ಉದ್ಯೋಗಾಕಾಂಕ್ಷಿಗಳಿಗೆ ಕೌಶಲ್ಯ ತರಬೇತಿ ನೀಡಿ ಉದ್ಯೋಗಗಳನ್ನು ಒದಗಿಸುವ ಸಂಸ್ಥೆ ‘ಭಾರತ್ ಸ್ಕೂಲ್ ಆಫ್ ವರ್ಟಿಕಲ್ ಟ್ರಾನ್ಸ್ಪೋಟ್ರೇಷನ್’ (BSVT) ತನ್ನ ಮೊದಲ ಬ್ಯಾಚ್ ವಿದ್ಯಾರ್ಥಿಗಳಿಗೆ ತರಬೇತಿ ಪೂರ್ಣಗೊಳಿಸಿದೆ. ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ದುಬೈ ಮತ್ತು ಯುರೋಪ್ನಲ್ಲಿನ ಕಂಪನಿಗಳಲ್ಲಿ ಉದ್ಯೋಗಗಳನ್ನು ಕೊಡಿಸಿದೆ ಎಂದು ಬಿಎಸ್ವಿಟಿ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಂತೋಷ್ ಕುಮಾರ್ ಕೆ.ಎಸ್ ತಿಳಿಸಿದ್ದಾರೆ.
2024ರಲ್ಲಿ ಆರಂಭವಾದ ಸಂಸ್ಥೆಯು ತಮ್ಮ ಮೊದಲ ಬ್ಯಾಚ್ನ ವಿದ್ಯಾರ್ಥಿಗಳಿಗೆ ಯಶಸ್ವಿ ತರಬೇತಿ ಮತ್ತು ಉದ್ಯೋಗಗಳನ್ನು ಕೊಡಿಸಿದ್ದನ್ನು ಗುರುತಿಸಲು ಬೆಂಗಳೂರಿನಲ್ಲಿ ಶನಿವಾರ ಕಾರ್ಯಕ್ರಮ ಆಯೋಜಿಸಿತ್ತು. ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಶಾಸಕ ಎನ್.ಎ ಹ್ಯಾರಿಸ್, ಮಾಜಿ ಐಪಿಎಸ್ ಅಧಿಕಾರಿ, ಬಿಜೆಪಿ ಮುಖಂಡ ಭಾಸ್ಕರ್ ರಾವ್ ಸೇರಿದಂತೆ ಇತರರು ಭಾಗಿಯಾಗಿದ್ದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಸಾಧನೆ ಬಗ್ಗೆ ವಿವರಿಸಿದ ಸಂತೋಷ್ ಕುಮಾರ್, “ಬೆಂಗಳೂರಿನಲ್ಲಿ ಕಳೆದ ವರ್ಷ ಆರಂಭವಾದ ಬಿಎಸ್ವಿಟಿ, ತನ್ನ ಮೊದಲ ಬ್ಯಾಚ್ ವಿದ್ಯಾರ್ಥಿಗಳ ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ತರಬೇತಿ ಪಡೆದ ಎಲ್ಲ ವಿದ್ಯಾರ್ಥಿಗಳು ದುಬೈ ಮತ್ತು ಯುರೋಪ್ನಲ್ಲಿರುವ ಪ್ರಮುಖ ಕಂಪನಿಗಳಲ್ಲಿ ಉದ್ಯೋಗ ಪಡೆದಿದ್ದಾರೆ. ಇನ್ನೂ ಹಲವಾರು ವಿದ್ಯಾರ್ಥಿಗಳು ತಮ್ಮ ವೃತ್ತಿಪರ ಬೆಳವಣಿಗೆಯನ್ನು ಬಲಪಡಿಸಲು ಭಾರತದ ಪ್ರಮುಖ ಎಂಎನ್ಸಿ ಕಂಪನಿಗಳಲ್ಲಿ ‘ಇಂಟರ್ನ್ಶಿಪ್’ಗೆ ಸೇರಿದ್ದಾರೆ” ಎಂದು ತಿಳಿಸಿದ್ದಾರೆ.
“ಜಗತ್ತಿನಲ್ಲಿ ವೇಗವಾಗಿ ಬೆಳೆಯುತ್ತಿರುವ ಎಂಜಿನಿಯರಿಂಗ್ ವಲಯದಲ್ಲಿ ಯಶಸ್ವಿ ವೃತ್ತಿಜೀವನ ಕಟ್ಟಿಕೊಳ್ಳಲು ಬಯಸುವ ವಿದ್ಯಾರ್ಥಿಗಳಿಗೆ ಅಗತ್ಯ ತರಬೇತಿಯನ್ನು ಬಿಎಸ್ವಿಟಿ ನೀಡುತ್ತಿದೆ. ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (VTU) ಸಹಯೋಗದಲ್ಲಿ ಯುವಜನರಿಗೆ ಅಗತ್ಯ ತರಬೇತಿ, ಮಾರ್ಗದರ್ಶನ ಹಾಗೂ ಉದ್ಯೋಗಗಳನ್ನು ಕೊಡಿಸುತ್ತಿದೆ. ಪಿಯುಸಿಯಲ್ಲಿ ಉತ್ತೀರ್ಣರಾದ ಮತ್ತು ಪದವಿಗಳಲ್ಲಿ ಅರ್ಧಕ್ಕೆ ತಮ್ಮ ವಾಸಂಗವನ್ನು ಕಡಿತಗೊಳಿಸಿದ ಅಭ್ಯರ್ಥಿಗಳು ನಮ್ಮಲ್ಲಿ ತರಬೇತಿಗೆ ಸೇರಬಹುದು” ಎಂದು ಅವರು ತಿಳಿಸಿದ್ದಾರೆ.

BSVT ವಿನ ಪಠ್ಯ ಕ್ರಮವು ಅತ್ಯಾಧುನಿಕ ತಾಂತ್ರಿಕ ತರಬೇತಿ, ಉದ್ಯಮ ತಜ್ಞರನ್ನೊಳಗೊಂಡ ಗಣ್ಯರಿಂದ ಪ್ರಾಯೋಗಿಕ ಮಾರ್ಗದರ್ಶನದಿಂದ ಪ್ರಮುಖ ಉತ್ತಮ ಕಂಪನಿಗಳಲ್ಲಿ 100% ಉದ್ಯೋಗ ನೀಡಲಾಗುತ್ತದೆ ಎಂದಿದ್ದಾರೆ.
ಕಾರ್ಯಕ್ರಮದಲ್ಲಿ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಮೊಹಮ್ಮದ್ ಮುಷ್ತಾಕ್ ಸೇರಿದಂತೆ ಮೆಹರುಸ್ ಖಾನ್, ಶಾಲಿನಿ ಸಿಂಗ್, ಶ್ರೀ ದೇವಿ, ಆಸೀಫ್ ಹಯಾತ್ ಮತ್ತು ಇತರ ಗಣ್ಯ ವ್ಯಕ್ತಿಗಳು ಭಾಗಿಯಾಗಿದ್ದರು.




