ರಾಜ್ಯ ಮುಖ್ಯ ಕಾರ್ಯದರ್ಶಿ ಬಗ್ಗೆ ಅಸಭ್ಯ ಪದ ಬಳಕೆ: ಬಿಜೆಪಿ ಎಂಎಲ್‌ಸಿ ರವಿ ಕುಮಾರ್ ವಿರುದ್ಧ ಕಾಂಗ್ರೆಸ್ ದೂರು

Date:

ರಾಜ್ಯ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರ ಬಗ್ಗೆ ಅಸಭ್ಯ ಪದ ಬಳಸಿದ ಬಿಜೆಪಿಯ ವಿಧಾನ ಪರಿಷತ್‌ ಸದಸ್ಯ ಎನ್‌ ರವಿ ಕುಮಾರ್‌ ವಿರುದ್ಧ ವಿಧಾನಸೌಧ ಪೊಲೀಸ್‌ ಠಾಣೆಗೆ ರಾಜ್ಯ ಕಾಂಗ್ರೆಸ್‌ ದೂರು ನೀಡಿದೆ.

ಜುಲೈ 1ರಂದು ವಿಧಾನಸೌಧದ ಬಳಿ ಇರುವ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿರುವ ಸಂದರ್ಭದಲ್ಲಿ ವಿಧಾನ ಪರಿಷತ್‌ ಸದಸ್ಯ ಎನ್‌ ರವಿ ಕುಮಾರ್ ಅವರು ರಾಜ್ಯ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರ ಬಗ್ಗೆ ಅಸಭ್ಯ ಪದ ಬಳಸಿದ್ದು, ಕೂಡಲೇ ಅವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಬೇಕು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್‌ ಮನೋಹರ್‌ ದೂರು ನೀಡಿದ್ದಾರೆ.

ಎನ್ ರವಿ ಕುಮಾರ್ ಈಗಾಗಲೇ ಕಲಬುರಗಿಯ ಜಿಲ್ಲಾಧಿಕಾರಿಗಳ ವಿರುದ್ದವು ಸಹ ಈ ರೀತಿ ಪದ ಬಳಸಿ ಕ್ಷಮೆ ಕೋರಿದ್ದಾರೆ. ಇವರು ಮಹಿಳಾ ಸಮಾಜಕ್ಕೆ ಅತ್ಯಂತ ಅಗೌರವ ತೋರಿಸಿರುವ ಇಂತಹ ಅಸಭ್ಯ ವ್ಯಕ್ತಿಗಳ ವಿರುದ್ಧ ಅತ್ಯಂತ ಕಠಿಣ ಕ್ರಮ ಕೈಗೊಳ್ಳಬೇಕು ಮುಖ್ಯ ಕಾರ್ಯದರ್ಶಿಗಳ ವಿರುದ್ಧ ಬಳಸಿರುವ ಅಸಂಸದೀಯ ಪದವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಇವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ ‘ಶಾಲಿನಿ ರಜನೀಶ್ ಹಗಲು ಸಿಎಂಗೆ, ರಾತ್ರಿ ಸರ್ಕಾರಕ್ಕೆ ಕೆಲಸ’: ‌ನಾಲಿಗೆ ಹರಿಬಿಟ್ಟ ಬಿಜೆಪಿಯ ಎನ್ ರವಿಕುಮಾರ್

ಪ್ರತಿಭಟನೆ ಸಂದರ್ಭದಲ್ಲಿ ರವಿ ಕುಮಾರ್ ಅವರು ‘ಮುಖ್ಯ ಕಾರ್ಯದರ್ಶಿ ಶಾಲಿನಿ ಅವರು ರಾತ್ರಿಯಿಡೀ ರಾಜ್ಯ ಸರ್ಕಾರಕ್ಕಾಗಿ ಮತ್ತು ಇಡೀ ದಿನ ಮುಖ್ಯಮಂತ್ರಿಗಾಗಿ ಕೆಲಸ ಮಾಡುತ್ತಾರೆ ” ಎಂದು ಹೇಳಿದ್ದರು.

ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ವಿಧಾನಸೌಧದ ಗಾಂಧಿ ಪ್ರತಿಮೆಯ ಬಳಿ ಪ್ರತಿಭಟಿಸುತ್ತಿರುವ ವೇಳೆ ಉಪ ಪೊಲೀಸ್ ಆಯುಕ್ತ (ವಿಧಾನಸೌಧ ಭದ್ರತೆ) ಎಂ ಎನ್ ಕರಿಬಸವನಗೌಡ ಅವರೊಂದಿಗೆ ಮಾತನಾಡುತ್ತಿರುವಾಗ ರವಿಕುಮಾರ್‌ ಈ ಹೇಳಿಕೆ ನೀಡಿದ್ದರು.

ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ವಿರುದ್ಧ ಮಾನಹಾನಿಕರ ಹೇಳಿಕೆ ನೀಡಿರುವ ಬಿಜೆಪಿ ಎಂಎಲ್‌ಸಿ ಎನ್‌ ರವಿಕುಮಾರ್‌ ವಿರುದ್ಧ ಎಪ್‌ಐಆರ್‌ ದಾಖಲಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ಮೈಸೂರಿನ ‘ಒಡನಾಡಿ’ ಸಂಸ್ಥೆಯ ಪರಶುರಾಮ್‌ ಎಂ.ಎಲ್‌. ಮತ್ತು ಸ್ಟ್ಯಾನ್ಲಿ ಕೆ.ವಿ. ಅವರು ಪೊಲೀಸ್ ಮಹಾನಿರ್ದೇಶಕರು ಮತ್ತು ರಾಜ್ಯ ಮಹಿಳಾ ಆಯೋಗಕ್ಕೆ ಪತ್ರ ಬರೆದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...