ಉದ್ಯೋಗಾಕಾಂಕ್ಷಿಗಳಿಗೆ ತರಬೇತಿ-ಉದ್ಯೋಗ ಕೊಡಿಸುತ್ತಿದೆ BSVT: ಸಂತೋಷ್‌ ಕುಮಾರ್

Date:

ಉದ್ಯೋಗಾಕಾಂಕ್ಷಿಗಳಿಗೆ ಕೌಶಲ್ಯ ತರಬೇತಿ ನೀಡಿ ಉದ್ಯೋಗಗಳನ್ನು ಒದಗಿಸುವ ಸಂಸ್ಥೆ ‘ಭಾರತ್ ಸ್ಕೂಲ್ ಆಫ್ ವರ್ಟಿಕಲ್ ಟ್ರಾನ್ಸ್‌ಪೋಟ್ರೇಷನ್’ (BSVT) ತನ್ನ ಮೊದಲ ಬ್ಯಾಚ್‌ ವಿದ್ಯಾರ್ಥಿಗಳಿಗೆ ತರಬೇತಿ ಪೂರ್ಣಗೊಳಿಸಿದೆ. ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ದುಬೈ ಮತ್ತು ಯುರೋಪ್‌ನಲ್ಲಿನ ಕಂಪನಿಗಳಲ್ಲಿ ಉದ್ಯೋಗಗಳನ್ನು ಕೊಡಿಸಿದೆ ಎಂದು ಬಿಎಸ್‌ವಿಟಿ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಂತೋಷ್ ಕುಮಾರ್ ಕೆ.ಎಸ್ ತಿಳಿಸಿದ್ದಾರೆ.

2024ರಲ್ಲಿ ಆರಂಭವಾದ ಸಂಸ್ಥೆಯು ತಮ್ಮ ಮೊದಲ ಬ್ಯಾಚ್‌ನ ವಿದ್ಯಾರ್ಥಿಗಳಿಗೆ ಯಶಸ್ವಿ ತರಬೇತಿ ಮತ್ತು ಉದ್ಯೋಗಗಳನ್ನು ಕೊಡಿಸಿದ್ದನ್ನು ಗುರುತಿಸಲು ಬೆಂಗಳೂರಿನಲ್ಲಿ ಶನಿವಾರ ಕಾರ್ಯಕ್ರಮ ಆಯೋಜಿಸಿತ್ತು. ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ ಶಾಸಕ ಎನ್‌.ಎ ಹ್ಯಾರಿಸ್, ಮಾಜಿ ಐಪಿಎಸ್‌ ಅಧಿಕಾರಿ, ಬಿಜೆಪಿ ಮುಖಂಡ ಭಾಸ್ಕರ್ ರಾವ್ ಸೇರಿದಂತೆ ಇತರರು ಭಾಗಿಯಾಗಿದ್ದರು.

bsvt1

ಕಾರ್ಯಕ್ರಮದಲ್ಲಿ ಸಂಸ್ಥೆಯ ಸಾಧನೆ ಬಗ್ಗೆ ವಿವರಿಸಿದ ಸಂತೋಷ್‌ ಕುಮಾರ್, “ಬೆಂಗಳೂರಿನಲ್ಲಿ ಕಳೆದ ವರ್ಷ  ಆರಂಭವಾದ ಬಿಎಸ್‌ವಿಟಿ, ತನ್ನ ಮೊದಲ ಬ್ಯಾಚ್ ವಿದ್ಯಾರ್ಥಿಗಳ ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ತರಬೇತಿ ಪಡೆದ ಎಲ್ಲ ವಿದ್ಯಾರ್ಥಿಗಳು ದುಬೈ ಮತ್ತು ಯುರೋಪ್‌ನಲ್ಲಿರುವ ಪ್ರಮುಖ ಕಂಪನಿಗಳಲ್ಲಿ ಉದ್ಯೋಗ ಪಡೆದಿದ್ದಾರೆ. ಇನ್ನೂ ಹಲವಾರು ವಿದ್ಯಾರ್ಥಿಗಳು ತಮ್ಮ ವೃತ್ತಿಪರ ಬೆಳವಣಿಗೆಯನ್ನು ಬಲಪಡಿಸಲು ಭಾರತದ ಪ್ರಮುಖ ಎಂಎನ್‌ಸಿ ಕಂಪನಿಗಳಲ್ಲಿ ‘ಇಂಟರ್ನ್‌ಶಿಪ್’ಗೆ ಸೇರಿದ್ದಾರೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜಗತ್ತಿನಲ್ಲಿ ವೇಗವಾಗಿ ಬೆಳೆಯುತ್ತಿರುವ ಎಂಜಿನಿಯರಿಂಗ್ ವಲಯದಲ್ಲಿ ಯಶಸ್ವಿ ವೃತ್ತಿಜೀವನ ಕಟ್ಟಿಕೊಳ್ಳಲು ಬಯಸುವ ವಿದ್ಯಾರ್ಥಿಗಳಿಗೆ ಅಗತ್ಯ ತರಬೇತಿಯನ್ನು ಬಿಎಸ್‌ವಿಟಿ ನೀಡುತ್ತಿದೆ. ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (VTU) ಸಹಯೋಗದಲ್ಲಿ ಯುವಜನರಿಗೆ ಅಗತ್ಯ ತರಬೇತಿ, ಮಾರ್ಗದರ್ಶನ ಹಾಗೂ ಉದ್ಯೋಗಗಳನ್ನು ಕೊಡಿಸುತ್ತಿದೆ. ಪಿಯುಸಿಯಲ್ಲಿ ಉತ್ತೀರ್ಣರಾದ ಮತ್ತು ಪದವಿಗಳಲ್ಲಿ ಅರ್ಧಕ್ಕೆ ತಮ್ಮ ವಾಸಂಗವನ್ನು ಕಡಿತಗೊಳಿಸಿದ ಅಭ್ಯರ್ಥಿಗಳು ನಮ್ಮಲ್ಲಿ ತರಬೇತಿಗೆ ಸೇರಬಹುದು” ಎಂದು ಅವರು ತಿಳಿಸಿದ್ದಾರೆ.

bstv2

BSVT ವಿನ ಪಠ್ಯ ಕ್ರಮವು ಅತ್ಯಾಧುನಿಕ ತಾಂತ್ರಿಕ ತರಬೇತಿ, ಉದ್ಯಮ ತಜ್ಞರನ್ನೊಳಗೊಂಡ ಗಣ್ಯರಿಂದ ಪ್ರಾಯೋಗಿಕ ಮಾರ್ಗದರ್ಶನದಿಂದ ಪ್ರಮುಖ ಉತ್ತಮ ಕಂಪನಿಗಳಲ್ಲಿ 100% ಉದ್ಯೋಗ ನೀಡಲಾಗುತ್ತದೆ ಎಂದಿದ್ದಾರೆ.

ಕಾರ್ಯಕ್ರಮದಲ್ಲಿ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಮೊಹಮ್ಮದ್ ಮುಷ್ತಾಕ್ ಸೇರಿದಂತೆ ಮೆಹರುಸ್ ಖಾನ್, ಶಾಲಿನಿ ಸಿಂಗ್, ಶ್ರೀ ದೇವಿ, ಆಸೀಫ್ ಹಯಾತ್ ಮತ್ತು ಇತರ ಗಣ್ಯ ವ್ಯಕ್ತಿಗಳು ಭಾಗಿಯಾಗಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...