ಜ.27ರಂದು ಕಾಂಗ್ರೆಸ್‌ನಿಂದ ‘ನರೇಗಾ ಬಚಾವ್‌ ಸಂಗ್ರಾಮ್’ ಬೃಹತ್‌ ಪ್ರತಿಭಟನೆ, ರಾಜಭವನ ಚಲೋ

Date:

ಕೆಪಿಸಿಸಿ ವತಿಯಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಜ.27ರಂದು ಬೆಳಿಗ್ಗೆ 10.30ಕ್ಕೆ ‘ನರೇಗಾ ಬಚಾವ್‌ ಸಂಗ್ರಾಮ್’-‌ ಆಂದೋಲನದ ಅಡಿಯಲ್ಲಿ ಬೃಹತ್‌ ಪ್ರತಿಭಟನೆ ಮತ್ತು ರಾಜಭವನ ಚಲೋ ಹಮ್ಮಿಕೊಳ್ಳಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ ಸಿ ವೇಣುಗೋಪಾಲ್‌, ರಣದೀಪ್‌ ಸಿಂಗ್ ಸುರ್ಜೇವಾಲ್‌, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷರು, ಎಐಸಿಸಿ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಕೆಪಿಸಿಸಿ ಪ್ರಕಟಣೆ ತಿಳಿಸಿದೆ.

ಮನರೇಗಾ ಯೋಜನೆಯ ಹೆಸರು ಬದಲಾಯಿಸಿದ್ದಲ್ಲದೇ ರಾಜ್ಯಕ್ಕೆ ಹೆಚ್ಚು ಆರ್ಥಿಕ ಹೊರೆ ಹೊರಿಸಿದ ಕೇಂದ್ರ ಸರ್ಕಾರದ ವಿರುದ್ಧ ದೇಶಾದ್ಯಂತ ಕಾಂಗ್ರೆಸ್‌ ಮತ್ತು ಉಳಿದ ವಿರೋಧ ಪಕ್ಷಗಳು ಪ್ರತಿಭಟನೆ ನಡೆಸುತ್ತಿವೆ. ಕಾರ್ಮಿಕ ಸಂಘಟನೆಗಳೂ ತಿದ್ದುಪಡಿ ಕಾಯ್ದೆ ರದ್ದುಪಡಿಸುವಂತೆ ಒತ್ತಾಯಿಸಿವೆ. ತಮಿಳುನಾಡು ಸರ್ಕಾರ ಈಗಾಗಲೇ ಜಿ ರಾಮ್‌ ಜಿ ಕಾಯ್ದೆ ವಿರುದ್ಧ ನಿರ್ಣಯ ಕೈಗೊಂಡಿದೆ. ಕರ್ನಾಟಕ ಸರ್ಕಾರ ಇದೇ ಉದ್ದೇಶದಿಂದ ವಿಶೇಷ ಅಧಿವೇಶನ ನಡೆಸುತ್ತಿದೆ. ರಾಜ್ಯಪಾಲರು ಜಂಟಿ ಅಧಿವೇಶ ಉದ್ದೇಶಿಸಿ ಭಾಷಣ ಮಾಡಲು ನಿರಾಕರಿಸಿದ ಕಾರಣ ವಿವಾದ ಉಂಟಾಗಿದ್ದು, ಕಾಯ್ದೆ ಕುರಿತ ಚರ್ಚೆ ನಡೆಯುವ ಬದಲು ಆಡಳಿತ ಪಕ್ಷ ಮತ್ತು ವಿಪಕ್ಷಗಳ ನಡುವೆ ಮಾತಿನ ಜಟಾಪಟಿಗೆ ಎರಡು ದಿನಗಳ ಕಲಾಪ ಬಲಿಯಾಗಿದೆ.

WhatsApp Image 2026 01 23 at 7.55.23 PM
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...