ತಿಂಗಳಿಗೆ ₹6 ಕೋಟಿ ಲಾಭ ಗಳಿಸುತ್ತಿರುವ ಬಿಎಂಆರ್‌ಸಿಎಲ್‌ : ಡಿಸಿಎಂ ಡಿಕೆ ಶಿವಕುಮಾರ್

Date:

  • ಪ್ರಯಾಣಿಕರ ಹೊರತಾಗಿ ಇತರೆ ಮೂಲಗಳಿಂದ ಲಾಭ ಪಡೆಯಲು ಸಲಹೆ
  • ಸರ್ಜಾಪುರದಿಂದ ಹೆಬ್ಬಾಳದವರೆಗೆ ಮೂರನೇ ಹಂತದ ಯೋಜನೆಗಾಗಿ ಸಮೀಕ್ಷೆ

ದೇಶದಲ್ಲಿ ಎರಡನೇ ಅತಿ ದೊಡ್ಡದಾಗಿರುವ ಬೆಂಗಳೂರಿನ ‘ನಮ್ಮ ಮೆಟ್ರೋ’ ತಿಂಗಳಿಗೆ ₹48 ಕೋಟಿ ಆದಾಯ ಗಳಿಸುತ್ತಿದ್ದರೂ, ಅದರ ನಿರ್ವಹಣೆಯ ವೆಚ್ಚವೇ ₹42 ಕೋಟಿಯಾಗುತ್ತಿದೆ. ₹6 ಕೋಟಿಯಷ್ಟೇ ಲಾಭ ಬರುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದರು.

ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌) ಕಚೇರಿ ಸಭಾಂಗಣದಲ್ಲಿ ಮೆಟ್ರೋ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, “ನಮ್ಮ ಮೆಟ್ರೋ ತಿಂಗಳಿಗೆ ತನ್ನ ಎಲ್ಲ ವೆಚ್ಚಗಳನ್ನು ಕಳೆದು ₹6 ಕೋಟಿ ಲಾಭ ಗಳಿಸುತ್ತಿದೆ. ಹಾಗಾಗಿ, ಪ್ರಯಾಣಿಕರ ಹೊರತಾಗಿ ಯಾವ ರೀತಿ ಲಾಭ ಪಡೆಯುವುದು ಅಥವಾ ಇತರೆ ಮೂಲಗಳಿಂದ ಹೇಗೆ ಆದಾಯ ಗಳಿಸಬಹುದು ಎಂಬ ಬಗ್ಗೆ ಕೆಲವು ಸಲಹೆಗಳನ್ನು ನೀಡಿದ್ದೇನೆ. ಮೆಟ್ರೋ ನಿಲ್ದಾಣ ಹೊರಗೆ ಮತ್ತು ಒಳಗೆ ಜಾಹೀರಾತು ಹಾಕಲು ಇರುವ ಸಮಸ್ಯೆ ಬಗೆಹರಿಸಲು ಕ್ರಮ ವಹಿಸುವುದಾಗಿ ಭರವಸೆ ನೀಡಿದ್ದೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಮ್ಮ ಮೆಟ್ರೋಗೆ ಸಬ್ಸಿಡಿಯಲ್ಲಿ ಸಿಗುತ್ತಿರುವ ವಿದ್ಯುತ್ ಅನ್ನು ಮತ್ತಷ್ಟು ಕಡಿಮೆ ದರಕ್ಕೆ ಹೇಗೆ ಪಡೆಯಬೇಕು ಎಂಬ ಬಗ್ಗೆ ಸಲಹೆ ನೀಡಿದ್ದೇನೆ ಹಾಗೂ ನಗರದಲ್ಲಿ ಎಲ್ಲೆಲ್ಲಿ ಮೆಟ್ರೋ ವಿಸ್ತರಣೆ ಮಾಡಬಹುದು ಎಂಬ ಬಗ್ಗೆ ಸಮೀಕ್ಷೆಯಾಗಬೇಕು. ಈಗಾಗಲೇ ಎರಡನೇ ಹಂತದ ಮೆಟ್ರೋ ಯೋಜನೆಗೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಒಪ್ಪಿಗೆ ದೊರೆಯಬೇಕಿದೆ. ಸರ್ಜಾಪುರದಿಂದ ಹೆಬ್ಬಾಳದವರೆಗೆ ಮೂರನೇ ಹಂತದ ಯೋಜನೆಗಾಗಿ ಸಮೀಕ್ಷೆ ನಡೆಯುತ್ತಿದೆ” ಎಂದು ವಿವರಿಸಿದರು.

2026ರಲ್ಲಿ ವಿಮಾನ ನಿಲ್ದಾಣಕ್ಕೆ ಮೆಟ್ರೊ

“ನಮ್ಮ ಮೆಟ್ರೋ ರೈಲು ಮಾರ್ಗದ ಹಂತ 3ಎ ಯೋಜನೆಯಲ್ಲಿ ಸರ್ಜಾಪುರದಿಂದ ಹೆಬ್ಬಾಳದವರೆಗೆ ಮಾರ್ಗ ವಿಸ್ತರಿಸಲು ಸರ್ವೆ ನಡೆಯುತ್ತಿದೆ. ಎಲ್ಲೆಲ್ಲಿ ಮೆಟ್ರೋ ಮಾರ್ಗ ವಿಸ್ತರಿಸಲು ಸಾಧ್ಯವೋ ಅಲ್ಲಿ ಸರ್ವೆ ನಡೆಸಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. 2026ರ ಜೂನ್‌ ವೇಳೆಗೆ ವಿಮಾನ ನಿಲ್ದಾಣಕ್ಕೆ ಮೆಟ್ರೋ ಸಂಪರ್ಕ ಮಾರ್ಗ ಪೂರ್ಣಗೊಳ್ಳಲಿದೆ” ಎಂದು ತಿಳಿಸಿದರು.

“ಜೆ.ಪಿ.ನಗರ 4ನೇ ಹಂತದಿಂದ ಕೆಂಪಾಪುರ (32.15 ಕಿ.ಮೀ) ಮತ್ತು 2ನೇ ಕಾರಿಡಾರ್‌ನಲ್ಲಿ ಹೊಸಹಳ್ಳಿ- ಕಡಬಗೆರೆ(12.50 ಕಿ.ಮೀ) ವರೆಗೆ ಮಾರ್ಗ ನಿರ್ಮಿಸಲು ಉದ್ದೇಶಿಸಲಾಗಿದೆ. ಬೈಯಪ್ಪನಹಳ್ಳಿ-ಕೆ.ಆರ್‌.ಪುರಂ ಮೆಟ್ರೋ ಜುಲೈ ವೇಳೆಗೆ ವಾಣಿಜ್ಯ ಸಂಚಾರ ಆರಂಭಿಸಲಿದೆ. ಕೆಂಗೇರಿ-ಚಲ್ಲಘಟ್ಟ ಆಗಸ್ಟ್‌-ಸೆಪ್ಟೆಂಬರ್‌, ನಾಗಸಂದ್ರ-ಮಾದಾವರ ಸೆಪ್ಟೆಂಬರ್‌ ಅಕ್ಟೋಬರ್‌ನಲ್ಲಿ ಆಗಬಹುದು. ಹೊಸ ಮಾರ್ಗ ಆರ್‌.ವಿ.ರೋಡ್‌-ಬೊಮ್ಮಸಂದ್ರ ಅಕ್ಟೋಬರ್‌-ನವೆಂಬರ್‌ನಲ್ಲಿ ವಾಣಿಜ್ಯ ಸಂಚಾರ ಆರಂಭಿಸುವ ಸಾಧ್ಯತೆ ಇದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಫೇಸ್‌ಬುಕ್ ಯುವತಿ ಬಲೆಗೆ ಬಿದ್ದು ₹37 ಲಕ್ಷ ಕಳೆದುಕೊಂಡ ಕಂಬಾಳು ಸ್ವಾಮೀಜಿ

“ರಾತ್ರಿ ವೇಳೆ ಈ ಕಾಮಗಾರಿಗಳು ನಡೆಯುತ್ತಿವೆ. ಅಧಿಕಾರಿಗಳು ಕಾಮಗಾರಿ ವಿಳಂಬದ ಬಗೆಗಿನ ಸಮಸ್ಯೆ ಹೇಳಿಕೊಂಡಿದ್ದಾರೆ. ಹಗಲಲ್ಲಿ ಸಿಮೆಂಟ್‌, ಸಾಮಗ್ರಿ ತಲುಪಿಸಲು ಆಗುತ್ತಿಲ್ಲ. ಈ ವಿಚಾರವಾಗಿ ಪೊಲೀಸ್‌ ಜತೆ ಸಭೆ ಮಾಡಬೇಕಿದ್ದು, ಪೊಲೀಸರು ಹಾಗೂ ಸಾರ್ವಜನಿಕರ ಸಹಕಾರ ಅಗತ್ಯವಿದೆ” ಎಂದರು.

ಸಭೆಯಲ್ಲಿ ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್‌ ಸಿಂಗ್‌, ಬಿಎಂಆರ್‌ಸಿಎಲ್‌ ವ್ಯವಸ್ಥಾಪಕ ನಿರ್ದೇಶಕ ಅಂಜುಮ್‌ ಪರ್ವೇಜ್‌ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...