ಒಂದು ವರ್ಷದ ಅವಧಿಯವರೆಗೆ ವಿದ್ಯುತ್ ದರ ಹೆಚ್ಚಳ ಮುಂದೂಡಲು ಹೋಟೆಲ್ ಸಂಘ ಮನವಿ

Date:

  • ವಿದ್ಯುತ್ ದರ ಏರಿಕೆಯನ್ನು 9% ನಿಂದ 3% ವರೆಗೆ ಇಳಿಸಬೇಕು
  • ಇಲಾಖೆಗಳು ಪಾವತಿಸಬೇಕಾದ ಬಾಕಿ ಮೊತ್ತವನ್ನು ಬಡ್ಡಿಸಹಿತ ಸಂಗ್ರಹಿಸಬೇಕು

ರಾಜ್ಯದಲ್ಲಿ ಆಗಾಗ ವಿದ್ಯುತ್ ದರವನ್ನು ಹೆಚ್ಚಳ ಮಾಡುವುದರಿಂದ ನಮ್ಮ ಉದ್ಯಮದ ಮೇಲೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಮುಂದಿನ ಒಂದು ವರ್ಷದ ಅವಧಿಯವರೆಗೆ ದರ ಹೆಚ್ಚಳವನ್ನು ಮುಂದೂಡಬೇಕು ಎಂದು ಬೃಹತ್ ಬೆಂಗಳೂರು ಹೋಟೆಲ್ ಮಾಲೀಕರ ಸಂಘ ಮನವಿ ಮಾಡಿದೆ.

ಈ ಬಗ್ಗೆ ಇಂಧನ ಸಚಿವ ಕೆ ಜೆ ಜಾರ್ಜ್‌ ಅವರಿಗೆ ಮನವಿ ಪತ್ರ ಕಳುಹಿಸಿರುವ ಹೋಟೆಲ್ ಸಂಘ, “ದರ ಏರಿಕೆಯಿಂದ ಎಲ್ಲ ಉದ್ಯಮದ ಮಾಲೀಕರಿಗೆ ಬಹಳಷ್ಟು ತೊಂದರೆಯಾಗುತ್ತಿದೆ. ದರ ಏರಿಕೆಯ ಜತೆಗೆ ಇಂಧನ ಮತ್ತು ವೆಚ್ಚ ಹೊಂದಾಣಿಕೆ, ಸ್ಥಿರ ಬೇಡಿಕೆ ಶುಲ್ಕಗಳು ಹೆಚ್ಚಳವಾಗಿವೆ. ಏರಿಕೆಯಾಗಿರುವ ದರದ ಮೇಲೂ ಸಹ 9% ತೆರಿಗೆ ಕೂಡ ಹೆಚ್ಚಳವಾಗಿದೆ. ಇದರಿಂದ ಉದ್ಯಮ ನಡೆಸಲು ತುಂಬಾ ಸಮಸ್ಯೆಯಾಗುತ್ತದೆ” ಎಂದು ಹೇಳಿದೆ.

“ಈಗಿರುವ ವಿದ್ಯುತ್ ದರ ಏರಿಕೆಯನ್ನು 9% ನಿಂದ 3% ವರೆಗೆ ಇಳಿಸಬೇಕು. ಸರಬರಾಜು ಮತ್ತು ವಿತರಣೆಯಲ್ಲಿ ಉಂಟಾಗುವ ನಷ್ಟಗಳನ್ನು ಕಡಿಮೆ ಮಾಡಬೇಕು. ರಾಜ್ಯ ಹಾಗೂ ಕೇಂದ್ರ ಸರ್ಕಾರದ ಇಲಾಖೆಗಳು ಪಾವತಿಸಬೇಕಾದ ಬಾಕಿ ಮೊತ್ತವನ್ನು ಬಡ್ಡಿಸಹಿತ ಸಂಗ್ರಹಿಸಬೇಕು. ಪ್ರೀಪೇಡ್ ಮೀಟರ್‌ಗಳನ್ನು ಅಳವಡಿಸಿ ಗ್ರಾಹಕರ ಠೇವಣಿ ಹಣವನ್ನು ಹಿಂತಿರುಗಿಸಬೇಕು. ಅನಗತ್ಯ ಆಡಳಿತ ಖರ್ಚು-ವೆಚ್ಚಗಳನ್ನು ಹತೋಟಿಗೆ ತರಬೇಕು” ಎಂದು ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬಿಬಿಎಂಪಿ | ₹118 ಕೋಟಿ ಅಕ್ರಮ ಕಾಮಗಾರಿ : 8 ಎಂಜಿನಿಯರ್ ಅಮಾನತು

“ಇವೆಲ್ಲವನ್ನೂ ಪರಿಗಣಿಸಿದಲ್ಲಿ ಉದ್ಯಮಿಗಳಾದ ನಮಗೂ ಇಂಧನ ಇಲಾಖೆಗೂ ಅನುಕೂಲವಾಗಲಿದೆ. ಉದ್ಯಮಿಯಾಗು, ಉದ್ಯೋಗ ಕೊಡು ಎನ್ನುವ ಸರ್ಕಾರದ ಪ್ರಣಾಳಿಕೆಯನ್ನು ಮುಂದುವರೆಸಿಕೊಂಡು ಹೋಗಲು ಸಹಕಾರಿಯಾಗಲಿದೆ” ಎಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...