ವಿಧಾನಪರಿಷತ್ತಿನ ಕಲಾಪಗಳ ನ್ಯೂನತೆ ಸರಿಪಡಿಸಲು ಮುಖ್ಯಮಂತ್ರಿ ಚಂದ್ರು ಮನವಿ

Date:

ವಿಧಾನಪರಿಷತ್ತಿನ ಗೌರವವನ್ನು ಎತ್ತಿ ಹಿಡಿಯುವ ಕಾರ್ಯಕ್ಕೆ ಸಭಾಪತಿಗಳು ಮುಂದಾಗಬೇಕು. ಕಾರ್ಯಕಲಾಪಗಳಲ್ಲಿ ಅನೇಕ ನ್ಯೂನತೆಗಳಿವೆ. ಅವುಗಳನ್ನು ಸರಿಪಡಿಸಿ ಎಂದು ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ವಿಧಾನಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಮನವಿ ಮಾಡಿದರು.

ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರು ಶನಿವಾರ ವಿಧಾನಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

ಪರಿಷತ್ತಿನ ಮಾಜಿ ಸದಸ್ಯರು ಆಗಿರುವ ಮುಖ್ಯಮಂತ್ರಿ ಚಂದ್ರು ಅವರು ಅಂದಿನ ಸದನಗಳಲ್ಲಿ ಅವರ ಜೊತೆಗಿನ ಮಹತ್ವದ ಚರ್ಚೆ ಮತ್ತು ಅವರ ಪ್ರತಿವಾದಗಳನ್ನು ಮೆಲಕು ಹಾಕಿ ಸಭಾಪತಿಗಳಾದ ಹೊರಟ್ಟಿಯವರು ಪ್ರಶಂಸಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವೇಳೆ ಮುಖ್ಯಮಂತ್ರಿ ಚಂದ್ರು ಅವರು ಮಾತನಾಡಿ, “ಇತ್ತೀಚೆಗೆ ಕರ್ನಾಟಕ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ರಾಜ್ಯದ ಜನರು ಒಂದು ಪಕ್ಷಕ್ಕೆ ಸ್ಪಷ್ಟ ಬಹುಮತ ನೀಡಿದ್ದು, ರಾಜ್ಯದಲ್ಲಿ ಸುಭದ್ರ ಸರ್ಕಾರ ನಡೆಸಲು ಜನರು ನಾಂದಿ ಹಾಡಿದ್ದಾರೆ. ಯಾವುದೇ ಬದಲಾವಣೆಗಳಿಲ್ಲದೇ ತಾವು ವಿಧಾನಪರಿಷತ್ತಿನ ಸಭಾಪತಿಯಾಗಿ ಮುಂದುವರೆದಿದ್ದಿರಿ” ಎಂದು ಅಭಿನಂದನೆ ಸಲ್ಲಿಸಿದರು.

“ಇತ್ತೀಚಿಗಷ್ಟೇ ಮುಗಿದ ಬಜೆಟ್ ಅಧಿವೇಶನದಲ್ಲಿ ವಿಧಾನಪರಿಷತ್ತಿನ ಕಾರ್ಯಕಲಾಪಗಳನ್ನು ಗಮನಿಸಿದಾಗ ಅನೇಕ ನ್ಯೂನತೆಗಳು ಕಂಡು ಬಂದಿವೆ. ಗೌರವಾನ್ವಿತ ಸಚಿವರು ಸಭೆಗೆ ತಡವಾಗಿ ಬರುವುದು, ಸದಸ್ಯರ ಪ್ರಶ್ನೆಗಳಿಗೆ ಸರಿಯಾದ ಉತ್ತರ ನೀಡದಿರುವುದು, ವಿಪಕ್ಷಗಳ ಸದಸ್ಯರ ಪ್ರಶ್ನೆಗಳಿಗೆ ಸೂಕ್ತ ಉತ್ತರ ನೀಡದೇ ಅವರು ಬಾವಿಗಿಳಿಯುವಂತೆ ಮಾಡಿರುವುದು, ಗೊಂದಲಮಯ ವಾತಾವರಣ ಸೃಷ್ಟಿಸಿ ಕಲಾಪದ ಕಾಲಹರಣ, ವಿಪಕ್ಷದ ಸದಸ್ಯರು ಹದ್ದು ಮೀರಿ ವರ್ತಿಸಿದ್ದು, ವಿನಾಕಾರಣ ಕಲಾಪದ ಸಮಯ ಪೋಲಾಗಿರುವುದು, ರಾಜ್ಯ ಸಮಸ್ಯೆಗಳನ್ನು ಚರ್ಚಿಸಲು ಇರುವ ಸದನವನ್ನು ರಾಜಕೀಯ ದೋಷಾರೋಪಣೆಗೆ ದುರ್ಬಳಕೆ ಸೇರಿದಂತೆ ಹಲವು ನ್ಯೂನತೆಗಳಿವೆ. ವಿಧಾನ ಪರಿಷತ್ತಿನ ಮಾಜಿ ಸದಸ್ಯನಾಗಿ ಹಾಗೂ ರಾಷ್ಟ್ರೀಯ ಪಕ್ಷದ ರಾಜ್ಯಾಧ್ಯಕ್ಷನಾಗಿ ಈ ನ್ಯೂನತೆಗಳನ್ನು ಸರಿಪಡಿಸಿ ಎಂದು ವಿನಂತಿಸುತ್ತಿದ್ದೇನೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಯುವತಿ ಮೇಲೆ ಅನುಮಾನ; ರಾಡ್‌ನಿಂದ ಹಲ್ಲೆ ಮಾಡಿದ ಪ್ರಿಯಕರ

ಸಭಾಪತಿಗಳಾಗಿ ತಾವು ಅನೇಕ ಸಂದರ್ಭಗಳಲ್ಲಿ ಕಲಾಪಗಳನ್ನು ಸರಿದಾರಿಗೆ ತರುವ ಕೆಲಸವನ್ನು ಮಾಡಿರುವಿರಿ. ಅದಾಗ್ಯೂ ಕೆಲವು ಸದಸ್ಯರುಗಳ ವರ್ತನೆ, ಸಭಾಧ್ಯಕ್ಷರಾದ ತಮ್ಮ ವರ್ಚಸ್ಸನ್ನು ಕಡಿಮೆ ಮಾಡುತ್ತಿರುವುದು ನಾಡಿನ ಜನರಿಗೆ ಮತ್ತು ನಿಯಮ ಪಾಲಿಸುವ ಸದಸ್ಯರಿಗೆ ಬೇಸರ ತಂದಿದೆ.

ನಾಡಿನ ಹೆಮ್ಮೆಯ ಪ್ರತೀಕವಾಗಿರುವ ಈ ಸದನವು ರಾಜ್ಯದ ಅಭಿವೃದ್ದಿಯ ಚರ್ಚೆಗಳಿಗೆ ವೇದಿಕೆಯಾಗಲಿ ಎಂದು ಆಶಿಸುತ್ತೇನೆ. ನಮ್ಮ ಪಕ್ಷವು ವಿಧಾನ ಮಂಡಲದಲ್ಲಿ ಇಲ್ಲದಿದ್ದರೂ, ರಾಷ್ಟ್ರೀಯ ಪಕ್ಷವಾಗಿ ಹೊರಗಿನಿಂದಲೇ ಸರ್ಕಾರದ ನೀತಿ ನಡವಳಿಕೆಯ ಬಗ್ಗೆ ಮಾತನಾಡುತ್ತಾ ಜನರ ಹಿತ ಕಾಪಾಡುತ್ತೇವೆ ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...