ಪ್ರಯಾಣಿಕರ ಸುರಕ್ಷತಾ ನಿಯಮ ಅನುಸರಿಸದ ಬಿಎಂಟಿಸಿ ಬಸ್‌ ಸಿಬ್ಬಂದಿ: ಆರೋಪ

Date:

  • ನಿಗಮ ಹೊರಡಿಸಿದ ಸುತ್ತೋಲೆಯನ್ನು ಗಾಳಿಗೆ ತೂರಿದ ಬಸ್‌ ಸಿಬ್ಬಂದಿ
  • ವಾಹನ ಚಲಿಸುವಾಗ ಪ್ರಯಾಣಿಕರಿಗೆ ಬಸ್ ಹತ್ತಲು ಅನುವು ಮಾಡುವ ಸಿಬ್ಬಂದಿ

ಸಾರಿಗೆ ನಿಗಮ ಪ್ರಯಾಣಿಕರ ಸುರಕ್ಷತಾ ಮಾನದಂಡಗಳನ್ನು ಅನುಸರಿಸಿ ಮತ್ತು ಬಸ್ ಚಲಿಸುವ ಮೊದಲು ಬಸ್ ಬಾಗಿಲುಗಳನ್ನು ಮುಚ್ಚುವಂತೆ ಸುತ್ತೋಲೆ ಹೊರಡಿಸಿದ್ದರೂ, ನಗರದ ಅನೇಕ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಬಸ್‌ ಸಿಬ್ಬಂದಿ ನಿಯಮಗಳನ್ನು ಪಾಲಿಸುತ್ತಿಲ್ಲ ಎಂಬ ಆರೋಪಗಳು ಕೇಳಿ ಬಂದಿವೆ.

ನಗರದಲ್ಲಿ ಸಂಚರಿಸುವ ಬಹುತೇಕ ಬಸ್‌ಗಳಲ್ಲಿ ನಿಗಮ ಹೊರಡಿಸಿದ ಸುತ್ತೋಲೆಯನ್ನು ಅನುಸರಿಸುತ್ತಿಲ್ಲ ಮತ್ತು ಪ್ರಯಾಣಿಕರನ್ನು ಫುಟ್‌ಬೋರ್ಡ್‌ಗಳ ಮೇಲೆ ನಿಲ್ಲಲು ಅನುಮತಿಸುತ್ತಿವೆ. ಇನ್ನೂ ಹೆಚ್ಚಿನ ಬಸ್‌ಗಳು ಬಾಗಿಲುಗಳನ್ನು ಮುಚ್ಚುತ್ತಿಲ್ಲ. ವಿಶೇಷವಾಗಿ ಪ್ರಯಾಣಿಕರು ಬಸ್‌ ಮುಂಭಾಗದ ಬಾಗಿಲು ಬಳಿ ನಿಂತಿರುತ್ತಾರೆ ಎಂದು ಪ್ರಯಾಣಿಕರು ಆರೋಪಿಸಿದ್ದಾರೆ.

ಶಾಂತಿನಗರದ ಬಿಎಂಟಿಸಿ ಪ್ರಯಾಣಿಕ ಮಧು ಕೃಷ್ಣ ಮಾತನಾಡಿ, “ಚಾಲಕರು ಎಂದಿಗೂ ಬಸ್ ಮುಂಭಾಗದ ಬಾಗಿಲನ್ನು ಮುಚ್ಚುವುದಿಲ್ಲ. ಬಸ್ ನಿಲ್ದಾಣಗಳ ಬಳಿ ವಾಹನ ಚಲಿಸುವಾಗ ಪ್ರಯಾಣಿಕರಿಗೆ ಬಸ್ ಹತ್ತಲು ಅನುಮತಿ ನೀಡುತ್ತಾರೆ. ಇದು ಪ್ರಯಾಣಿಕರ ಜೀವಕ್ಕೆ ಅಪಾಯ ಉಂಟುಮಾಡುತ್ತದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಸ್ ಸಿಬ್ಬಂದಿ ಮಿತಿಗಿಂತ ಹೆಚ್ಚು ಪ್ರಯಾಣಿಕರನ್ನು ಕರೆದುಕೊಂಡು ಪ್ರಯಾಣ ಬೆಳೆಸುತ್ತಿದ್ದಾರೆ. ಪ್ರಯಾಣಿಕರನ್ನು ಫುಟ್‌ಬೋರ್ಡ್‌ನಲ್ಲಿ ನಿಲ್ಲುವಂತೆ ಮಾಡುತ್ತಾರೆ. ಶಕ್ತಿ ಯೋಜನೆ ಜಾರಿಗೆ ಬಂದ ನಂತರ, ಬಸ್‌ಗಳಲ್ಲಿ ನಿತ್ಯ ಸಾಕಷ್ಟು ಜನಸಂದಣಿ ಕಂಡುಬರುತ್ತಿದೆ. ವಿಶೇಷವಾಗಿ ಪೀಕ್ ಅವರ್‌ಗಳಲ್ಲಿ, ಬಸ್‌ಗಳು ಕಿಕ್ಕಿರಿದು ತುಂಬಿರುತ್ತವೆ. ಹೆಚ್ಚಿನ ಮಹಿಳೆಯರು ನಿಲ್ಲುವ ಮುಂಭಾಗದ ಬಾಗಿಲನ್ನು ಬಸ್‌ ಚಾಲಕ ಎಂದಿಗೂ ಮುಚ್ಚುವುದಿಲ್ಲ. ಪ್ರಯಾಣಿಕರ ಸುರಕ್ಷತೆಗೆ ಆದ್ಯತೆ ನೀಡಬೇಕು. ಜನಸಂದಣಿಯ ಸಮಸ್ಯೆಗಳನ್ನು ಪರಿಹರಿಸಲು ಬಿಎಂಟಿಸಿ ಹೆಚ್ಚಿನ ಬಸ್‌ಗಳನ್ನು ಕಾರ್ಯಾಚರಣೆಗೆ ಇಳಿಸಬೇಕು” ಎಂದು ಬಸ್‌ ಪ್ರಯಾಣಕಿ ಶರಾವತಿ ಕೆ. ತಿಳಿಸಿದ್ದಾರೆ.

ಸುತ್ತೋಲೆಯ ಆದೇಶ ಏನು?

ಹಾವೇರಿ ಜಿಲ್ಲೆಯಲ್ಲಿ ಕಿಕ್ಕಿರಿದು ತುಂಬಿದ್ದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ (ಎನ್‌ಡಬ್ಲ್ಯುಕೆಆರ್‌ಟಿಸಿ) ಬಸ್‌ನಿಂದ ಕೆಳಗೆ ಬಿದ್ದು 14 ವರ್ಷದ ಶಾಲಾ ಬಾಲಕಿ ಇತ್ತೀಚೆಗೆ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಸುತ್ತೋಲೆ ಹೊರಡಿಸಲಾಗಿದೆ.

ಜೂನ್ 13ರಂದು ರಸ್ತೆ ಸಾರಿಗೆ ನಿಗಮ ಹೊರಡಿಸಿದ ಸುತ್ತೋಲೆ ಪ್ರಕಾರ, ಡಿಪೋದಿಂದ ಟ್ರಿಪ್‌ಗಾಗಿ ಬಸ್ ಪ್ರಾರಂಭವಾಗುವ ಮೊದಲು ಎಲ್ಲ ಬಸ್ ಬಾಗಿಲುಗಳನ್ನು ಪರಿಶೀಲಿಸಬೇಕು. ಯಾವುದೇ ಪ್ರಯಾಣಿಕರು ಬಸ್‌ನ ಫುಟ್‌ಬೋರ್ಡ್‌ನಲ್ಲಿ ನಿಲ್ಲಲು ಅನುಮತಿಸಬಾರದು. ಮುಂಭಾಗ ಮತ್ತು ಹಿಂಭಾಗದ ಎರಡೂ ಬಾಗಿಲುಗಳನ್ನು ಸರಿಯಾಗಿ ಮುಚ್ಚಿರುವುದನ್ನು ಖಚಿತಪಡಿಸಿಕೊಳ್ಳಲು ಬಸ್ ಸಿಬ್ಬಂದಿಗೆ ನಿರ್ದೇಶನ ನೀಡಲಾಗಿದೆ. ಬಸ್ ನಿಲ್ದಾಣವನ್ನು ತಲುಪಿ ಮೀಸಲಾದ ಪ್ಲಾಟ್‌ಫಾರ್ಮ್‌ನಲ್ಲಿ ನಿಲ್ಲುವವರೆಗೆ ಬಸ್ ಸಿಬ್ಬಂದಿ ಬಾಗಿಲು ತೆರೆಯಬಾರದು ಎಂದು ಸುತ್ತೋಲೆಯಲ್ಲಿ ಹೇಳಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಬೈಕ್ ವ್ಹೀಲಿಂಗ್ ಮಾಡುತ್ತಿದ್ದ ಇಬ್ಬರು ಸವಾರರ ಬಂಧನ

ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಎಲ್ಲ ನಿಗಮಗಳಿಗೆ ಪ್ರಯಾಣಿಕರ ಸುರಕ್ಷತಾ ಮಾನದಂಡಗಳನ್ನು ಅನುಸರಿಸಲು ಮತ್ತು ಬಸ್ ಚಲಿಸುವ ಮೊದಲು ಬಸ್ ಬಾಗಿಲುಗಳನ್ನು ಮುಚ್ಚುವಂತೆ ಸೂಚನೆಗಳನ್ನು ನೀಡಿದ್ದರು.

ಬಿಎಂಟಿಸಿಯ ವ್ಯವಸ್ಥಾಪಕ ನಿರ್ದೇಶಕಿ ಸತ್ಯವತಿ ಜಿ. ಮಾತನಾಡಿ, “ಸಿಬ್ಬಂದಿಯಿಂದ ಇಂತಹ ಉಲ್ಲಂಘನೆಗಳನ್ನು ಪರಿಶೀಲಿಸಲು ಬಿಎಂಟಿಸಿಯು ‘ಸಾರಥಿ’ ವಾಹನಗಳನ್ನು ನಿಯೋಜಿಸಿದ್ದು, ಬಸ್ ಸಿಬ್ಬಂದಿ ನಿಯಮ ಅನುಸರಿಸದಿದ್ದಲ್ಲಿ ಸಾರಥಿ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುತ್ತಾರೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...