ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಪ್ರವಾಸಿಗರ ಬಸ್ ಏರಿದ ಚಿರತೆ

Date:

ಸಫಾರಿ ವೀಕ್ಷಣೆಗೆ ಆಗಮಿಸಿದ್ದ ಪ್ರವಾಸಿಗರ ಮಿನಿ ಬಸ್‌ನ ಮೇಲೆ ಚಿರತೆ ಏರಿದ್ದರಿಂದ ಕೆಲವರಿಗೆ ಆತಂಕವಾಗಿದ್ದು, ಕೆಲವರು ಕಿಟಕಿಯಲ್ಲಿ ಚಿರತೆ ನೋಡಿ ಖುಷಿ ಪಟ್ಟ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ನಡೆದಿದೆ.

ಇತ್ತೀಚಿಗೆ ಆರಂಭವಾಗಿರುವ ಚಿರತೆ ಸಫಾರಿಯಲ್ಲಿ ಚಿರತೆಗಳು ಬಸ್, ಜೀಪ್ ಬಳಿ ಬರುವುದು, ಕೆಲವು ಬಾರಿ ಬಸ್, ಜೀಪ್‌ಗಳ ಮೇಲೆ ಹತ್ತುವ ವಾಡಿಕೆ ಮಾಡಿಕೊಂಡಿವೆ. ಅದೇ ರೀತಿ ಇಂದು ಸಹ ಒಂದು ಚಿರತೆ ಬಸ್ ಮೇಲೆ ಏರಿ ಕಿಟಕಿಗಳಲ್ಲಿ ಪ್ರವಾಸಿಗರನ್ನು ನೋಡಿ ಘರ್ಜಿಸಿದೆ. ನಂತರ ಚಾಲಕ ಬಸ್ ನಿಧಾನವಾಗಿ ಮುಂದಕ್ಕೆ ಚಲಿಸುತ್ತಿದ್ದಂತೆ ಬಸ್‌ನಿಂದ ಕೆಳಕ್ಕೆ ಹಾರಿ ಹೋಗಿದೆ.

ಕಳೆದ ಮೂರು ತಿಂಗಳ ಹಿಂದೆ ಉದ್ಯಾನವನದ ಕರಡಿ, ಸಿಂಹ ಸಫಾರಿಗಳಿಗೆ ಹೊಂದಿಕೊಂಡಂತೆ ಇರುವ ವಿಶಾಲ ತೆರೆದ ಆವರಣದಲ್ಲಿ 19 ಚಿರತೆಗಳಿಗೆ ಆಶ್ರಯ ನೀಡಿ ಪ್ರತಿ ದಿನ ಒಂದೊಂದು ತಂಡವನ್ನು ಸಫಾರಿಗೆ ಬಿಡಲಾಗುತ್ತಿದೆ. ಸದ್ಯ ಚಿರತೆಗಳನ್ನು ಸಫಾರಿಯಲ್ಲಿ ನೋಡಿ ಖುಷಿ ಪಡುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಆರೋಪ-ಪ್ರತ್ಯಾರೋಪಗಳೆಷ್ಟು ಕಾಲ? ಆಡಳಿತ, ಅಭಿವೃದ್ಧಿ, ಕಲ್ಯಾಣಕ್ಕೆಷ್ಟು ಸಮಯ?

ಚಿರತೆಗಳು ಬುದ್ಧಿವಂತ ಪ್ರಾಣಿಗಳು ಚಿಕ್ಕ ಜಾಗ ಸಿಕ್ಕರೂ ನುಸುಳಿ ಬಿಡುತ್ತವೆ ಹಾಗಾಗಿ ಪ್ರವಾಸಿ ವಾಹನದಲ್ಲಿ ಕಿಟಕಿಯ ಗ್ಲಾಸ್‌ಗಳನ್ನು ಮುಚ್ಚಿರಬೇಕು. ಮಕ್ಕಳನ್ನು ಕಿಟಕಿ ಪಕ್ಕ ಕೂರಿಸಿದ್ದರೆ ಎಚ್ಚರಿಕೆಯಿಂದ ಇರುವಂತೆ ನೋಡಿಕೊಳ್ಳಬೇಕು. ಅದೇ ರೀತಿ ನಮ್ಮ ವಾಹನಗಳ ಚಾಲಕ ಮತ್ತು ಸಹಾಯಕ ಸಿಬ್ಬಂದಿಗಳಿಗೂ ಸಲಹೆ ಸೂಚನೆಗಳನ್ನು ನೀಡಲಾಗಿದೆ ಎಂದು ಬನ್ನೇರುಘಟ್ಟ ಜೈವಿಕ ಉದ್ಯಾನವನದ ಕಾರ್ಯನಿರ್ವಾಹಕ ನಿರ್ದೇಶಕ ಸೂರ್ಯಸೇನ್ ಮಾಹಿತಿ ನೀಡಿದ್ದಾರೆ.

ಚಿರತೆಗಳು ನಾಚಿಕೆ ಸ್ವಭಾವದ ಪ್ರಾಣಿ. ಇವುಗಳಿಗೆ ಯಾವುದೇ ಅಪಾಯ ಇಲ್ಲ ಎಂಬುದು ಖಾತರಿಪಡಿಸಿಕೊಂಡ ಮೇಲೆಯೇ ನಡೆದು ಸಾಗುವುದು. ಹಾಗಾಗಿ ಪ್ರತಿ ದಿನ ವಾಹನಗಳನ್ನು ನೋಡಿ ಅಪಾಯವಿಲ್ಲ ಎಂಬುದು ಖಚಿತವಾಗಿದ್ದರಿಂದ ವಾಹನಗಳ ಬಳಿ ಬರುವುದು, ಮೇಲೆ ಏರುವುದು ವಾಡಿಕೆ ಮಾಡಿ ಕೊಂಡಿವೆ ಎಂದು ಅವರು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...