ಬಿಬಿಎಂಪಿ ಬಜೆಟ್ | ಹಣ ಹೆಚ್ಚಾದರೂ ಬೆಂಗಳೂರು ಸ್ಥಿತಿ ಬದಲಾವಣೆ ಯಾವಾಗ: ಬಿಎನ್‌ಪಿ ಪ್ರಶ್ನೆ

Date:

2025-26ರ ಸಾಲಿನ ಬಿಬಿಎಂಪಿ ಬಜೆಟ್ ಅನ್ನು ಘೋಷಿಸಲಾಗಿದ್ದು, ಈ ಬಜೆಟ್ ಬಗ್ಗೆ ಬೆಂಗಳೂರು ನವನಿರ್ಮಾಣ ಪಕ್ಷ (ಬಿಎನ್‌ಪಿ) ಪ್ರತಿಕ್ರಿಯಿಸಿದೆ. “ಈ ಬಾರಿ ಬಜೆಟ್ ಹೆಚ್ಚಳವಾಗಿದ್ದರೂ ಬೆಂಗಳೂರು ನಗರದ ಸ್ಥಿತಿ ಬದಲಾವಣೆ ಯಾವಾಗ” ಎಂದು ಬಿಎನ್‌ಪಿ ಪ್ರಶ್ನಿಸಿದೆ.

“ಬಿಬಿಎಂಪಿ 19,927 ಕೋಟಿ ರೂಪಾಯಿ ಬಜೆಟ್ ಘೋಷಿಸಿದ್ದು, 2024-25ನೇ ಸಾಲಿನ 2,371 ಕೋಟಿ ರೂಪಾಯಿ ಬಜೆಟ್‌ಗೆ ಹೋಲಿಸಿದರೆ ಶೇಕಡ 60ರಷ್ಟು ಭಾರೀ ಹೆಚ್ಚಳವಾಗಿದೆ. ನಿಜಕ್ಕೂ ಇದು ಎಲ್ಲಾ ಬೆಂಗಳೂರು ನಿವಾಸಿಗಳಿಗೆ ಸಂತೋಷದ ವಿಚಾರ” ಎಂದು ಬಿಎನ್‌ಪಿ ಹೇಳಿದೆ.

ಇದನ್ನು ಓದಿದ್ದೀರಾ? ಮಾರ್ಚ್‌ನಲ್ಲಿ ಬಿಬಿಎಂಪಿ ಬಜೆಟ್ ಮಂಡನೆ ಸಾಧ್ಯತೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಳೆದ ವರ್ಷ ಸಾರ್ವಜನಿಕ ಕಾಮಗಾರಿಗಳಿಗೆ ₹7,280 ಕೋಟಿ ಮೀಸಲಿಡಲಾಗಿದ್ದು ಈ ವರ್ಷ ₹12,952 ಕೋಟಿಯಷ್ಟು ಹೆಚ್ಚಿನ ಹಣ ಹಂಚಿಕೆಯಾಗಿದೆ. ಕಳೆದ ವರ್ಷ ಘನತ್ಯಾಜ್ಯ ನಿರ್ವಹಣೆಗೆ ₹1,952 ಕೋಟಿ ಹಂಚಿಕೆಯಾಗಿದ್ದು, ಈ ವರ್ಷ ₹1,400 ಕೋಟಿಯಷ್ಟು ನೀಡಲಾಗಿದೆ. ಆದರೆ ಇವೆಲ್ಲವುದರ ಹೊರೆಯನ್ನು ಜನರ ಮೇಲೆ ಹಾಕುವ ಯತ್ನಿಸಲಾಗುತ್ತಿದೆ” ಎಂದು ಬಿಎನ್‌ಪಿ ಆರೋಪಿಸಿದೆ.

“ಬಿಬಿಎಂಪಿ ನಾಗರಿಕರಿಂದ ಬಳಕೆ ದರ (user fee) ವಸೂಲಿ ಮಾಡಲು ಯೋಚಿಸುತ್ತಿದೆ. ಕಸ ಸ್ವಚ್ಛ ಮಾಡುವ ಕಾರ್ಮಿಕರು ಸರಿಯಾದ ಸಂಬಳಕ್ಕೆ ಒತ್ತಾಯಿಸಿ ಹೋರಾಟ ನಡೆಸುತ್ತಿದ್ದಾರೆ. ₹1,500-2,000 ಕೋಟಿ ಘನತ್ಯಾಜ್ಯ ನಿರ್ವಹಣೆಗೆ ₹1,500 – 2,000 ಕೋಟಿ ಖರ್ಚು ಮಾಡಲಾಗಿದ್ದರೂ, ಬಿಬಿಎಂಪಿ ನಾಗರಿಕರ ಮೇಲೆ ಬಳಕೆ ದರ ಹೇರಲು ಯತ್ನಿಸುತ್ತಿದೆ. ಇನ್ನೊಂದೆಡೆ, ಕಾರ್ಮಿಕರಿಗೆ ಸೂಕ್ತ ಸಂಬಳ ಕೊಡುತ್ತಿಲ್ಲ. ಹಣ ಹೋದದು ಎಲ್ಲಿಗೆ? ಈ ಸಮಸ್ಯೆಗೆ ಉತ್ತರ ಯಾರು ನೀಡಬೇಕು” ಎಂದು ಬೆಂಗಳೂರು ನವನಿರ್ಮಾಣ ಪಕ್ಷ ಪ್ರಶ್ನಿಸಿದೆ.

“ಸಾರ್ವಜನಿಕ ಕಾಮಗಾರಿಗಳಿಗೆ ₹10,000 ಕೋಟಿ ಖರ್ಚಾದರೂ ರಸ್ತೆ, ಚರಂಡಿ ಏಕೆ ಹಾಳಾಗಿದೆ? ನಮ್ಮ ನಗರ ಅಥವಾ ನಮ್ಮ ವಾರ್ಡ್‌ಗಳ ರಸ್ತೆಗಳು, ಚರಂಡಿಗಳು ಮತ್ತು ನಾಗರಿಕ ಸೌಕರ್ಯಗಳ ನಿರ್ವಹಣೆಗಾಗಿ ವರ್ಷಕ್ಕೊಂದು ₹10,000 ಕೋಟಿ ಖರ್ಚಾಗುತ್ತಿದೆ ಎಂದು ನಂಬಬಹುದಾ? ಈ ಹೊತ್ತು ನಾವು ನಡೆಯುವ ರಸ್ತೆಯ ಸ್ಥಿತಿ ನೋಡಿದರೆ ಹಣ ಎಲ್ಲಿ ಖರ್ಚಾಗುತ್ತಿದೆ ಎಂಬ ಪ್ರಶ್ನೆ ಯಾರಿಗಾದರೂ ಬರುತ್ತದೆ” ಎಂದು ಹೇಳಿದೆ.

ಇದನ್ನು ಓದಿದ್ದೀರಾ? ಎಷ್ಟು ಮಳೆಗಾಲ ಬಂದು ಹೋದರು, ಸಿದ್ಧವಾಗದ ಬಿಬಿಎಂಪಿ: ತೆರಿಗೆ ಕಟ್ಟಿಯೂ ಜನರಿಗೆ ತಪ್ಪದ ಸಮಸ್ಯೆ

“ಇಷ್ಟು ಹಣ ಖರ್ಚಾದರೂ ಸೌಕರ್ಯಗಳು ಹಾಳಾಗಿರುವುದು ಯಾಕೆ? ನಾವು ಪರಿಹರಿಸಬೇಕಾದ ನಿಜವಾದ ಸಮಸ್ಯೆ ಎಂದರೆ ಪಾರದರ್ಶಕತೆ, ನಾಗರಿಕರ ಭಾಗವಹಿಸುವಿಕೆ ಮತ್ತು ಹೊಣೆಗಾರಿಕೆ. ಪ್ರತಿ ವರ್ಷ ಅನುಮೋದನೆ ಪಡೆಯುತ್ತಿರುವ ಎಲ್ಲಾ ಯೋಜನೆಗಳ ವಿವರಗಳನ್ನು ಸಾರ್ವಜನಿಕರಿಗೆ ತಿಳಿಸಬೇಕು. ಈ ಯೋಜನೆಗಳಲ್ಲಿ ಹೆಚ್ಚಿನವು ವಾರ್ಡ್‌ಗೆ ಹಂಚಿಕೆಯಾಗಿರುತ್ತವೆ ಮತ್ತು ವಿವಿಧ ವಾರ್ಡ್‌ಗಳ ನಾಗರಿಕರು ಈ ಯೋಜನೆಗಳನ್ನು ನಿರ್ಧರಿಸುವಲ್ಲಿ ಮತ್ತು ಮೇಲ್ವಿಚಾರಣೆ ಮಾಡುವಲ್ಲಿ ಭಾಗಿಯಾಗಬೇಕು” ಎಂದು ಆಗ್ರಹಿಸಿದೆ.

“ಗುತ್ತಿಗೆದಾರರು ಅದೇ ಕೆಲಸವನ್ನು ಉತ್ತಮವಾಗಿ ಮಾಡುತ್ತಿದ್ದಾರೆ ಎಂದು ಖಚಿತಪಡಿಸಿಕೊಳ್ಳಲು ಪ್ರತಿ ಯೋಜನೆಗೆ ಟೆಂಡರ್ ಪ್ರಕ್ರಿಯೆಯು ಸಾರ್ವಜನಿಕರಿಗೆ ಲಭ್ಯವಿರಬೇಕು. ಇಲ್ಲಿ ಪ್ರಶ್ನೆ ಎಷ್ಟು ಹಣ ಬಜೆಟ್‌ನಲ್ಲಿ ಮೀಸಲಾಗುತ್ತಿದೆ ಎಂಬುದಲ್ಲ, ಅದನ್ನು ನಾಗರಿಕರ ಪಾಲ್ಗೊಳ್ಳುವಿಕೆಯಿಂದ ಎಷ್ಟು ಸುಪ್ತವಾಗಿ, ಜವಾಬ್ದಾರಿಯುತವಾಗಿ ಬಳಸಲಾಗುತ್ತಿದೆ ಎಂಬುದಾಗಿದೆ” ಎಂದು ತಿಳಿಸಿದೆ.

“ಬೆಂಗಳೂರು ನವನಿರ್ಮಾಣ ಪಕ್ಷ (ಬೆನಪ) 2015-2020 ಬಿಬಿಎಂಪಿ ಕೌನ್ಸಿಲ್ ಅವಧಿಯಲ್ಲಿ 63,629 ವಾರ್ಡ್ ಮಟ್ಟದ ಯೋಜನೆಗಳ ಮಾಹಿತಿಯನ್ನು (₹21,653 ಕೋಟಿ ಮೌಲ್ಯದ) ಬಿಬಿಎಂಪಿಯಿಂದ ಸಂಗ್ರಹಿಸಿ ತನ್ನ ವೆಬ್‌ಸೈಟ್‌ನಲ್ಲಿ ಪ್ರತಿ ಯೋಜನೆಯ ವಿವರವನ್ನು ವರ್ಷವಾರು ಪ್ರಕಟಿಸಿದೆ. ಬಿಬಿಎಂಪಿ ಇದೇ ರೀತಿ ಎಲ್ಲಾ ಯೋಜನೆಗಳ ವಿವರವನ್ನು ಬಹಿರಂಗಪಡಿಸಬಲ್ಲದೆ” ಎಂದು ಬಿಎನ್‌ಪಿ ಪ್ರಶ್ನಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...