ಎಮ್‌ಎಇಎಫ್‌ ಮುಚ್ಚಲು ಕೇಂದ್ರ ಆದೇಶ; ಶಿಕ್ಷಣ ತಜ್ಞರ ಖಂಡನೆ

Date:

“ಪಂಡಿತ್ ಜವಾಹರಲಾಲ್ ನೆಹರು ಅವರ ಸಂಪುಟದಲ್ಲಿ ಸ್ವತಂತ್ರ ಭಾರತದ ಮೊದಲ ಶಿಕ್ಷಣ ಮಂತ್ರಿಯಾಗಿ ಸೇವೆ ಸಲ್ಲಿಸಿದ ಮೌಲಾನಾ ಅಬುಲ್ ಕಲಾಂ ಆಜಾದ್ ಅವರ ಹೆಸರಿನಲ್ಲಿ ಸ್ಥಾಪಿಸಿದ್ದ ‘ಮೌಲಾನಾ ಆಜಾದ್ ಎಜುಕೇಶನ್ ಫೌಂಡೇಶನ್ (ಎಮ್‌ಎಇಎಫ್‌)’ ಅನ್ನು ಮುಚ್ಚಲು ಕೇಂದ್ರದ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವು ಆದೇಶ ಹೊರಡಿಸಿದೆ. ಇದು ಅತ್ಯಂತ ಖಂಡನೀಯ” ಎಂದು ಶಿಕ್ಷಣ ತಜ್ಞ ನಿರಂಜನಾರಾಧ್ಯ ವಿ.ಪಿ ಹೇಳಿದ್ದಾರೆ.

“ರಾಷ್ಟ್ರಕ್ಕೆ ಅನನ್ಯ ಕೊಡುಗೆ ನೀಡಿದವರಲ್ಲಿ ಒಬ್ಬರಾದ ಮೌಲಾನ್ ಅಜಾದ್ ಅವರು ಸ್ವಾತಂತ್ರ್ಯ ಭಾರತದ ಮೊದಲ ಶಿಕ್ಷಣ ಸಚಿವರೂ, ದೇಶಕಂಡ ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರರು ಮತ್ತು ವಿದ್ವಾಂಸರು ಆಗಿದ್ದರು. ಆಜಾದ್ ಅವರ ಹೆಸರಿನಲ್ಲಿ ಸ್ಥಾಪಿಸಿದ್ದ ಮೌಲಾನಾ ಆಜಾದ್ ಎಜುಕೇಶನ್ ಫೌಂಡೇಶನ್ ಅನ್ನು ಮುಚ್ಚಲು ಕೇಂದ್ರದ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವು ಹೊರಡಿಸದ ಆದೇಶ ಅತ್ಯಂತ ಹೇಯ ಕೃತ್ಯ. ಇದನ್ನು ಶಿಕ್ಷಣದ ಮೂಲಭೂತ ಹಕ್ಕಿಗಾಗಿ ಜನಾಂದೋಲನಗಳ ಸಮನ್ವಯ ( ಪಾಫ್ರೆ) ಖಂಡಿಸುತ್ತಿದೆ” ಎಂದಿದ್ದಾರೆ.

“ಮೌಲಾನ್ ಅವರ ಮಾರ್ಗದರ್ಶನದಲ್ಲಿ ಭಾರತದ ಐಐಟಿಗಳು ಮತ್ತು ಎಐಐಎಂಎಸ್‌ನಂತಹ ಪ್ರತಿಷ್ಠಿತ ಸಂಸ್ಥೆಗಳನ್ನು ಸ್ಥಾಪಿಸಲಾಯಿತು ಎಂಬುದು ಅವಿಸ್ಮರಣೀಯ. ಅವರ ಕೊಡುಗೆಯನ್ನು ಗುರುತಿಸಿ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡಿ ಗೌರವಿಸಲಾಗಿದೆ. ನ್ಯಾಯಮೂರ್ತಿ ಸಾಚಾರ್‌ರವರ  ವರದಿಯ ಅನ್ವಯ ಸಮಾಜದಲ್ಲಿ ಶೈಕ್ಷಣಿಕವಾಗಿ ಹಿಂದುಳಿದ ಅಲ್ಪಸಂಖ್ಯಾತ ವರ್ಗಗಳ ಶಿಕ್ಷಣವನ್ನು ಉತ್ತೇಜಿಸಲು ಸ್ಥಾಪಿತವಾಗಿದ್ದ ಮೌಲಾನಾ ಆಜಾದ್ ಶಿಕ್ಷಣ ಪ್ರತಿಷ್ಠಾನವು ಭಾರತ ಸರ್ಕಾರದ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಸಂಪೂರ್ಣ ಧನಸಹಾಯದೊಂದಿಗೆ ಕಾರ್ಯನಿರ್ವಹಿಸುತ್ತಿತ್ತು. ಕಳೆದ ಹಲವು ವರ್ಷಗಳಲ್ಲಿ ಅಲ್ಪ ಸಂಖ್ಯಾತ ವರ್ಗದ ಶೈಕ್ಷಣಿಕ ಸಬಲೀಕರಣವನ್ನು ಉತ್ತೇಜಿಸುವಲ್ಲಿ ಫೌಂಡೇಶನ್‌ ಪ್ರಮುಖ ಪಾತ್ರವನ್ನು ವಹಿಸಿದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಈ ನಿರ್ಧಾರವು ಅವಕಾಶ ವಂಚಿತ ಮುಸ್ಲಿಂ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗಿದ್ದ ಒಂದು ಮುಖ್ಯ ಅವಕಾಶವನ್ನು ಕಸಿಯುವ ಅತ್ಯಂತ ದುರದೃಷ್ಟಕರ ತೀರ್ಮಾನವಾಗಿದೆ. ಅಲ್ಪಸಂಖ್ಯಾತ ಸಚಿವಾಲಯದ ಅಧೀನ ಕಾರ್ಯದರ್ಶಿಯವರು ಹೊರಡಿಸಿರುವ ಈ ಆದೇಶದಲ್ಲಿ ಫೌಂಡೇಶನನ್ನು ಮುಚ್ಚಲು ಯಾವುದೇ ಸಕಾರಣವನ್ನು ನೀಡದೆ ಹಠಾತ್ತಾಗಿ ಮುಚ್ಚುವ ಆದೇಶ ಹೊರಡಿಸಿರುವುದು ಸರ್ವಾಧಿಕಾರಿ ಧೋರಣೆಯಾಗಿದೆ” ಎಂದು ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮಾರ್ಚ್‌ 1ರಂದು ಟ್ಯಾಂಕರ್ ಮಾಲೀಕರೊಂದಿಗೆ ಸಭೆ: ತುಷಾರ್ ಗಿರಿನಾಥ್

“ದೇಶದಲ್ಲಿ ಒಂದು ಜನಾಂಗವನ್ನು ಗುರಿಯಾಗಿಸಿಕೊಂಡು, ಅವರ ಮೇಲೆ ನಡೆಸುತ್ತಿರುವ ನಿರಂತರ ದೌರ್ಜನ್ಯ  ದ್ವೇಷ ರಾಜಕಾರಣದ ಪರಮಾವಧಿಯ ಹೆಜ್ಜೆ ಇದಾಗಿದೆ. ಇದು ಕೇಂದ್ರದ “ಸಬ್ ಕಾ ಸಾಥ್, ಸಬ್ ಕಾ ವಿಕಾಸ್” ಎನ್ನುವುದು ಪೊಳ್ಳು ಘೋಷವಾಕ್ಯ ಎಂಬುದನ್ನು ಮತ್ತೊಮ್ಮ ಬಯಲು ಮಾಡಿದೆ.  ಕೇಂದ್ರ ಸರ್ಕಾರ ತನ್ನ ಘೋಷವಾಕ್ಯಕ್ಕೆ ವಿರುದ್ಧವಾಗಿ ನಡೆಯುತ್ತಿದೆ” ಎಂದಿದ್ದಾರೆ.

“ಕೇಂದ್ರ ಸರ್ಕಾರ ತನ್ನ ಈ ನಿರ್ಧಾರವನ್ನು ಕೂಡಲೇ ಕೈಬಿಡಬೇಕು. ಫೌಂಡೇಶನ್‌ ವತಿಯಿಂದ ನಡೆಯುತ್ತಿರುವ ಎಲ್ಲ ಶೈಕ್ಷಣಿಕ ಕಾರ್ಯಕ್ರಮಗಳನ್ನು ಮುಂದುವರಿಸುವ ಮೂಲಕ ಫೌಂಡೇಶನ್‌ ಅನ್ನು ಮತ್ತಷ್ಟು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಕ್ರಮವಹಿಸಬೇಕು” ಎಂದು ಮೂಲಭೂತ ಶಿಕ್ಷಣಕ್ಕಾಗಿ ಜನಾಂದೋಲನಗಳ ಸಮನ್ವಯ ಕೇಂದ್ರ ಸರ್ಕಾರವನ್ನು ಆಗ್ರಹಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...