ಸಮುದಾಯಗಳ ನಿರೀಕ್ಷೆ ಈಡೇರಿಸುವುದೇ ‘ಜಾತಿ ಸಮೀಕ್ಷೆ–2’; ಶನಿವಾರ ವಿಚಾರ ಸಂಕಿರಣ

Date:

ಕರ್ನಾಟಕ ಸರ್ಕಾರವು 2ನೇ ಜಾತಿ ಸಮೀಕ್ಷೆ ನಡೆಸಲು ತೀರ್ಮಾನಿಸಿದೆ. ಅದಕ್ಕಾಗಿ, ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ತಯಾರಿ ಆರಂಭಿಸಿದೆ. ಈ ಸಮೀಕ್ಷೆಯು ರಾಜ್ಯದ ಎಲ್ಲ ಸಮುದಾಯಗಳ ನಿರೀಕ್ಷೆಗಳನ್ನು ಈಡೇರಿಸುಬಹುದೇ ಎಂಬ ಚರ್ಚೆಗಳು ನಡೆಯುತ್ತಿದೆ. ಈ ಬಗ್ಗೆ ಚರ್ಚಿಸುವ ಉದ್ದೇಶದಿಂದ ಜಾಗೃತ ಕರ್ನಾಟಕ ಸಂಘಟನೆಯು ಆಗಸ್ಟ್‌ 30ರ ಶನಿವಾರ ‘ವಿಚಾರ ಸಂಕಿರಣವನ್ನು ಆಯೋಜಿಸಿದೆ. ಕಾರ್ಯಕ್ರಮವು ಬೆಂಗಳೂರಿನ ಗಾಂಧಿಭವನದಲ್ಲಿ ನಡೆಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.

ಕಾರ್ಯಕ್ರಮದ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಜಾಗೃತ ಕರ್ನಾಟಕದ ಧರಣೀಶ್‌ ಬೂಕನಕೆರೆ ಮತ್ತು ಪೃಥ್ವಿರಾಜ್‌, “ಜಾತಿ ಸಮೀಕ್ಷೆಯಲ್ಲಿ ವಿವಿಧ ಸಮುದಾಯಗಳ ಸಂಖ್ಯೆಯ ಪ್ರಶ್ನೆಯೂ ಬರುತ್ತದೆ. ಅಂತಿಮವಾಗಿ, ಸಾಮಾಜಿಕ ನ್ಯಾಯದ ಕುರಿತ ಈ ಮಹತ್ವದ ಪ್ರಕ್ರಿಯೆಯು, ಸಂಖ್ಯೆ, ಮೀಸಲಾತಿಯ ಪ್ರಮಾಣ, ರಾಜಕೀಯ ಪ್ರಾಬಲ್ಯ ಇತ್ಯಾದಿಗಳ ಮೇಲಾಟದಲ್ಲಿ ದಿಕ್ಕು ತಪ್ಪುತ್ತದೆ. ಹೀಗಾಗಬಾರದು ಎಂದರೆ, ನಾಡಿನ ಸಮಸ್ತ ಸಮುದಾಯಗಳೂ ಇದರಲ್ಲಿ ಸಕಾರಾತ್ಮಕವಾಗಿ ಪಾಲ್ಗೊಳ್ಳುವುದು ಅಗತ್ಯ” ಎಂದು ತಿಳಿಸಿದ್ದಾರೆ.

“ಆದ್ದರಿಂದ, ವಿಚಾರ ಸಂಕಿರಣವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ, ಜಾತಿ ಸಮೀಕ್ಷೆ ಕುರಿತು ಪ್ರಾಧ್ಯಾಪಕ ಡಾ. ಎ ನಾರಾಯಣ್ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ‘ಜಾತಿ ಸಮೀಕ್ಷೆ ಏಕೆ ಬೇಕು? ಸರ್ವ ಸಮುದಾಯಗಳಿಗೂ ಇದರಿಂದ ಇರುವ ಅನುಕೂಲಗಳೇನು?’ ಎಂಬ ವಿಚಾರದ ಬಗ್ಗೆ ನಿವೃತ್ತ ಅಪರ ಮುಖ್ಯ ಕಾರ್ಯದರ್ಶಿ ಎಲ್‌.ಕೆ ಅತೀಕ್ ಮತ್ತು ಶೋಷಿತ ವರ್ಗಗಳ ಒಕ್ಕೂಟದ ರಾಮಚಂದ್ರಪ್ಪ ಅವರು ವಿಚಾರ ಮಂಡಿಸಲಿದ್ದಾರೆ. ‘ಜಾತಿ ಸಮೀಕ್ಷೆ ಸಮರ್ಪಕವಾಗಿ ನಡೆಯಲು ಏನು ಮಾಡಬೇಕು?’ ಎಂಬ ವಿಷಯದ ಬಗ್ಗೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಸದಸ್ಯ ಕೆ.ಎನ್‌ ಲಿಂಗಪ್ಪ ಮತ್ತು ವಕೀಲೆ ರಾಜಲಕ್ಷ್ಮಿ ಅಂಕಲಗಿ ಮಾತನಾಡಲಿದ್ದಾರೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 08 29 at 1.51.07 PM

“ಮಧ್ಯಾಹ್ನದ ಗೋಷ್ಠಿಯಲ್ಲಿ ‘ಜಾತಿ ಸಮೀಕ್ಷೆಯ ಫಲಿತಾಂಶ ಪರಿಣಾಮಕಾರಿಯಾಗಿ ಜಾರಿಯಾಗಲು ಏನು ಮಾಡಬೇಕು?’ ಎಂಬ ವಿಚಾರದ ಕುರಿತು ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಡಾ. ಸಿ.ಎಸ್‌ ದ್ವಾರಕಾನಾಥ್, ನಿವೃತ್ತ ಐಎಎಸ್‌ ಅಧಿಕಾರಿ ಪಿ.ಎನ್ ಶ್ರೀನಿವಾಸಾಚಾರಿ, ಕಾಂಗ್ರೆಸ್‌ ಮುಖಂಡ ರವಿ ಬೋಸರಾಜು, ಅಹಿಂದ ಮುಖಂಡ ಸಾಸಲು ಸತೀಶ್, ಕೆ.ಜೆ ಜಯಲಕ್ಷ್ಮಿ ನಾಯಕ, ಇನ್‌ಸೈಟ್‌ ಅಕಾಡೆಮಿಯ ಜಿ.ಬಿ ವಿಜಯ್, ಬಸವ ಚಿಂತಕ ಸಿದ್ದಪ್ಪ ಮೂಲಗೆ ಮಾತನಾಡಲಿದ್ದಾರೆ” ಎಂದು ಆಯೋಜಕರು ಮಾಹಿತಿ ನೀಡಿದ್ದಾರೆ.

ಕಾರ್ಯಕ್ರಮವು ಶನಿವಾರ ಬೆಳಗ್ಗೆ 10:30ಕ್ಕೆ ಆರಂಭವಾಗಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...