ಬೆಂಗಳೂರು | ಹಸಿ ತ್ಯಾಜ್ಯ ನಿರ್ವಹಣೆಗಾಗಿ ಪಾರ್ಕ್‌ನಲ್ಲಿ ‘ಲೇನ್ ಕಾಂಪೋಸ್ಟರ್’ ಅಳವಡಿಕೆ

Date:

ಬೆಂಗಳೂರಿನ ಕುಮಾರಸ್ವಾಮಿ ಲೇಔಟ್‌ನ ಪೂರ್ಣಚಂದ್ರ ಪಾರ್ಕ್‌ನಲ್ಲಿ ಹಸಿ ತ್ಯಾಜ್ಯ ನಿರ್ವಹಣೆಗಾಗಿ ಎರಡು ಲೇನ್ ಕಾಂಪೋಸ್ಟರ್‌ಗಳನ್ನು ಶುಕ್ರವಾರ ಅಳವಡಿಸಲಾಗಿದೆ.

ನಿವಾಸಿಗಳ ಕಲ್ಯಾಣ ಸಂಘ ನಾಗರಿಕ ಸೇವಾ ಸಮಿತಿಯ ಸಹಯೋಗದೊಂದಿಗೆ ಎನ್‌ಎಎಮ್‌ಎ ಈ ಕಾಂಪೋಸ್ಟರ್‌ಗಳನ್ನು ಅಳವಡಿಸಿದೆ. ಪ್ರತಿ ‘ಲೇನ್ ಕಾಂಪೋಸ್ಟರ್’ 800 ಲೀಟರ್ ಸಾಮರ್ಥ್ಯವನ್ನು ಹೊಂದಿದೆ. ಪಾರ್ಕ್‌ ಸುತ್ತಲ ಪ್ರದೇಶದಲ್ಲಿರುವ 40 ಮನೆಗಳಿಂದ ಹಸಿ ತ್ಯಾಜ್ಯವನ್ನು ಪ್ರತಿದಿನ ಇಲ್ಲಿ ಸಂಸ್ಕರಿಸಬಹುದು. 45 ದಿನಗಳಲ್ಲಿ ಅದರಲ್ಲಿ ತುಂಬಿದ ಕಸವು ಗೊಬ್ಬರವಾಗಿ ಮಾರ್ಪಟ್ಟಿರುತ್ತದೆ. ಅದನ್ನು ಪಾರ್ಕ್‌ನ ಗಿಡ-ಮಗಳಿಗೆ ಗೊಬ್ಬರವಾಗಿ ಬಳಸಲಾಗುತ್ತದೆ ಎಂದು ಹೇಳಲಾಗಿದೆ.

ಈ ಯೋಜನೆಯ ಮುಖ್ಯ ಗುರಿಯು ತ್ಯಾಜ್ಯ ವಿಂಗಡಣೆಯನ್ನು ಉತ್ತೇಜಿಸುವುದು, ತ್ಯಾಜ್ಯ ಸಂಸ್ಕರಣೆಯನ್ನು ವಿಕೇಂದ್ರೀಕರಿಸುವುದು ಹಾಗೂ ಕಾಂಪೋಸ್ಟಿಂಗ್‌ನ ಪ್ರಯೋಜನಗಳ ಬಗ್ಗೆ ಅರಿವು ಮೂಡಿಸುವ ಮೂಲಕ ಇಂಗಾಲದ ಹೊರಸೂಸುವಿಕೆಯನ್ನು ಕಡಿಮೆ ಮಾಡುವುದಾಗಿದೆ ಎಂದು ಪಾಲಿಕೆ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಸಂತಾನ ನಿಯಂತ್ರಣಕ್ಕಾಗಿ ನಾಯಿಗಳನ್ನು ಯಲಹಂಕಕ್ಕೆ ಸ್ಥಳಾಂತರಿಸಬೇಡಿ; ಪ್ರಾಣಿ ಕಾರ್ಯಕರ್ತರ ಒತ್ತಾಯ

ಇವುಗಳನ್ನು ಸ್ಥಳೀಯ ಬಿಬಿಎಂಪಿ ತ್ಯಾಜ್ಯ ಸಂಗ್ರಹ ಆಟೋ ಚಾಲಕ ಮತ್ತು ಸಹಾಯಕರು ನಿರ್ವಹಿಸುತ್ತಾರೆ. ಅವುಗಳನ್ನು ನಿರ್ವಹಿಸುವ ಕುರಿತು ಅವರಿಗೆ ಸಿಡಬ್ಲುಎಸ್‌ ತಂಡದಿಂದ ತರಬೇತಿ ನೀಡಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...