ಬೆಂಗಳೂರು ಅಂದು-ಇಂದು – 1 | ಬದಲಾಗುತ್ತಿರುವ ಬೆಂದಕಾಳೂರು ಹಿಂದೆ ಹೇಗಿತ್ತು; ಇಲ್ಲಿ ನೋಡಿ!

Date:

ರಾಜ್ಯ ರಾಜಧಾನಿ ಬೆಂಗಳೂರು ತನ್ನ ಹವಾಮಾನದಿಂದ ಬಹಳಷ್ಟು ಜನರನ್ನು ತನ್ನತ್ತ ಸೆಳೆಯುತ್ತದೆ. ದೇಶ-ವಿದೇಶಗಳ ನಾನಾ ಭಾಗಗಳಿಂದ ಜನರು ವಲಸೆ ಬಂದು ನಗರದಲ್ಲಿಯೇ ನೆಲೆಸಿದ್ದು, ಮೂಲ ಬೆಂಗಳೂರಿಗರು ಕಾಣಸಿಗುವುದೇ ಕಷ್ಟವಾಗಿದೆ. ಕ್ರಿ.ಶ 1537ರವರೆಗೆ ಗಂಗರು, ಚೋಳರು ಹಾಗೂ ಹೊಯ್ಸಳರ ಆಳ್ವಿಕೆಗೆ ಈ ನಗರ ಒಳಪಟ್ಟಿತ್ತು. ನಂತರ ವಿಜಯನಗರ ಸಾಮ್ರಾಜ್ಯದ ಸಾಮಂತ ನಾಡಪ್ರಭು ಕೆಂಪೇಗೌಡರು ಮಣ್ಣಿನ ಕೋಟೆ ನಿರ್ಮಾಣ ಮಾಡಿ ಆಧುನಿಕ ಬೆಂಗಳೂರು ಉದಯಕ್ಕೆ ಕಾರಣಕರ್ತರಾದರು.

ಅಂದು-ಇಂದಿಗೆ ರಾಜಧಾನಿ ಅಪಾರವಾಗಿ ಬದಲಾವಣೆ ಕಂಡಿದೆ. ಕೆಂಪೇಗೌಡರು ಕಟ್ಟಿದ ಬೆಂಗಳೂರು ಮೊದಲು ಬೆಂದಕಾಳೂರು ಆಗಿತ್ತು. ನಂತರದ ದಿನಗಳಲ್ಲಿ ‘ಕೆರೆಗಳ ನಗರಿ’, ‘ಕಲ್ಯಾಣ ನಗರಿ’, ‘ಉದ್ಯಾನ ನಗರಿ’ ಎಂದು ಕರೆಸಿಕೊಂಡಿತ್ತು. ನಗರೀಕರಣ ಬೆಳೆಯುತ್ತಾ ಹೋದಂತೆ ‘ಸಿಲಿಕಾನ್ ವ್ಯಾಲಿ’, ‘ಗಾರ್ಬೇಜ್ ಸಿಟಿ’ ಎಂಬ ಹಲವಾರು ಬಿರುದುಗಳನ್ನು ಪಡೆದುಕೊಂಡಿತು.

ವಿಶ್ವದ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಉದ್ಯಮಿಗಳ ಅಚ್ಚುಮೆಚ್ಚಿನ 10 ನಗರಗಳಲ್ಲಿ ಬೆಂಗಳೂರು ಕೂಡ ಒಂದು. ಭಾರತದ 5ನೇ ದೊಡ್ಡ ಮಹಾನಗರವಾಗಿರುವ ಬೆಂಗಳೂರು ಅತೀ ಹೆಚ್ಚು ಜನಸಂಖ್ಯೆ ಹೊಂದಿರುವ ನಗರಗಳಲ್ಲಿ ಮೂರನೇ ಸ್ಥಾನದಲ್ಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಕ್ಟೋರಿಯಾ ಆಸ್ಪತ್ರೆ

1897ರಲ್ಲಿ ವಿಕ್ಟೋರಿಯಾ ರಾಣಿಯ 60 ವರ್ಷಗಳ ಆಳ್ವಿಕೆ (ವಜ್ರ ಮಹೋತ್ಸವ) ಪೂರ್ಣಗೊಂಡ ನೆನಪಿಗಾಗಿ ಮೈಸೂರಿನ ಅಂದಿನ ಮಹಾರಾಣಿ ರಾಜಪ್ರತಿನಿಧಿ ಕೆಂಪನಂಜಮ್ಗಮಣ್ಣಿ ಅವರು ವಿಕ್ಟೋರಿಯಾ ಆಸ್ಪತ್ರೆ ನಿರ್ಮಾಣಕ್ಕೆ ಮುಂದಾದರು. 1900 ಡಿಸೆಂಬರ್ 8 ರಂದು ಅಂದಿನ ವೈಸರಾಯ್ ಆಗಿದ್ದ ಲಾರ್ಡ್ ಕರ್ಜನ್ ಅವರು ಈ ಆಸ್ಪತ್ರೆಯನ್ನು ಉದ್ಘಾಟಿಸಿದರು.

ಅಂದು 140 ಹಾಸಿಗೆ ಸೌಲಭ್ಯದಿಂದ ಆರಂಭವಾದ ಆಸ್ಪತ್ರೆ ಇದೀಗ 1000ಕ್ಕೂ ಹೆಚ್ಚು ರೋಗಿಗಳಿಗೆ ಚಿಕಿತ್ಸೆ ನೀಡುವ ಸೌಲಭ್ಯವನ್ನು ಹೊಂದಿದೆ. ಭಾರತದ ಎರಡನೇ ಅತಿದೊಡ್ಡ ಆಸ್ಪತ್ರೆಯಾಗಿದೆ.

victoriya hospital

ಟೌನ್ ಹಾಲ್

1933ರ ಮಾರ್ಚ್ 6ರಂದು ಮಹಾರಾಜ ನಾಲ್ಕನೇ ಕೃಷ್ಣರಾಜ ಒಡೆಯರ್ ಅವರು ಟೌನ್‌ಹಾಲ್ ಕಟ್ಟಡಕ್ಕೆ ಅಡಿಪಾಯ ಹಾಕಿದರು. ಈ ಕಟ್ಟಡದವನ್ನು ಸರ್ ಮಿರ್ಜಾ ಇಸ್ಮಾಯಿಲ್ ಅವರು ವಿನ್ಯಾಸಗೊಳಿಸಿದರು. 1935 ಸೆಪ್ಟೆಂಬರ್ 11ರಂದು ಕಟ್ಟಡ ಪೂರ್ಣಗೊಂಡಿತು. ಯುವರಾಜ ಕಂಠೀರವ ನರಸಿಂಹರಾಜ ಒಡೆಯರ್ ಅವರು ಕಾರ್ಯಾರಂಭಿಸಿ, ಉದ್ಘಾಟಿಸಿದರು.

ಈ ಸುದ್ದಿ ಓದಿದ್ದೀರಾ? ಅಂತಾರಾಷ್ಟ್ರೀಯ ದಾದಿಯರ ದಿನ | ‘ನರ್ಸ್’ ಎಂಬುದು ಹುದ್ದೆಯಲ್ಲ, ಅದೊಂದು ಸೇವೆ

ಈ ಸಭಾಂಗಣವು ಎರಡು ಮಹಡಿಗಳನ್ನು ಹೊಂದಿದೆ. ಈ ಹಿಂದೆ 1,038 ಆಸನಗಳ ಸಾಮರ್ಥ್ಯವನ್ನು ಹೊಂದಿತ್ತು. ನವೀಕರಣದ ನಂತರ 810 ಆಸನ ಸಾಮರ್ಥ್ಯಕ್ಕೆ ಇಳಿಸಲಾಗಿದೆ.

ಬೆಂಗಳೂರು ನಗರ ಪುರಸಭೆಯ ಮಾಜಿ ಅಧ್ಯಕ್ಷರಾದ ಸರ್ ಕೆ.ಪಿ.ಪುಟ್ಟಣ್ಣ ಚೆಟ್ಟಿಯವರ ಹೆಸರನ್ನು ಈ ಕಟ್ಟಡಕ್ಕೆ ಇಡಲಾಗಿದೆ. ಸ್ಥಳೀಯವಾಗಿ ಬೆಂಗಳೂರು ಟೌನ್ ಹಾಲ್ ಎಂದು ಕರೆಯುತ್ತಾರೆ.

town hall

ರಸೆಲ್ ಮಾರುಕಟ್ಟೆ

ರಸೆಲ್ ಮಾರ್ಕೆಟ್ ಬೆಂಗಳೂರಿನ ಶಾಪಿಂಗ್ ಮಾರುಕಟ್ಟೆಯಾಗಿದ್ದು, ಇದನ್ನು ಬ್ರಿಟಿಷರು 1927ರಲ್ಲಿ ನಿರ್ಮಿಸಿದರು. 1933ರಲ್ಲಿ ಇಸ್ಮಾಯಿಲ್ ಸೇಟ್ ಅವರು ಉದ್ಘಾಟಿಸಿದರು. ಇದಕ್ಕೆ ಅಂದಿನ ಮುನ್ಸಿಪಲ್ ಕಮಿಷನರ್ ಟಿ ಬಿ ರಸೆಲ್ ಅವರ ಹೆಸರಿಡಲಾಗಿದೆ.

ಪ್ರಾಚೀನ ವಸ್ತುಗಳು ಮತ್ತು ಸೆಕೆಂಡ್ ಹ್ಯಾಂಡ್ ಸರಕುಗಳಿಂದ ಹಿಡಿದು ಮಾಂಸಹಾರ, ಹಣ್ಣುಗಳು ಸೇರಿದಂತೆ ನಾನಾ ಬಗೆಯ ಒಟ್ಟು 475 ಅಂಗಡಿಗಳಿವೆ.

russel market

ವಿಧಾನಸೌಧ

ರಾಜಧಾನಿ ಬೆಂಗಳೂರಿನ ಕಿರೀಟದಂತಿರುವ ವಿಧಾನಸೌಧಕ್ಕೆ ಅಂದಿನ ಪ್ರಧಾನಿ ಜವಾಹರಲಾಲ್‌ ನೆಹರು ಅವರು 1951 ಜುಲೈ 13ರಂದು ಶಂಕುಸ್ಥಾಪನೆ ಮಾಡಿದ್ದರು. 1952ರಲ್ಲಿ ಕಟ್ಟಡ ನಿರ್ಮಾಣ ಆರಂಭವಾಗಿ ಬರೋಬ್ಬರಿ ನಾಲ್ಕು ವರ್ಷಗಳ ಬಳಿಕ ಅಂದರೆ 1956ರಲ್ಲಿ ಪೂರ್ಣಗೊಂಡಿತು. ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯನವರ ಆಡಳಿತದ ಅವಧಿಯಲ್ಲಿ ವಿಧಾನಸೌಧ ನಿರ್ಮಾಣವಾಯಿತು.

vidhanasoudha

ಬ್ರಿಗೇಡ್ ರಸ್ತೆ

ಬ್ರಿಗೇಡ್ ರಸ್ತೆ ಒಂದು ದೊಡ್ಡ ವಾಣಿಜ್ಯ ಕೇಂದ್ರವಾಗಿದೆ. ಬೆಂಗಳೂರಿನ ಹೃದಯಭಾಗದಲ್ಲಿರುವ ಅತ್ಯಂತ ಜನನಿಬಿಡ ವ್ಯಾಪಾರಿ ಸ್ಥಳಗಳಲ್ಲಿ ಬ್ರಿಗೇಡ್‌ ರಸ್ತೆಯೂ ಒಂದು.

ಒಂದು ಕಾಲದಲ್ಲಿ ಇದು ಕಂಟೋನ್ಮೆಂಟ್ ಪ್ರದೇಶದ ಪ್ರಶಾಂತ ರಸ್ತೆಯಾಗಿತ್ತು. ಆದರೆ, ಈಗ ಸಮಯ ಬದಲಾದಂತೆಲ್ಲ ಇದು ಅಭಿವೃದ್ಧಿ ಹೊಂದುತ್ತಿರುವ ವಾಣಿಜ್ಯ ಕೇಂದ್ರವಾಗಿದೆ.

bangalore brigade road

e057b508e9e1b164fadd3c3edb023f5214f4d0a6d12066a30e302f9e3b0f6f24?s=150&d=mp&r=g
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...