ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸುಟ್ಟ ಗಾಯಕ್ಕೆ ಚಿಕಿತ್ಸೆ; ಪರಿಹಾರ ಪಡೆಯದ ಸಂತ್ರಸ್ತರು

Date:

  • ಭಯ, ಸಾಮಾಜಿಕ ಒತ್ತಡದಿಂದ ಸಂತ್ರಸ್ತರು ಪೊಲೀಸ್ ಪ್ರಕರಣ ದಾಖಲಿಸಿಲ್ಲ
  • ಸರ್ಕಾರದ ಯೋಜನೆಯಡಿ ₹2 ರಿಂದ ₹8 ಲಕ್ಷ ಪರಿಹಾರವನ್ನು ಪಡೆಯಬಹುದು

ರಾಜಧಾನಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ವರ್ಷಕ್ಕೆ ನೂರಾರು ಮಂದಿ ಸುಟ್ಟ ಗಾಯಗಳೊಂದಿಗೆ ಚಿಕಿತ್ಸೆ ಪಡೆಯಲು ದಾಖಲಾಗುತ್ತಾರೆ. ದಾಖಲಾಗುವ ಸಂತ್ರಸ್ತರಿಗೆ ಸರ್ಕಾರದಿಂದ ಸಂತ್ರಸ್ತ ಪರಿಹಾರ ಯೋಜನೆಯಡಿ ಪರಿಹಾರವನ್ನು ನೀಡಲಾಗುತ್ತದೆ ಆದರೆ, ಇಲ್ಲಿಯವರೆಗೂ ಯಾರೂ ಈ ಯೋಜನೆಯ ಲಾಭವನ್ನು ಪಡೆದಿಲ್ಲ.

ಭಯ ಅಥವಾ ಸಾಮಾಜಿಕ ಒತ್ತಡದಿಂದ ಸಂತ್ರಸ್ತರು ಪೊಲೀಸ್ ಪ್ರಕರಣಗಳನ್ನು ದಾಖಲಿಸದೇ ಸರ್ಕಾರದ ಯೋಜನೆಯಡಿ ಪರಿಹಾರ ಪಡೆಯುತ್ತಿಲ್ಲ.

ಪತಿಯ ಕಿರುಕುಳ, ಅತ್ತೆ ಕಾಟ, ವರದಕ್ಷಿಣೆ ಕಿರುಕುಳ ಸೇರಿದಂತೆ ನಾನಾ ಸಮಸ್ಯೆಗಳಿಂದ ಮಹಿಳೆಯರು ಗಂಡನಿಂದ ಬೆಂಕಿ ಹಚ್ಚುವಂತಹ ಹೀನ ಕೃತ್ಯಗಳಿಗೆ ಸಿಲುಕುತ್ತಾರೆ. ಬಳಿಕ ಅವರು ಗಂಡನ ಮನೆಯನ್ನು ತ್ಯಜಿಸಿ ಹೋಗುತ್ತಾರೆ. ಆರ್ಥಿಕ ಬೆಂಬಲವಿಲ್ಲದೇ ಒಂಟಿಯಾಗಿ ಜೀವನ ನಡೆಸುತ್ತಾರೆ. ಸಂತ್ರಸ್ತರು ಸುಟ್ಟ ಗಾಯದ ತೀವ್ರತೆಯ ಅನುಗುಣವಾಗಿ ಅವರು ಸರ್ಕಾರದ ಯೋಜನೆಯಡಿ ₹2 ರಿಂದ ₹8 ಲಕ್ಷ ಪರಿಹಾರವನ್ನು ಪಡೆಯಬಹುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜನವರಿ 2020 ಮತ್ತು ಏಪ್ರಿಲ್ 2023ರ ನಡುವೆ ವಿಕ್ಟೋರಿಯಾ ಆಸ್ಪತ್ರೆಗೆ ಕೌಟುಂಬಿಕ ಹಿಂಸೆಗೆ ಒಳಗಾದ ಸುಮಾರು 600 ಸುಟ್ಟ ರೋಗಿಗಳು ದಾಖಲಾಗಿದ್ದರು. ಅವರಿಗೆ ಚಿಕಿತ್ಸೆ ನೀಡಲಾಗಿದೆ. ಸಂಗಾತಿಯು ಮಹಿಳೆಯರನ್ನು ಸುಟ್ಟುಹಾಕಿದ ಪ್ರಕರಣಗಳು ಅಥವಾ ನಿರಂತರ ಕಿರುಕುಳದಿಂದಾಗಿ ಮಹಿಳೆಯರು ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣಗಳು ಇದರಲ್ಲಿ ಸೇರಿವೆ” ಎಂದು ಸಂತ್ರಸ್ತರ ಪರ ಆಸ್ಪತ್ರೆಯೊಂದಿಗೆ ಕೆಲಸ ಮಾಡುವ ಅವೇಕ್ಷಾ ಎಂಬ ಎನ್‌ಜಿಒನ ಸತ್ಯ ದೇವಿ ಹೇಳಿದರು.

“ಪರಿಹಾರ ಪಡೆಯಲು ಸಂತ್ರಸ್ತರು ಮೊದಲು ಎಫ್‌ಐಆರ್ ದಾಖಲಿಸಬೇಕು. ಆದರೆ, 33 ಪ್ರಕರಣಗಳಲ್ಲಿ ಮಾತ್ರ ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಅದರಲ್ಲಿ 28 ಪ್ರಕರಣಗಳು ಸುಟ್ಟಗಾಯಗಳು, ವರದಕ್ಷಿಣೆ ಸಂಬಂಧಿತ ಹಿಂಸೆ ಮತ್ತು ಆತ್ಮಹತ್ಯೆಗೆ ಪ್ರಚೋದನೆಯಿಂದ ಉಂಟಾದ ಸಾವುಗಳಾಗಿವೆ. ಉಳಿದ ಐವರು ಬದುಕುಳಿದವರು” ಎಂದರು.

“ಸಂತ್ರಸ್ತರು ನ್ಯಾಯಾಲಯದ ವಿಚಾರಣೆಯ ನಂತರ ಪರಿಹಾರವನ್ನು ಪಡೆಯಬಹುದು. ಮಧ್ಯಂತರ ಪರಿಹಾರಕ್ಕಾಗಿ, ಅವರು ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರವನ್ನು ಸಂಪರ್ಕಿಸಬಹುದು. ಈವರೆಗೆ ಇಬ್ಬರು ಮಾತ್ರ ಪ್ರಾಧಿಕಾರಕ್ಕೆ ಬಂದಿದ್ದಾರೆ. ಅವರಲ್ಲಿ ಒಬ್ಬರಿಗೆ ಮಾತ್ರ, ದಾಳಿಕೋರ ಮೂರನೇ ವ್ಯಕ್ತಿಯಾಗಿದ್ದು, ಪತಿ ಅಲ್ಲ, ಅವರು 1.5 ಲಕ್ಷ ರೂಪಾಯಿಗಳ ಮಧ್ಯಂತರ ಪರಿಹಾರವನ್ನು ಪಡೆದರು” ಎಂದು ದೇವಿ ಹೇಳಿದರು.

“ಸಂತ್ರಸ್ತರು ಸಾಮಾನ್ಯವಾಗಿ ಸುಟ್ಟಗಾಯಗಳ ನಿಜವಾದ ಕಾರಣವನ್ನು ವೈದ್ಯರಿಗೆ ಅಥವಾ ಪೊಲೀಸರಿಗೆ ಬಹಿರಂಗಪಡಿಸುವುದಿಲ್ಲ. ಚಿಕಿತ್ಸೆಯು ಸಾಮಾನ್ಯವಾಗಿ ಆರರಿಂದ ಏಳು ತಿಂಗಳವರೆಗೆ ಇರುತ್ತದೆ. ಆದ್ದರಿಂದ, ಕೆಲ ಸಂತ್ರಸ್ತರು ಆಸ್ಪತ್ರೆಯಲ್ಲಿ ನೋಡಿಕೊಳ್ಳವುದು, ಖರ್ಚುಗಳಿಗಾಗಿ ಮತ್ತು ನಂತರದ ಭೇಟಿಗಳಿಗಾಗಿ ತಮ್ಮ ಗಂಡನ ಮೇಲೆ ಅವಲಂಬಿತರಾಗಿದ್ದಾರೆ. ಆದ್ದರಿಂದ, ಅವರು ಈ ಘಟನೆಗಳ ಬಗ್ಗೆ ಪ್ರಕರಣ ದಾಖಲಿಸುವುದಿಲ್ಲ. ಆಕಸ್ಮಿಕವಾಗಿ ನಡೆದಿದೆ ಎಂದು ಹೇಳುತ್ತಾರೆ” ಎಂದು ಅವರು ಹೇಳಿದರು.

ಈ ಸುದ್ದಿ ಓದಿದ್ದೀರಾ? ‘ಗೃಹಜ್ಯೋತಿ’ ವಿರುದ್ಧ ಚೆಂಡು ಹೂವು ಮುಡಿದುಕೊಂಡು ವಿನೂತನ ಪ್ರತಿಭಟನೆ: ಆಪ್

“ಸಂತ್ರಸ್ತರು ಹೇಳಿಕೊಂಡಂತೆ ಸುಟ್ಟಗಾಯಗಳು ಅಡುಗೆಮನೆಯ ಅಪಘಾತಗಳಿಂದ ಸಂಭವಿಸಿರುವುದು ಅಲ್ಲ ಎಂಬುದು ಸ್ಪಷ್ಟವಾದಾಗಲೂ ಪೊಲೀಸರು ಪ್ರಕರಣಗಳನ್ನು ತನಿಖೆ ಮಾಡುವುದಿಲ್ಲ. ಸುಟ್ಟ ಗಾಯಗಳಿಂದ ಅವರ ಮುಂದುವರಿದ ಆರೋಗ್ಯ ಸಮಸ್ಯೆಗಳಿಂದ, ಅವರು ಯೋಗ್ಯವಾದ ಉದ್ಯೋಗಗಳನ್ನು ಪಡೆಯಲು ಸಾಧ್ಯವಾಗುವುದಿಲ್ಲ. ಬಾಡಿಗೆ, ಆಹಾರ ಮತ್ತು ಮಕ್ಕಳ ಶಿಕ್ಷಣ ಎಲ್ಲವೂ ತೊಂದರೆಯಾಗುತ್ತದೆ” ಎಂದು ದೇವಿ ಹೇಳಿದರು.

ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಉಪ ಕಾರ್ಯದರ್ಶಿ ರಾಘವೇಂದ್ರ ಶೆಟ್ಟಿಗಾರ್ ಮಾತನಾಡಿ, “ಪೊಲೀಸರು ಕೌಟುಂಬಿಕ ದೌರ್ಜನ್ಯ ಪ್ರಕರಣಗಳನ್ನು ಗಂಭೀರವಾಗಿ ತನಿಖೆ ಮಾಡಲು ಮತ್ತು ಎಫ್‌ಐಆರ್‌ಗಳನ್ನು ದಾಖಲಿಸಲು ಒಲವು ತೋರುತ್ತಿಲ್ಲ. ಪರಿಹಾರ ನೀಡುವ ಬಗ್ಗೆ ಅರಿವಿನ ಕೊರತೆ ಮತ್ತೊಂದು ಸಮಸ್ಯೆಯಾಗಿದೆ” ಎಂದು ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...