‘ಬುಡಕಟ್ಟು ಸಂಶೋಧನಾ ಸಂಸ್ಥೆ’ಯ ನಿರ್ದೇಶಕನ ಬಿಡುಗಡೆ ಒತ್ತಾಯ

Date:

ʼಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆʼಯನ್ನು ಅಮಾಯಕ ಆದಿವಾಸಿಗಳಿಗಾಗಿ ಉಳಿಸಬೇಕು. ಆದರೆ, ಅದನ್ನು ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ. ಅಲ್ಲದೆ, ಸಂಸ್ಥೆಯ ನಿರ್ದೇಶಕ ಎಲ್ ಶ್ರೀನಿವಾಸ ಅವರು ಆದಿವಾಸಿ ವಿರೋಧಿ ನಿಲುವನ್ನು ಹೊಂದಿದ್ದಾರೆ. ಅವರನ್ನು ಬೇರೆ ಇಲಾಖೆಗೆ ವರ್ಗಾವಣೆ ಮಾಡಬೇಕು. ಆ ಮೂಲಕ ಸಂಸ್ಥೆಯನ್ನು ಉಳಿಸಬೇಕು ಎಂದು ಆದಿವಾಸಿ ಬಿರ್ಸಾ ಮುಂಡ ಯುವಸೇನೆ ಆಗ್ರಹಿಸಿದೆ.

ಸೋಮವಾರ ನಡೆದ ಮುಖ್ಯಮಂತ್ರಿಗಳ ಜನತಾ ದರ್ಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಸಂಘಟನೆಯ ಮುಖಂಡರು ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. “ಕರ್ನಾಟಕದ ನಿಜವಾದ (ಅಸಂಘಟಿತ) ಆದಿವಾಸಿಗಳಾದ ನಾವು ಇವತ್ತಿಗೂ ಕಾಡು ಮತ್ತು ಕಾಡಂಚಿನಲ್ಲಿ ವಾಸ ಮಾಡುತ್ತಿದ್ದೇವೆ. ನಾವು ಸ್ವತಂತ್ರ ಭಾರತದಲ್ಲೂ ಅತೀವ ನಿರ್ಲಕ್ಷ್ಯಕ್ಕೆ ಒಳಗಾಗಿದ್ದೇವೆ. 75 ವರ್ಷಗಳಿಂದ ಬಂದ ಸರ್ಕಾರಗಳು ನಮ್ಮ ಹೆಸರಿನಲ್ಲಿ ಸಂಸ್ಥೆಗಳನ್ನು ರೂಪಿಸಿದ್ದರೂ, ವಾಸ್ತವದಲ್ಲಿ ಆ ಸಂಸ್ಥೆಗಳು ಆಯಾ ಸರ್ಕಾರಗಳ ಕ್ಷುಲ್ಲಕ ರಾಜಕಾರಣದಿಂದಾಗಿ, ಇವತ್ತಿಗೂ  ಸರ್ಕಾರ ಮತ್ತು ಸ್ವತಂತ್ರ ಎಂಬುದು ನಮ್ಮನ್ನು ತಲುಪಿಯೇ ಇಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಆದಿವಾಸಿಗಳ ಬಗ್ಗೆ ವೈಜ್ಞಾನಿಕ ಅಧ್ಯಯನ ಕೈಗೊಂಡು, ಅಭಿವೃದ್ಧಿ ಯೋಜನೆಗಳನ್ನು ಕೈಗೊಳ್ಳಬೇಕಾಗಿದ್ದ ‘ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ’ ನಿರಾಶ್ರಿತ ಕೇಂದ್ರವಾಗಿ ಮಾರ್ಪಟ್ಟಿದೆ. ಇಲ್ಲಿಗೆ ಬರುವ ಅಧಿಕಾರಿಗಳು ಕೇವಲ ಹಣ ಅಧಿಕಾರಕ್ಕೆ ಸೀಮಿತಗೊಳ್ಳುತ್ತಿದ್ದಾರೆ. ಸಂಸ್ಥೆಗೆ ಬರುವ ಅಧಿಕಾರಿಗಳಿಗೆ ಆದಿವಾಸಿಗಳ ಬಗ್ಗೆ ಕಿಂಚಿತ್ತು ಕಾಳಜಿ, ಕಳಕಳಿ ಇಲ್ಲ. ಅವರು ಅರಿವು ಕಾರ್ಯಕ್ರಮ, ಆರೋಗ್ಯ ಶಿಬಿರಗಳಂತಹ ನಾಮಮಾತ್ರದ ಕೆಲಸಗಳಿಗೆ ಸೀಮಿತವಾಗಿದ್ದು, ಹಣಗಳಿಸುವ ಕಾಯಕದಲ್ಲಿ ಮುಳುಗಿ ಹೋಗಿರುತ್ತಾರೆ. ಪ್ರಸ್ತುತ ಸಂಸ್ಥೆಯ ನಿರ್ದೇಶಕ ಎಲ್ ಶ್ರೀನಿವಾಸ ಎಂಬುವವರು ಆಡಳಿತ ಜ್ಞಾನವನ್ನೇ ಹೊಂದಿಲ್ಲ. ಅವರು ಆದಿವಾಸಿ ವಿರೋಧಿ ಧೋರಣೆ ಹೊಂದಿರುವ ಪ್ರಬಲ ಜಾತಿಯವರಾಗಿದ್ದಾರೆ. ಕೃತಿ ಚೌರ್ಯ ಎಸಗಿದ ಆರೋಪವೂ ಅವರ ಮೇಲಿದೆ. ಅವರು ಈ ಹುದ್ದೆಯನ್ನು ಹಣ ಗಳಿಸುವ ಸಾಧನವಾಗಿ ಬಳಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

WhatsApp Image 2023 11 27 at 6.55.55 PM 1

“ಸಂಸ್ಥೆಯನ್ನು ಅಸಹಾಯಕ ಆದಿವಾಸಿಗಳ ಪರವಾಗಿ ಕೆಲಸ ಮಾಡುವಂತೆ ಮಾಡಬೇಕು. ಅಸಮರ್ಥ ಅಧಿಕಾರಿ ಎಲ್ ಶ್ರೀನಿವಾಸ್ ಅವರನ್ನು ಕೂಡಲೆ ಹುದ್ದೆಯಿಂದ ಬಿಡುಗಡೆ ಮಾಡಬೇಕು. ಆದಿವಾಸಿಗಳ ಬಗ್ಗೆ ನೈಜ ಕಾಳಜಿ ಮತ್ತು ಬದ್ಧತೆ ಇರುವ ಅಧಿಕಾರಿಯನ್ನು ಸಂಸ್ಥೆಗೆ ನೇಮಿಸಬೇಕು” ಎಂದು ಆಗ್ರಹಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ‘ಮಹಾಧರಣಿ’ಗೆ ಸಿಎಂ ಸಿದ್ದರಾಮಯ್ಯ ಸ್ಪಂದನೆ: ಡಿ.19ರಂದು ಮಹತ್ವದ ಸಭೆ

“ಅಲ್ಲದೆ, ಇತ್ತೀಚಿನ ದಿನಗಳಲ್ಲಿ ಆದಿವಾಸಿಗಳ ಹೆಸರಿನಲ್ಲಿ ಕೆಲವು ನಕಲಿ ಆದಿವಾಸಿ ಸಂಘಟನೆಗಳು ಹುಟ್ಟಿಕೊಂಡಿವೆ. ಅವರು ತಾವೇ ಬುಡಕಟ್ಟುಗಳ ಪ್ರತಿನಿಧಿಗಳು ಎಂದು ಹೇಳಿಕೊಂಡು, ಸರ್ಕಾರ ಮತ್ತು ಅಧಿಕಾರಿಗಳ ಮೂಲಕ ತಮ್ಮ ಸ್ವಾರ್ಥಸಾಧನೆಯಲ್ಲಿ ತೊಡಗಿದ್ದಾರೆ. ಆದರೆ, ಕಾಡಂಚಿನಲ್ಲಿ ಯಾವುದೇ ಸವಲತ್ತುಗಳಿಲ್ಲದೆ ಬದುಕುತ್ತಿರುವ ನಾವುಗಳು ಇಂದಿಗೂ ಅಸಹಾಯಕ ಪರಿಸ್ಥಿತಿಯಲ್ಲಿದ್ದೇವೆ. ಕೆಲವೇ ಪಟ್ಟಭದ್ರರು, ಕೆಲವು ಪ್ರಾಧ್ಯಾಪಕರುಗಳು ಆದಿವಾಸಿಗಳ ಹೆಸರನ್ನು ಹೇಳಿಕೊಂಡು ತಮ್ಮ ಅನುಕೂಲಕ್ಕೆ ತಕ್ಕಂತೆ ರಾಜ್ಯ ಸಂಘಟನೆ ಹಾಗೂ ರಾಷ್ಟ್ರ ಸಂಘಟನೆಗಳ ಲೇಬಲ್ ಹಚ್ಚಿಕೊಂಡು ನಿಜವಾದ ಆದಿವಾಸಿಗಳಿಗೆ ಅನ್ಯಾಯ ಮಾಡುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

“ಶ್ರೀನಿವಾಸ್‌ ಅವರನ್ನು ಹುದ್ದೆಯಿಂದ ಬಿಡುಗಡೆ ಮಾಡುವಂತೆ ಆದೇಶಿಸಿ ತಿಂಗಳುಗಳು ಕಳೆದಿವೆ. ಅದರೂ, ಕ್ರಮ ಕೈಗೊಳ್ಳಲಾಗಿಲ್ಲ. ಕೆಲವು ನಕಲಿ ಆದಿವಾಸಿಗಳು ಆದಿವಾಸಿ ಪ್ರಮಾಣ ಪತ್ರ ಪಡೆಯುತ್ತಿದ್ದಾರೆ. ಅವರಿಗೆ ಶ್ರಿನಿವಾಸ್‌ ಪ್ರಮಾಣ ಪತ್ರ ನೀಡಿ, ಸರ್ಕಾರಕ್ಕೆ ತಪ್ಪು ಮಾಹಿತಿ ನೀಡುತ್ತಿದ್ದಾರೆ. ಅವರನ್ನು ಕೂಡಲೇ ಹುದ್ದೆಯಿಂದ ಬಿಡುಗಡೆ ಮಾಡಬೇಕು. ನಕಲಿ ಆದಿವಾಸಿ ಪ್ರಮಾಣ ಪತ್ರ ಪಡೆಯುತ್ತಿರುವವರ ವಿರುದ್ಧ ತನಿಖೆ ನಡೆಸಬೇಕು” ಎಂದು ಆಗ್ರಹಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ನಿಯೋಗದಲ್ಲಿ ಸಂಘಟನೆಯ ಮುಖಂಡ ಪ್ರದೀಪ್ ಕುಮಾರ್ ಸೇರಿದಂತೆ ಹಲವರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...