ಮುಖ್ಯಕಚೇರಿ ಹೊರತುಪಡಿಸಿ ಬೈಜೂಸ್‌ನ ಎಲ್ಲ ಕಚೇರಿ ಬಂದ್; ಉದ್ಯೋಗಿಗಳಿಗೆ ‘ವರ್ಕ್ ಫ್ರಮ್ ಹೋಮ್’

Date:

ನಿರಂತರವಾಗಿ ಒಂದಲ್ಲ ಒಂದು ಸಮಸ್ಯೆಯನ್ನು ಎದುರಿಸುತ್ತಿರುವ ಬೈಜೂಸ್ ಸಂಸ್ಥೆ ಈಗ ಬೆಂಗಳೂರಿನಲ್ಲಿರುವ ತನ್ನ ಮುಖ್ಯ ಕಚೇರಿಯನ್ನು ಹೊರತುಪಡಿಸಿ ಉಳಿದೆಲ್ಲ ಕಚೇರಿಗಳನ್ನು ಮುಚ್ಚಿದೆ. ಜೊತೆಗೆ 14,000 ಉದ್ಯೋಗಿಗಳಿಗೆ ‘ವರ್ಕ್ ಫ್ರಮ್ ಹೋಮ್’ ನೀಡಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಸುಮಾರು ಒಂದು ಸಾವಿರ ಉದ್ಯೋಗಿಗಳು ಕಾರ್ಯನಿರ್ವಹಿಸುವ ಬೆಂಗಳೂರಿನಲ್ಲಿರುವ ತನ್ನ ಮುಖ್ಯಕಚೇರಿ ಬಿಟ್ಟು ದೇಶದಾದ್ಯಂತ ಇರುವ ಉಳಿದೆಲ್ಲ ಕಚೇರಿಯನ್ನು ಬೈಜೂಸ್ ಮುಚ್ಚಿದೆ. ಕಳೆದ ಕೆಲವು ತಿಂಗಳುಗಳಿಂದ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿರುವ ಬೈಜೂಸ್, ಈ ಕಚೇರಿಗಳ ಒಪ್ಪಂದವನ್ನು ಮತ್ತೆ ಮಾಡಿಕೊಳ್ಳದೆ ಖಾಲಿ ಮಾಡಿದೆ ಎಂದು ವರದಿ ಉಲ್ಲೇಖಿಸಿದೆ. ಆದರೆ 6ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗಾಗಿರುವ ಸುಮಾರು 300ರಷ್ಟು ಟ್ಯೂಷನ್ ಸೆಂಟರ್‌ಗಳನ್ನು ಬೈಜೂಸ್ ಮುಚ್ಚಿಲ್ಲ.

ಇನ್ನು ಕಳೆದ ತಿಂಗಳು ಷೇರುದಾರರು ಬೈಜೂ ರವೀಂದ್ರನ್‌ರನ್ನು ಸಿಇಒ ಸ್ಥಾನದಿಂದ ಕೆಳಗಿಳಿಸುವುದರ ಪರವಾಗಿ ಮತ ಚಲಾಯಿಸಿದ್ದಾರೆ. ಆದರೆ ಈ ನಿರ್ಣಯವನ್ನು ತಿರಸ್ಕರಿಸಿರುವ ಬೈಜೂಸ್, “ಕೆಲವೇ ಷೇರುದಾರರು ಇರುವಾಗ ಕೈಗೊಂಡ ನಿರ್ಣಯ ಇದಾಗಿದೆ, ಇದನ್ನು ಮಾನ್ಯ ಮಾಡಲಾಗದು” ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಿಕ್ಕಟ್ಟಿನ ಮಧ್ಯೆ ಬೈಜೂ ರವೀಂದ್ರನ್ ತನ್ನ ಪ್ರಮುಖ ಹೂಡಿಕೆದಾರರ ಬೆಂಬಲವನ್ನು ಕಳೆದುಕೊಂಡಿದ್ದಾರೆ ಮತ್ತು ಸಂಸ್ಥೆಗೆ ಸಾಲ ನೀಡಿದ ಯುಎಸ್‌ ಸಂಸ್ಥೆಯೊಂದಿಗೆ ಕಾನೂನು ಸಮರ ನಡೆಸುತ್ತಿದ್ದಾರೆ. ಇನ್ನು “ಫೆಬ್ರವರಿಯ ವೇತನವನ್ನು ನೀಡಲು ಸಾಧ್ಯವಾಗುತ್ತಿಲ್ಲ, ತಡವಾಗಿ ಸಂಬಳ ನೀಡಲಾಗುವುದು” ಎಂದು ಕಳೆದ ತಿಂಗಳು ರವೀಂದ್ರನ್ ತಿಳಿಸಿದ್ದಾರೆ.

ಕಳೆದ ಕೆಲವು ತಿಂಗಳುಗಳಿಂದ ನಗದು ಕೊರತೆಯನ್ನು ಎದುರಿಸುತ್ತಿರುವ ಬೈಜೂಸ್, 1.2 ಬಿಲಿಯನ್ ಡಾಲರ್ ಸಾಲದ ಹೊರೆಯಲ್ಲಿ ಸಿಲುಕಿದೆ. ಈ ಹಿಂದೆ ಸುಮಾರು 20 ಬಿಲಿಯನ್ ಡಾಲರ್ ಮಾರುಕಟ್ಟೆ ಮೌಲ್ಯವನ್ನು ಹೊಂದಿದ್ದ ಬೈಜೂಸ್‌ ಕಳೆದ ಒಂದು ವರ್ಷದಲ್ಲಿ ಶೇಕಡ 90ರಷ್ಟು ಮೌಲ್ಯವನ್ನು ಕಳೆದುಕೊಂಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...