ಬೆಂಗಳೂರು | ನಗರ್ತಪೇಟೆ ಘಟನೆಗೆ ಕೋಮು ಬಣ್ಣ: ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

Date:

ಲೋಕಸಭೆಯ ಚುನಾವಣೆಯ ಹಿನ್ನೆಲೆಯಲ್ಲಿ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ದುರುದ್ದೇಶದಿಂದ ಬೆಂಗಳೂರಿನ ನಗರ್ತ ಪೇಟೆಯಲ್ಲಿ ಪ್ರತಿಭಟನೆ ನಡೆಸಲು ಪ್ರಚೋದಿಸುವ ಹೇಳಿಕೆ ನೀಡಿ, ಕೋಮು ದ್ವೇಷ ಹರಡಲು ಯತ್ನಿಸಿದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಕಾಂಗ್ರೆಸ್ ಪಕ್ಷ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಈ ಕುರಿತು ಕಾಂಗ್ರೆಸ್ ಪಕ್ಷದ ಕಾನೂನು ಘಟಕದ ಪ್ರಧಾನ ಕಾರ್ಯದರ್ಶಿ ಸೂರ್ಯ ಮುಕುಂದರಾಜ್ ಆಯೋಗದ ಕಚೇರಿಗೆ ತೆರಳಿ ದೂರು ನೀಡಿದ್ದು, ಬೆಂಗಳೂರಿನ ನಗರ್ತ ಪೇಟೆಯಲ್ಲಿ ಅಂಗಡಿ ಮಾಲೀಕರೊಬ್ಬರ ಮೇಲೆ ನಡೆದ ಹಲ್ಲೆ ಪ್ರಕರಣವನ್ನು ಕೋಮು ದ್ವೇಷ ಮೂಡಿಸುವ ಸಲುವಾಗಿ ಬಿಜೆಪಿಯ ನಾಯಕರು ತಿರುಚುತ್ತಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೂರಿನಲ್ಲಿ, ಮಾ.18ರಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಮತ್ತು ಬಸವನಗುಡಿ ಶಾಸಕ ರವಿಸುಬ್ರಮಣ್ಯ ಭೇಟಿ ನೀಡಿ ಅಂಗಡಿಯ ಮುಂದೆ ಗುಂಪು ಸೇರಿಸಿ 19 ಮಾರ್ಚ್ 2024 ರ ಮಧ್ಯಾಹ್ನ 12 ಗಂಟೆಗೆ ಹನುಮಾನ್ ಚಾಲೀಸ ಪಠನ ಮಾಡಲು ಕರೆ ನೀಡಿ ಧಾರ್ಮಿಕ ಘೋಷಣೆಗಳನ್ನು ಕೂಗಿರುತ್ತಾರೆ. ಮಾನ್ಯ ಸರ್ವೋಚ್ಚ ನ್ಯಾಯಾಲಯದ ಆದೇಶ ಮತ್ತು ಚುನಾವಣಾ ಆಯೋಗದ ಪ್ರಕಾರ ಚುನಾವಣೆಯ ಸಂದರ್ಭದಲ್ಲಿ ಕೋಮು, ಮತ, ಧಾರ್ಮಿಕ ಭಾವನೆಗಳನ್ನು ಕೆರಳಿಸುವಂತಹ ಕೃತ್ಯವೆಸಗುವುದು ಅಪರಾಧ. ನೀತಿ ಸಂಹಿತೆ ಉಲ್ಲಂಘಿಸಿ ಪ್ರತಿಭಟನೆಗೆ ಕರೆ ನೀಡಿರುವ ತೇಜಸ್ವಿ ಸೂರ್ಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕೋರುತ್ತೇನೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

EC

ನಗರ್ತಪೇಟೆಯಲ್ಲಿ ನಡೆದ ಗಲಾಟೆ ಹನುಮಾನ್ ಚಾಲೀಸಾ ಹಾಕಿದ್ದಕ್ಕಾಗಲೀ, ಆಜಾನ್ ಪ್ರಾರ್ಥನೆಗೆ ಅಡ್ಡಿಯಾಗುತ್ತಿದೆ ಎಂಬ ಕಾರಣಕ್ಕಾಗಲೀ ನಡೆದಿದ್ದಲ್ಲ ಎಂದು ಪೊಲೀಸರು ಸ್ಪಷ್ಟನೆ ನೀಡುವುದರೊಂದಿಗೆ ಪ್ರಕರಣಕ್ಕೆ ಕೋಮುಬಣ್ಣ ಹಚ್ಚಿ ಲಾಭ ಪಡೆಯಲು ಯತ್ನಿಸಿದ ಬಿಜೆಪಿ ನಾಯಕರಿಗೆ ಭಾರೀ ಮುಖಭಂಗವಾಗಿದೆ.

ಇದನ್ನು ಓದಿದ್ದೀರಾ? ಬೆಂಗಳೂರು | ಲೌಡ್ ಸ್ಪೀಕರ್ ಜಗಳಕ್ಕೆ ಕೋಮು ಬಣ್ಣ ಬಳಿಯಲೆತ್ನಿಸಿದ ಬಿಜೆಪಿ; ಎಫ್‌ಐಆರ್‌ನಲ್ಲಿ ಇರೋದೇನು?

ಆಜಾನ್ ಪ್ರಾರ್ಥನೆಗೆ ಅಂಗಡಿಯೊಂದರಲ್ಲಿ ಹಾಕಲಾದ ಹನುಮಾನ್ ಚಾಲೀಸಾ ಅಡ್ಡಿಯಾಗುತ್ತಿದೆ ಎಂದು ಹಿಂದೂಗಳ ಮೇಲೆ ಮುಸ್ಲಿಮರು ಹಲ್ಲೆ ನಡೆಸಿದ್ದಾರೆ ಎಂಬ ಕಥೆ ಕಟ್ಟಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಸೇರಿದಂತೆ ಬಿಜೆಪಿ ನಾಯಕರು ಪ್ರಕರಣಕ್ಕೆ ಕೋಮುಬಣ್ಣ ಹಚ್ಚಿ ಅದರ ಲಾಭ ಪಡೆಯಲು ಮುಂದಾಗಿದ್ದರು. ಆದರೆ ಘಟನೆಯಲ್ಲಿ ಹಲ್ಲೆ ನಡೆಸಿದ ಆರೋಪಿಗಳಲ್ಲಿ ಹಿಂದೂಗಳೂ ಇರುವುದು, ಇಡೀ ಪ್ರಕರಣದಲ್ಲಿ ಕೋಮುಸಂಘರ್ಷದ ಕೋನ ಇಲ್ಲದೇ ಇರುವುದು ಬಿಜೆಪಿ ಮುಖಂಡರನ್ನು ಮುಜುಗರಕ್ಕೀಡು ಮಾಡಿದೆ. ಅಲ್ಲದೇ, ಈ ಘಟನೆಗೆ ಸಂಬಂಧಿಸಿ ಐವರನ್ನು ಪೊಲೀಸರು ಬಂಧಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...