕ ಬೈಕ್‌ ಸವಾರನ ಆರೋಗ್ಯ ವಿಚಾರಿಸಬೇಕಿತ್ತು. ಆದರೆ, ಭವಾನಿ ಅವರು ತಮ್ಮ ಕಾರಿನ ಬಗ್ಗೆ ತಲೆಕೆಡಿಸಿಕೊಂಡಿದ್ದಾರೆ. ಬಡವ ಸತ್ತರೂ ಚಿಂತೆಯಿಲ್ಲ, ತಮ್ಮ ₹1.50 ಕೋಟಿ ಗಾಡಿಗೆ ಡ್ಯಾಮೇಜ್‌ ಮಾಡಿದ್ದಾರೆ ಎಂಬುದೇ ಅವರಿಗೆ ದೊಡ್ಡ ಸಂಗತಿಯಾಗಿದೆ” ಎಂದರು.

“ಅವನು ಸತ್ತುಹೋಗುತ್ತಾನೆ ಅಂತ ಯೋಚನೆ ಮಾಡುತ್ತಿದ್ದೀರಲ್ಲಾ, ಒಂದೂವರೆ ಕೋಟಿ ರೂಪಾಯಿಯ ಗಾಡಿಗೆ ಆಗಿರುವ ಡ್ಯಾಮೇಜ್‌ ಯಾರು ಕಟ್ಟಿಕೊಡುತ್ತಾರೆ ಎಂದು ಅವಿವೇಕದಿಂದ ಪ್ರಶ್ನಿಸುತ್ತಿದ್ದೀರಲ್ಲಾ, ಜಿಲ್ಲೆಯ ಜಿಲ್ಲಾ ಪಂಚಾಯತ್ ಸದಸ್ಯರಾಗಿ ಶಿಕ್ಷಣ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಹಾಸನ ಜಿಲ್ಲೆಯ ಜನರು ಭವಾನಿ ಅವರನ್ನು ಅಮ್ಮ ಎಂದೇ ಕರೆಯುತ್ತಾರೆ. ಆದರೆ, ಭವಾನಿ ಅವರಿಗೆ ಅಂತಃಕರಣವೇ ಇಲ್ಲವಾಗಿದೆ. ದೇವೇಗೌಡರ ಕುಟುಂಬದ ಎಲ್ಲ ಸದಸ್ಯರು ಮಣ್ಣಿನ ಮಕ್ಕಳು ಎಂದೇ ಬಿಂಬಿಸಿಕೊಳ್ಳುತ್ತಾರೆ. ವಾಸ್ತವದಲ್ಲಿ ಸಾಮಾನ್ಯ ಕೃಷಿಕರ ಬಗ್ಗೆ, ಕ್ಷೇತ್ರದ ಜನತೆಯ ಬಗ್ಗೆ ಎಂತಹ ಧೋರಣೆಯನ್ನು ಹೊಂದಿದ್ದಾರೆ ಎಂಬುದು ಭವಾನಿ ರೇವಣ್ಣ ಅವರ ವರ್ತನೆಯಿಂದ ಬಹಿರಂಗವಾಗಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ನಿವೃತ್ತ ಐಎಎಸ್‌ ಅಧಿಕಾರಿ ವಿರುದ್ಧ ಅತ್ಯಾಚಾರ ಆರೋಪ: ದೂರು ದಾಖಲು

“ಬೈಕ್‌ ಸವಾರನೊಬ್ಬ ಆಕಸ್ಮಿಕವಾಗಿ ಕಾರಿಗೆ ಅಡ್ಡ ಬಂದು ಅಪಘಾತಕ್ಕೆ ಕಾರಣವಾದ ಎಂಬುದಕ್ಕೆ ‘ಸಾಯುವುದಾದರೆ ಬಸ್ಸಿನಡಿಗೆ ಬಿದ್ದು ಸಾಯಬೇಕಿತ್ತು’ ಎಂದಿದ್ದಾರೆ. ಸಾಕಷ್ಟು ಅವಾಚ್ಯ ಮಾತುಗಳಿಂದ ನಿಂದಿಸಿದ್ದಾರೆ. ಮಧ್ಯಪ್ರವೇಶಿಸಲು ಪ್ರಯತ್ನಿಸಿದ ಸ್ಥಳೀಯರಿಗೂ ‘ರಿಪೇರಿಗೆ 50 ಲಕ್ಷ ರೂ. ಕೊಡುವ ಹಾಗಿದ್ದರೆ ಮಾತಾಡಿ’ ಎಂದು ಬೆದರಿಕೆ ಹಾಕಿದ್ದಾರೆ. ಭವಾನಿ ರೇವಣ್ಣ ಅವರು ಈ ಬಾರಿ ಶಾಸಕಿಯಾಗುವ ಸಮೀಪದಲ್ಲಿದ್ದವರು. ಮುಂದೊಂದು ದಿನ ವಿಧಾನಸಭೆ ಅಥವಾ ಲೋಕಸಭೆ ಚುನಾವಣೆ ಅಭ್ಯರ್ಥಿಯಾಗುವ ಆಕಾಂಕ್ಷೆ ಹೊಂದಿದವರೂ ಹೌದು. ಆದರೆ, ಇಂತಹ ಕ್ಷುಲ್ಲಕ ಮನಸ್ಥಿತಿ ಹೊಂದಿರುವ ವ್ಯಕ್ತಿಗಳು ನಾಳೆ ವಿಧಾನಸಭೆ ಮೆಟ್ಟಿಲು ಹತ್ತುವಂತೆ ಆಗಬಾರದು. ಜನರು ಇಂತವರ ದುರ್ವರ್ತನೆಗಳಿಗೆ ಬೆಲೆ ನೀಡಬಾರದು. ಖಡಾಖಂಡಿತವಾಗಿ ತಿರಸ್ಕರಿಸಬೇಕು. ಭವಾನಿ ಅವರ ವರ್ತನೆಗೆ ಸಂಬಂಧಿಸಿ ದೇವೇಗೌಡರಿಂದ ಸಂಸದ ಪ್ರಜ್ವಲ್ ರೇವಣ್ಣವರೆಗೆ ಎಲ್ಲರೂ ರಾಜ್ಯದ ಜನತೆಯ ಕ್ಷಮೆ ಕೇಳಬೇಕು” ಎಂದು ಒತ್ತಾಯಿಸಿದರು.

“ಭವಾನಿ ರೇವಣ್ಣ ಅವರು ವಾಹನಕ್ಕೆ ವಿಮೆ ಕ್ಲೈಮ್‌ ಮಾಡಬಹುದು. ಬೈಕ್‌ ಸವಾರನ ಪ್ರಾಣಕ್ಕೆ ಏನಾದರೂ ಆದರೆ ಯಾರು ಹೊಣೆ? ಪದೇ ಪದೆ ಒಂದೂವರೆ ಕೋಟಿ ಕಾರು ಎನ್ನುತ್ತಿದ್ದಾರೆ. ಇವರೇನು ಸ್ವತಃ ದುಡಿದು ಇಷ್ಟು ದುಬಾರಿಯ ಕಾರನ್ನು ಕೊಂಡಿದ್ದಾರೆಯೇ?” ಎಂದು ಪ್ರಶ್ನಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...