ಬೆಂಗಳೂರು | ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಳ

Date:

  • ಆಸ್ಪತ್ರೆಯಲ್ಲಿ ಡೆಂಗ್ಯೂಗೆ ದಾಖಲಾಗುವವರ ಸಂಖ್ಯೆ 20% ಹೆಚ್ಚಳ
  • ಜುಲೈ-ಆಗಸ್ಟ್‌ನಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಇನ್ನೂ ಹೆಚ್ಚಾಗುವ ನಿರೀಕ್ಷೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳು ಏರಿಕೆಯಾಗುತ್ತಿದ್ದು, ನಗರದ ಆಸ್ಪತ್ರೆಗಳಲ್ಲಿ ಏಪ್ರಿಲ್-ಮೇ ತಿಂಗಳಿನಲ್ಲಿ ದಿನಕ್ಕೆ 20ಕ್ಕಿಂತ ಕಡಿಮೆ ಡೆಂಗ್ಯೂ ಪ್ರಕರಣಗಳು ವರದಿಯಾಗುತ್ತಿದ್ದವು. ಇದೀಗ, ಈ ಸಂಖ್ಯೆ 100ಕ್ಕೆ ಏರಿಕೆ ಕಂಡಿದೆ ಎಂದು ಸಮಗ್ರ ಆರೋಗ್ಯ ಮಾಹಿತಿ ವೇದಿಕೆ (ಇಂಟಿಗ್ರೇಟೆಡ್ ಹೆಲ್ತ್ ಇನ್ಫಾರ್ಮೇಶನ್ ಪ್ಲಾಟ್‌ಫಾರ್ಮ್) (ಐಎಚ್‌ಐಪಿ) ಹೇಳಿದೆ.

ನಗರದಲ್ಲಿನ ಸರ್ಕಾರಿ ಮತ್ತು ಖಾಸಗಿ ಆರೋಗ್ಯ ಸೌಲಭ್ಯಗಳಿಂದ ರೋಗಿಗಳ ವರದಿಯನ್ನು ಐಎಚ್‌ಐಪಿ ಪೋರ್ಟಲ್‌ನಲ್ಲಿ ನಮೂದಿಸಲಾಗಿದೆ.

ಮೇ ಅಂತ್ಯಕ್ಕೆ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಕ್ರಮೇಣ ಏರಿಕೆಯಾಗಲು ಆರಂಭವಾಯಿತು. ಜೂನ್‌ನಿಂದಲೂ ಈ ಸಂಖ್ಯೆ ಏರಿಕೆ ಕಾಣುತ್ತಿದೆ. ಪ್ರತಿ ವರ್ಷ ಮಳೆಗಾಲದ ಸಮಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಳವಾಗುತ್ತವೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಪ್ರಕರಣಗಳು ವರದಿಯಾಗಬಹುದು. ತೀವ್ರತರವಾದ ಪ್ರಕರಣಗಳು ಕಡಿಮೆ ಇದ್ದರೂ ದಾಖಲಾತಿಗಳ ಸಂಖ್ಯೆ ಹೆಚ್ಚಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸ್ಪರ್ಶ್ ಆಸ್ಪತ್ರೆಯ ಸಾಂಕ್ರಾಮಿಕ ರೋಗಗಳ ಸಲಹೆಗಾರ ಡಾ.ಜಾನ್ ಪಾಲ್ ಮಾತನಾಡಿ, “ಆಸ್ಪತ್ರೆಯಲ್ಲಿ ಡೆಂಗ್ಯೂಗೆ ದಾಖಲಾಗುವವರ ಸಂಖ್ಯೆ ಏಪ್ರಿಲ್-ಮೇಗೆ ಹೋಲಿಸಿದರೆ ಈಗ 10 ರಿಂದ 20 ಪ್ರತಿಶತದಷ್ಟು ಹೆಚ್ಚಾಗಿದೆ” ಎಂದರು.

ಸೇಂಟ್ ಜಾನ್ಸ್ ಆಸ್ಪತ್ರೆಯ ಮಕ್ಕಳ ತಜ್ಞೆ ಡಾ.ಪೂರ್ಣಿಮಾ ಆರ್ ಎನ್ ಮಾತನಾಡಿ, “ಈ ಬಾರಿ ಮಕ್ಕಳಲ್ಲಿ ಡೆಂಗ್ಯೂ ಕಾಣಿಸಿಕೊಂಡಿರುವುದು ವಿಭಿನ್ನವಾಗಿದೆ. ಡೆಂಗ್ಯೂ ಜ್ವರವು ಸಾಮಾನ್ಯವಾಗಿ ಮೂರರಿಂದ ನಾಲ್ಕು ದಿನಗಳವರೆಗೆ ಇರುತ್ತದೆ. ಆದರೆ, ಈ ಬಾರಿ ಏಳರಿಂದ 10 ದಿನಗಳ ಕಾಲ ಜ್ವರ ಇದೆ. ಈ ವೇಳೆಯಲ್ಲಿ ಮಾತ್ರ ಕಡಿಮೆ ಬಿಪಿ ಮತ್ತು ಪ್ಲೇಟ್‌ಲೆಟ್ ಸಂಖ್ಯೆ ಕಡಿಮೆ ಸೇರಿದಂತೆ ಡೆಂಗ್ಯೂ ನಿರ್ದಿಷ್ಟ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಕರಾವಳಿಯಲ್ಲಿ ಬೆಂಬಿಡದೆ ಸುರಿಯುತ್ತಿರುವ ಮಳೆ

“ಕೆಲವು ಸಂದರ್ಭಗಳಲ್ಲಿ, ಮೂರರಿಂದ ನಾಲ್ಕು ದಿನಗಳವರೆಗೆ ಜ್ವರ ಇರುತ್ತದೆ. ಅದು ಕ್ರಮೇಣ ಕಡಿಮೆಯಾಗುತ್ತದೆ ಮತ್ತೆ ಆರಂಭವಾಗುತ್ತದೆ. ಮಕ್ಕಳಿಗೆ ತೀವ್ರ ಆಯಾಸವಿದೆ. ಆಸ್ಪತ್ರೆಯ ಮಕ್ಕಳ ವಾರ್ಡ್‌ನಲ್ಲಿ ಈಗ ಡೆಂಗ್ಯೂ ರೋಗಿಗಳು ಸುಮಾರು 10 ಪ್ರತಿಶತದಷ್ಟು ದಾಖಲಾಗಿದ್ದಾರೆ. ಜುಲೈ-ಆಗಸ್ಟ್‌ನಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಇನ್ನೂ ಹೆಚ್ಚಾಗುವ ನಿರೀಕ್ಷೆಯಿದೆ. 1 ರಿಂದ 2 ರಷ್ಟು ಡೆಂಗ್ಯೂ ರೋಗಿಗಳು ಪ್ರಸ್ತುತ ಐಸಿಯುಗೆ ದಾಖಲಾಗುತ್ತಿದ್ದಾರೆ” ಎಂದು ಡಾ.ಪೂರ್ಣಿಮಾ ಹೇಳಿದರು.

“ಏಪ್ರಿಲ್-ಮೇಗೆ ಹೋಲಿಸಿದರೆ ಕೆಮ್ಮು, ಶೀತ, ಆಸ್ತಮಾದ ಉಲ್ಬಣ ಸೇರಿದಂತೆ ಇತ್ಯಾದಿ ರೋಗ ಲಕ್ಷಣಗಳನ್ನು ಹೊಂದಿರುವ ಸುಮಾರು 20 ರಿಂದ 30 ಪ್ರತಿಶತದಷ್ಟು ಜನರ ಸಂಖ್ಯೆ ಹೆಚ್ಚಾಗಿದೆ. ಆದರೆ, ಸಂಖ್ಯೆ ಅಥವಾ ತೀವ್ರತೆಯ ವಿಷಯದಲ್ಲಿ ಪರಿಸ್ಥಿತಿಯು ಆತಂಕಕಾರಿಯಾಗಿಲ್ಲ” ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...