ಕಾಂಗ್ರೆಸ್ ಸರ್ಕಾರ ವರ್ಗಾವಣೆ ದಂಧೆಯಲ್ಲಿ ಮುಳುಗಿರುವ ಅನುಮಾನ ಇದೆ: ಮುಖ್ಯಮಂತ್ರಿ ಚಂದ್ರು

Date:

  • ಅಧಿಕಾರಿಗಳ ಮೇಲೆ ಒತ್ತಡ ಹೇರಿ ವಸೂಲಿ ಮಾಡುವುದೊಂದೇ ಈಗಿರುವ ಏಕೈಕ ಮಾರ್ಗ
  • ಚುನಾವಣಾ ಅಕ್ರಮಗಳಿಗಾಗಿ ಖರ್ಚು ಮಾಡಿರುವ ಹಣವನ್ನು ವಸೂಲಿ ಮಾಡುವ ಧಾವಂತ

“ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ತಿಂಗಳುಗಳಲ್ಲಿಯೇ ಎಗ್ಗಿಲ್ಲದ ವರ್ಗಾವಣೆ ದಂಧೆ ನಡೆಯುತ್ತಿರುವುದು ಸ್ಪಷ್ಟವಾಗುತ್ತಿದೆ. ಸರ್ಕಾರದ ಮಂತ್ರಿ ಮಹೋದಯಗಳ ವರ್ಗಾವಣೆ ದಂಧೆ ನಿಜವೆಂಬುದು ಅವರದೇ ಪಕ್ಷದ ಹಿರಿಯ ಶಾಸಕ ಬಿ.ಆರ್.ಪಾಟೀಲ್‌ ಅವರ ಪತ್ರದಿಂದ ಸಾಬೀತಾಗುತ್ತಿದೆ. ಸರ್ಕಾರವು ವರ್ಗಾವಣೆ ದಂಧೆಯಲ್ಲಿ ಮುಳುಗಿರುವ ಅನುಮಾನ ಇದೆ” ಎಂದು ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೇಳಿದರು.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕಾಂಗ್ರೆಸ್‌ನವರಿಗೆ ಕೇವಲ ಆಮ್ ಆದ್ಮಿ ಪಕ್ಷದ ಕಾರ್ಯಕ್ರಮಗಳನ್ನು ಕಳ್ಳತನ ಮಾಡುವುದು ಗೊತ್ತಿದೆಯೇ ಹೊರತು, ಭ್ರಷ್ಟಾಚಾರ ಮುಕ್ತ ಸರ್ಕಾರ ಇದ್ದಲ್ಲಿ ಮಾತ್ರ ಈ ರೀತಿಯ ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತರಬಹುದು ಮತ್ತು ದೆಹಲಿ ಮಾದರಿಯ ಸಾಲ ಮುಕ್ತ ಬಜೆಟ್‌ಗಳನ್ನು ಘೋಷಿಸಬಹುದು ಎಂಬುದು ಗೊತ್ತಿಲ್ಲ” ಎಂದು ವ್ಯಂಗ್ಯವಾಡಿದರು.

“ಚುನಾವಣಾ ಅಕ್ರಮಗಳಿಗಾಗಿ ಖರ್ಚು ಮಾಡಿರುವ ಹಣವನ್ನು ಕೂಡಲೇ ಹೇಗಾದರೂ ಮಾಡಿ ವಸೂಲಿ ಮಾಡಿಕೊಳ್ಳಬೇಕೆಂಬ ಧಾವಂತ ಕಾಂಗ್ರೆಸ್ ಶಾಸಕರುಗಳಲ್ಲಿ ಇರುವುದು ಬಿ.ಆರ್.ಪಾಟೀಲ್ ಅವರ ಪತ್ರದಿಂದ ಸ್ಪಷ್ಟವಾಗುತ್ತಿದೆ ಎಂಬ ಅನುಮಾನ ರಾಜ್ಯದ ಜನತೆಯಲ್ಲಿ ಹಾಗೂ ನಮ್ಮಲ್ಲೂ ಕಾಡುತ್ತಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ಸರ್ಕಾರದಲ್ಲಿ ಯೋಜನೆಗಳಿಗಾಗಿ ಯಾವುದೇ ಹಣವಿಲ್ಲ. ಶಾಸಕರುಗಳಾರೂ ಅನುದಾನಕ್ಕಾಗಿ ಒತ್ತಾಯ ಮಾಡಬಾರದೆಂದು ಹೇಳುತ್ತಾರೆ. ಯೋಜನೆಗಳಲ್ಲಿ ಯಾವುದೇ ಕಮಿಷನ್ ಬಾರದ ಈ ಪರಿಸ್ಥಿತಿಯಲ್ಲಿ ಅಧಿಕಾರಿಗಳ ವರ್ಗಾವಣೆ ದಂಧೆಯೇ ಇವರಿಗೆ ಗಟ್ಟಿ. ಅಧಿಕಾರಿಗಳ ಮೇಲೆ ಒತ್ತಡ ಹೇರಿ ವಸೂಲಿ ಮಾಡುವುದೊಂದೇ ಈಗಿರುವ ಏಕೈಕ ಮಾರ್ಗ. ಇದರಿಂದಾಗಿ ಮುಂದಿನ ದಿನಗಳಲ್ಲಿ ಜನಸಾಮಾನ್ಯರು ಸರ್ಕಾರಿ ಕಚೇರಿಗಳಲ್ಲಿನ ಭ್ರಷ್ಟಾಚಾರಗಳಿಂದಾಗಿ ಪರಿತಪಿಸುವುದು ಗ್ಯಾರಂಟಿ” ಎಂದು ಮುಖ್ಯಮಂತ್ರಿ ಚಂದ್ರು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ವಿದ್ಯಾರ್ಥಿಗಳಿಂದ ಹಣ ಸುಲಿಗೆ ಮಾಡುತ್ತಿದ್ದ ಮೂವರು ಪೊಲೀಸ್‌ ಮಾಹಿತಿದಾರರ ಬಂಧನ

“ಜೆಡಿಎಸ್ ಪಕ್ಷದಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಯಾರೊಂದಿಗೂ ನಾವು ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದರೆ ಅದಕ್ಕೆ ತದ್ವಿರುದ್ಧವಾಗಿ ಅವರ ಮಗ ಕುಮಾರಸ್ವಾಮಿ ಬಿಜೆಪಿಯೊಂದಿಗೆ ಹೊಂದಾಣಿಕೆಯ ಮಾತುಕತೆ ನಡೆಯುತ್ತಿದೆ ಎಂಬ ಹೇಳಿಕೆ ನೀಡುತ್ತಿರುವುದು ದ್ವಂದ್ವದಿಂದ ಕೂಡಿದೆ. ಇಬ್ಬರು ಒಟ್ಟಿಗೆ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಜನತೆಗೆ ಯಾರೊಂದಿಗೆ ಕೈಜೋಡಿಸುತ್ತೇವೆ ಎಂಬುದನ್ನು ರಾಜ್ಯದ ಜನತೆಗೆ ಸ್ಪಷ್ಟಪಡಿಸಲಿ” ಎಂದು ಮುಖ್ಯಮಂತ್ರಿ ಚಂದ್ರು ಒತ್ತಾಯಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...