ಬ್ರ್ಯಾಂಡ್ ಬೆಂಗಳೂರು | ಐಡಿಯಾಥಾನ್ 2023 ಸ್ಪರ್ಧೆಗೆ ಏಳು ಶಾಲಾ ತಂಡಗಳು ಆಯ್ಕೆ

Date:

ತಮ್ಮ ನಗರಗಳ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಹಾಗೂ ನಾಗರಿಕ ಚಟುವಟಿಕೆಯಲ್ಲಿ ಶಾಲಾ ಮಕ್ಕಳ ಭಾಗವಹಿಸುವಿಕೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿರುವ “ಬ್ರ್ಯಾಂಡ್ ಬೆಂಗಳೂರು ಐಡಿಯಾಥಾನ್ 2023” ಸ್ಪರ್ಧೆಯ ಅಂತಿಮ ಸುತ್ತಿಗೆ ಏಳು ಶಾಲಾ ತಂಡಗಳು ಆಯ್ಕೆಯಾಗಿವೆ.

ಕರ್ನಾಟಕ ಸರ್ಕಾರದ ಬ್ರ್ಯಾಂಡ್ ಬೆಂಗಳೂರು ಯೋಜನೆಯ ಮೂಲಕ ಬೆಂಗಳೂರು ನಗರವನ್ನು ಸ್ವಚ್ಛ, ಹಸಿರು ಹಾಗೂ ಸುಸ್ಥಿರ ನಗರವಾಗಿ ಮಾರ್ಪಾಡು ಮಾಡುವ ನಿಟ್ಟಿನಲ್ಲಿ ಇದೇ ಮೊದಲ ಬಾರಿಗೆ ಐಡಿಯಾಥಾನ್ 2023 ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಇದೊಂದು ಅಂತರ್‌ ಶಾಲಾ ಸ್ಪರ್ಧೆಯಾಗಿದ್ದು, ಈ ಸ್ಪರ್ಧೆಯಲ್ಲಿ ನಗರದ ಸಮಸ್ಯೆಗಳಿಗೆ ಶಾಲಾ ಮಕ್ಕಳು ಪರಿಹಾರ ನೀಡುವ ಅವಕಾಶ ಕಲ್ಪಿಸಿಕೊಟ್ಟಿದೆ. ಆಮೂಲಕ ಮಕ್ಕಳ ಮಿದುಳಿನ ಸಾಮರ್ಥ್ಯ ಪೋಷಿಸುವ ಪ್ರಯತ್ನವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

9ನೇ ತರಗತಿಯಿಂದ 12+ ಪಿಯುಸಿ ಕಾಲೇಜು ಮಕ್ಕಳ ಸ್ಪರ್ಧೆ ಇದಾಗಿದ್ದು, ಶ್ರೀಮತಿ ಐಶ್ವರ್ಯ ಡಿಕೆಎಸ್ ಹೆಗಡೆ ಈ ಕಾರ್ಯಕ್ರಮದ ರೂವಾರಿಯಾಗಿದ್ದಾರೆ. ಈ ಸ್ಪರ್ಧೆಗೆ ನೊಂದಣಿಯಾಗಿದ್ದ ಶಾಲೆಗಳ ಪೈಕಿ ಅಗ್ರ 50 ಶಾಲೆಗಳು ಈ ಸ್ಪರ್ಧೆಗೆ ಆಯ್ಕೆಯಾಗಿದ್ದವು. ನಂತರದ ಹಂತದ ಸ್ಪರ್ಧೆಯಿಂದ ಅಗ್ರ 25 ಶಾಲೆಗಳು ಸ್ಪರ್ಧೆಯಲ್ಲಿ ಮುಂದುವರಿದವು. ನಗರದ ವಿವಿಧ ಕ್ಷೇತ್ರಗಳ ಗಣ್ಯರು ಈ ಸ್ಪರ್ಧೆಯ ತೀರ್ಪುಗಾರರರಾಗಿದ್ದು ಶಾಲಾ ಮಕ್ಕಳು ನಗರದ ಅಭಿವೃದ್ಧಿಗೆ ತಮ್ಮ ಆಲೋಚನೆ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅತ್ತ ಅತಿಥಿ ಉಪನ್ಯಾಸಕರು ಇತ್ತ ಸರಕಾರ; ನಡುವೆ ನಲುಗದಿರಲಿ ವಿದ್ಯಾರ್ಥಿಗಳು

25 ಶಾಲೆಗಳ ಪೈಕಿ ಬನಶಂಕರಿಯ ಪ್ರೆಸಿಡೆನ್ಸಿ ಶಾಲೆ, ಎಸ್ ಜೆಆರ್ ಕೆಂಗೇರಿ ಪಬ್ಲಿಕ್ ಶಾಲೆ, ಆಕ್ರಿಡ್ಜ್ ಇಂಟರ್ ನ್ಯಾಷನಲ್ ಶಾಲೆ, ಸೇಂಟ್ ಮಾರ್ಕ್ಸ್ ಕಾನ್ವೆಂಟ್, ನ್ಯಾಷನಲ್ ಹಿಲ್ ವ್ಯೂ ಪಬ್ಲಿಕ್ ಶಾಲೆ ಬನಶಂಕರಿ, ಮಿತ್ರಾ ಅಕಾಡೆಮಿ, ಕಸ್ತೂರಿ ನಗರ ಪ್ರೆಸಿಡೆನ್ಸಿ ಶಾಲೆ ಅಂತಿಮ ಸುತ್ತಿಗೆ ಪ್ರವೇಶ ಪಡೆದಿವೆ.

ಈ ಸ್ಪರ್ಧೆಯ ಅಂತಿಮ ಸುತ್ತನ್ನು ಜನವರಿ 13, 2024ರಂದು ನಡೆಯುವ ಯೂತ್ ಲೀಡರ್ ಶಿಪ್ ಸಮ್ಮೇಳನ 2023 ದಲ್ಲಿ ನಡೆಸಲಾಗುವುದು. ಈ ಕಾರ್ಯಕ್ರಮದಲ್ಲಿ ಹಲವು ಗಣ್ಯರು ಭಾಗವಹಿಸಲಿದ್ದಾರೆ. ಅಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಶಾಲಾ ಮಕ್ಕಳ ಜತೆ ಸಂವಾದ ನಡೆಸಲಿದ್ದಾರೆ. ಲೇಖಕಿ ಸುಧಾ ಮೂರ್ತಿ ಈ ಸಮ್ಮೇಳನದಲ್ಲಿ ಮುಖ್ಯ ತೀರ್ಪುಗಾರರಾಗಿರುತ್ತಾರೆ. ನಟ ರಮೇಶ್ ಅರವಿಂದ್ ಸ್ಪೂರ್ತಿ ಮಾತುಗಳನ್ನು ಆಡಲಿದ್ದಾರೆ.

ಯೂತ್ ಲೀಡರ್ ಶಿಪ್ ಸಮ್ಮೇಳನ ಹಾಗೂ ಐಡಿಯಾಥಾನ್ ಕಾರ್ಯಕ್ರಮವನ್ನು ಗ್ರೇಕ್ಯಾಪ್ಸ್ ನಾಲೆಡ್ಜ್ ಟ್ರೈಬ್ ಹಾಗೂ ಶಿಕ್ಷಣ ತಜ್ಞ ಗಿರಿ ಪಿಕ್ ಬ್ರೈನ್ ಬಾಲಸುಬ್ರಮನಿಯಂ ಅವರು ನಡೆಸಿಕೊಡಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...