ಕಟ್ಟಡ ದುರಂತ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ, ₹5 ಲಕ್ಷ ಪರಿಹಾರ ಘೋಷಣೆ

Date:

ಬೆಂಗಳೂರಿನ ಹೆಣ್ಣೂರು ಸಮೀಪದ ಬಾಬುಸಾಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಗುರುವಾರ ಬೆಳಿಗ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಘಟನಾ ಸ್ಥಳ ಪರಿಶೀಲನೆ ಬಳಿಕ‌ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಅಗತ್ಯ ಇರುವ ಎಲ್ಲ ಆಧುನಿಕ ವ್ಯವಸ್ಥೆ ಬಳಿಸಿ ಕಾರ್ಮಿಕರಿಗೆ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದರು.

ಪರಿಶೀಲನೆ ಬಳಿಕ ಸುದ್ದಿಗಾರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, “ಕುಸಿದ ಕಟ್ಟಡದಿಂದ ಮೃತಪಟ್ಟ ಕುಟುಂಬದವರಿಗೆ ತಲಾ ₹ 5 ಲಕ್ಷ ಪರಿಹಾರ ನೀಡಲಾಗುವುದು. ಕಾರ್ಮಿಕ ಇಲಾಖೆಯಿಂದ ತಲಾ ₹3 ಲಕ್ಷ, ಬಿಬಿಎಂಪಿಯಿಂದ ತಲಾ ₹2 ಲಕ್ಷ ಪರಿಹಾರವನ್ನು ಮೃತರ ಕುಟುಂಬಕ್ಕೆ ನೀಡಲಾಗುತ್ತದೆ. ಗಾಯಗೊಂಡವರ ಚಿಕಿತ್ಸೆ ವೆಚ್ಚವನ್ನು ಸಂಪೂರ್ಣವಾಗಿ ಇಲಾಖೆಗಳಿಂದಲೇ ಭರಿಸಲಾಗುವುದು” ಎಂದು ಘೋಷಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಿಯಮಬಾಹಿರವಾಗಿ, ಸೂಕ್ತ ಅನುಮತಿ ಪರವಾನಗಿ ಪಡೆಯದೆ ಕಟ್ಟಡ ನಿರ್ಮಾಣಕ್ಕೆ ಮುಂದಾಗುವವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ವಿಭಾಗೀಯ ಅಧಿಕಾರಿಗೂ ನೋಟಿಸ್ ನೀಡಿ ಕ್ರಮ ಕೈಗೊಳ್ಳಬೇಕು” ಎಂದು ಸಿಎಂ ಸೂಚಿಸಿದರು.

“ಅನಧಿಕೃತ ನಿರ್ಮಾಣ ನಿಲ್ಲಿಸುವಂತೆ ನೋಟಿಸ್ ನೀಡಿದ್ದರೂ ನಿರ್ಮಾಣ ಮುಂದುವರೆಸಿದ ಮಾಲೀಕರು, ಗುತ್ತಿಗೆದಾರ, ಎಂಜಿನಿಯರ್ ಎಲ್ಲರ ವಿರುದ್ಧವೂ ಕಠಿಣ ಕಾನೂನು ಕ್ರಮ ಆಗಬೇಕು” ಎಂದು ಬಿಬಿಎಂಪಿ‌ ಆಯುಕ್ತ ತುಷಾರ ಗಿರಿನಾಥ್ ಅವರಿಗೆ ಸಿಎಂ ಸೂಚನೆ ನೀಡಿದರು.

ಸಚಿವ ಬೈರತಿ ಸುರೇಶ್, ಎಂ ಸಿ ಸುಧಾಕರ್, ಶಾಸಕ ಬೈರತಿ ಬಸವರಾಜ ಹಾಗೂ ಬಿಬಿಎಂಪಿ ಆಯುಕ್ತರು ಮತ್ತು ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಕೇಂದ್ರದಿಂದ 2 ಲಕ್ಷ ರೂ. ಪರಿಹಾರ

ಬೆಂಗಳೂರಿನ ಬಾಬುಸಾಬ್​ ​ಪಾಳ್ಯ ಕಟ್ಟಡ ಕುಸಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಪ್ರಧಾನಿ ಕಾರ್ಯಾಲಯ ಸಂದೇಶ ಪ್ರಕಟಿಸಿದೆ. ಮೃತ 8 ಜನರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ. ಗಾಯಾಳುಗಳಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದ್ದು, ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ಪರಿಹಾರ ನೀಡಲಾಗುತ್ತದೆ. ದುರಂತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ ಪ್ರಧಾನಿ ಮೋದಿ, ಮೃತ ಕಾರ್ಮಿಕರ ಕುಟುಂಬಸ್ಥರ ದುಃಖದಲ್ಲಿ ನಾನು ಭಾಗಿ ಎಂದಿದ್ದಾರೆ. ಜತೆಗೆ, ಗಾಯಾಳುಗಳು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...