ಚಿಲುಮೆ ಪ್ರಕರಣ | ಬಿಬಿಎಂಪಿ ಆಯುಕ್ತ ತುಷಾರ್‌ ಗಿರಿನಾಥ್‌ ವಿರುದ್ಧ ತನಿಖೆಗೆ ಮುಂದಾದ ಸರ್ಕಾರ

Date:

ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದಂತೆ, ಚಿಲುಮೆ ಸಂಸ್ಥೆಗೆ ಮತದಾರರ ಖಾಸಗಿ ಮಾಹಿತಿ ಸಂಗ್ರಹಕ್ಕೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಅವಕಾಶ ನೀಡಿದ್ದರು ಎಂಬ ಆರೋಪ ಕೇಳಿಬಂದಿತ್ತು. ಇದೀಗ ಮುಖ್ಯ ಆಯುಕ್ತರ ವಿರುದ್ಧ ತನಿಖೆ ನಡೆಸಲು ರಾಜ್ಯ ಸರ್ಕಾರ ಮುಂದಾಗಿದೆ.

ಈ ಬಗ್ಗೆ ಮುಖ್ಯಮಂತ್ರಿ ಅವರಿಗೆ ಮಾಜಿ ಎಂಎಲ್​ಸಿ ರಮೇಶ್ ಬಾಬು ಪತ್ರ ಬರೆದು ತನಿಖೆ ನಡೆಸುವಂತೆ ಆಗ್ರಹಿಸಿದ್ದರು. ಇದೀಗ ಮುಖ್ಯಮಂತ್ರಿ ಅವರ ಸೂಚನೆ ಮೇರೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ (ಸಿಎಸ್) ವಂದಿತಾ ಶರ್ಮಾ ಅವರು ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಈ ಕುರಿತು ಪರಿಶೀಲನೆ ನಡೆಸಿ ವರದಿ ನೀಡುವಂತೆ ಕೇಳಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಸ್ಟ್‌ನಲ್ಲಿ ಸರ್ಕಾರ ವರದಿ ಕೇಳಿದೆ.

ಸರ್ಕಾರಕ್ಕೆ ಪತ್ರ ಬರೆದ ಕಾಂಗ್ರೆಸ್ ವಕ್ತಾರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಬಿಎಂಪಿ ಆಯುಕ್ತರಾದ ತುಷಾರ್ ಗಿರಿನಾಥ್ ಅವರು ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿಯಾಗಿಯೂ ಕಾರ್ಯ ನಿರ್ವಹಣೆ ಮಾಡಿದ್ದಾರೆ. ಈ ವೇಳೆ, ತುಷಾರ್ ಗಿರಿನಾಥ್ ಅವರು ಚಿಲುಮೆ ಸಂಸ್ಥೆಗೆ ಮತಪಟ್ಟಿ ಪರಿಷ್ಕರಣೆಗೆ ಅವಕಾಶ ನೀಡಿದ್ದಾರೆ. ಚಿಲುಮೆ ಸಂಸ್ಥೆ ಮತದಾರರ ಪರಿಷ್ಕರಣೆಯ ಹೆಸರಿನಲ್ಲಿ ಜನರ ವೈಯಕ್ತಿಕ ಮಾಹಿತಿ ಸಂಗ್ರಹ ಮಾಡಿ, ದುರುಪಯೋಗಪಡಿಸಿಕೊಂಡಿದೆ.

ಖಾಸಗಿ ಸಂಸ್ಥೆಯಾದ ಚಿಲುಮೆಗೆ ಮತದಾರರ ಖಾಸಗಿ ವಿಷಯ ಸಂಗ್ರಹಣೆಗೆ ಅವಕಾಶ ನೀಡಿ, ಕರ್ತವ್ಯಲೋಪ ಎಸಗಿದ್ದಾರೆ. ಚುನಾವಣಾ ಅಧಿಕಾರಿ ಅಕ್ರಮಗಳಲ್ಲಿ‌ ಭಾಗಿಯಾಗಿದ್ದರೆ, ಅವರ ವಿರುದ್ಧ ಸೆಕ್ಷನ್ 32 ಆರ್ ಪಿ ಆಕ್ಟ್ 1950 ಅಡಿಯಲ್ಲಿ ಕ್ರಮಕ್ಕೆ ಅವಕಾಶ ಇದೆ. ಹಾಗಾಗಿ, ತುಷಾರ್ ಗಿರಿನಾಥ್ ಅವರನ್ನು ಚುನಾವಣಾ ಕಾರ್ಯ ನಿರ್ವಹಣೆ ಹುದ್ದೆಯಿಂದ ಬಿಡುಗಡೆ ಮಾಡಬೇಕು ಜತೆಗೆ ಅವರನ್ನು ಅಮಾನತು ಮಾಡಲು ಶಿಫಾರಸ್ಸು ಮಾಡಬೇಕು. ಚಿಲುಮೆ ಸಂಸ್ಥೆಯ ಲೋಪದ ಬಗ್ಗೆ ಪೂರ್ಣ ಪ್ರಮಾಣದ ತನಿಖೆ ನಡೆಸಬೇಕು” ಎಂದು ಆರೋಪಿಸಿ ಕಾಂಗ್ರೆಸ್ ವಕ್ತಾರರಾದ ರಮೇಶ್ ಬಾಬು ಅವರು ಕೇಂದ್ರ ಚುನಾವಣಾ ‌ಆಯೋಗಕ್ಕೆ ಪತ್ರ ಬರೆದಿದ್ದರು. ಅದರಂತೆ ಈಗ ತನಿಖೆ ನಡೆಸಲು ಸರ್ಕಾರ ಮುಂದಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಹಸಿರು ಮಾರ್ಗದಲ್ಲಿ ಹಳಿ ತಪ್ಪಿದ ರೀ ರೈಲ್; ಮೆಟ್ರೋ ಸಂಚಾರದಲ್ಲಿ ಭಾರೀ ವ್ಯತ್ಯಯ

ಏನಿದು ಚಿಲುಮೆ ಪ್ರಕರಣ?

ಮತದಾರರಿಗೆ ಜಾಗೃತಿ ಮೂಡಿಸುವ ಹೆಸರಿನಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ ಚಿಲುಮೆ ಸಂಸ್ಥೆ ಬಿಎಲ್‌ಓ (ಬೂತ್‌ ಮಟ್ಟದ ಅಧಿಕಾರಿ) ಹೆಸರಿನಲ್ಲಿ ಗುರುತಿನ ಚೀಟಿಯನ್ನು ಸೃಷ್ಟಿಸಿಕೊಂಡು ಮತದಾರರ ಮನೆಗಳಿಗೆ ತೆರಳಿ ವೈಯಕ್ತಿಕ ಮಾಹಿತಿಗಳನ್ನು ಪಡೆದುಕೊಂಡಿದೆ. ಜತೆಗೆ ಈ ಮಾಹಿತಿಯನ್ನು ದುರ್ಬಳಕೆ ಮಾಡಿಕೊಂಡಿದೆ ಎಂಬ ಆರೋಪ ಇದೆ. ಬಿಎಲ್‌ಒ ಗುರುತಿನ ಚೀಟಿಯನ್ನು ಸರ್ಕಾರಿ ನೌಕರರು ಅಥವಾ ಅರೆ ಸರ್ಕಾರಿ ಸಿಬ್ಬಂದಿ ಅಲ್ಲದೆ ಬೇರೆಯವರು ಪಡೆದುಕೊಳ್ಳುವುದು ಅಪರಾಧವಾಗಿದೆ.

ಮತದಾರರ ಪರಿಷ್ಕರಣೆ ಅಕ್ರಮದಲ್ಲಿ ಚಿಲುಮೆ ಎಂಟರ್‌ ಪ್ರೈಸಸ್ ಪ್ರೈ.ಲಿ ಹಾಗೂ ಡಿಎಪಿ ಹೊಂಬಾಳೆ ಪ್ರೈ.ಲಿ ಎಂಬ ಸಂಸ್ಥೆಗಳೂ ಇದರಲ್ಲಿ ಭಾಗಿಯಾಗಿವೆ. ಈ ಸಂಸ್ಥೆ ಡಿಜಿಟಲ್‌ ಸಮೀಕ್ಷಾ ಎಂಬ ಆಪ್ ಮೂಲಕ ದತ್ತಾಂಶವನ್ನು ಸಂಗ್ರಹ ಮಾಡಿದೆ. ಬಿಎಲ್‌ಒ ಅಧಿಕಾರಿಗಳ ಹೆಸರಿನಲ್ಲಿ ಮತದಾರರ ಜಾತಿ, ಲಿಂಗ, ಆಧಾರ್ ಸಂಖ್ಯೆ, ಮೊಬೈಲ್ ನಂಬರ್‌ ಮತ್ತಿತರ ಮಾಹಿತಿಯನ್ನು ಸಂಗ್ರಹ ಮಾಡಿದೆ ಎಂಬ ಆರೋಪ ಇದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...