ಬೆಂಗಳೂರಿನ ಎಲ್ಲ ಪೊಲೀಸ್‌ ಠಾಣೆಗಳ ಡಿಜಿಟಲೀಕರಣ: ಪೊಲೀಸ್ ಆಯುಕ್ತ ದಯಾನಂದ

Date:

ಇನ್ನು ಮುಂದೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ಎಲ್ಲ ಪೊಲೀಸ್‌ ಠಾಣೆಗಳು ಡಿಜಿಟಲೀಕರಣಗೊಳ್ಳಲಿದ್ದು, ನವೆಂಬರ್ ವೇಳೆಗೆ ಠಾಣೆಗಳಲ್ಲಿ ಎಫ್‌ಐಆರ್‌ ನೋಂದಣಿ, ತನಿಖೆ ಇತ್ಯಾದಿ ಡಿಜಿಟಲ್ ಆಗಲಿದೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ, “ರಾಷ್ಟ್ರೀಯ ಇ-ಆಡಳಿತ ಯೋಜನೆಯಡಿ ಇ-ಆಫೀಸ್-ಮಿಷನ್ ಮೋಡ್ ಪ್ರಾಜೆಕ್ಟ್ (ಎಂಎಂಪಿ) ಅನ್ನು ಸಂಪೂರ್ಣವಾಗಿ ಕಾರ್ಯಗತಗೊಳಿಸಲಾಗುವುದು. ನವೆಂಬರ್‌ ವೇಳೆಗೆ ಎಲ್ಲ ಪೊಲೀಸ್‌ ಠಾಣೆಗಳು ಡಿಜಿಟಲ್ ಆಗಲಿವೆ” ಎಂದು ಹೇಳಿದರು.

“ಡಿಜಿಟೈಸೇಶನ್ ಅನ್ನು ಆದಷ್ಟು ಬೇಗ ಜಾರಿಗೆ ತರಲಾಗುವುದು. ಮೊದಲ ಹಂತದಲ್ಲಿ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಭೌತಿಕ ದಾಖಲೆಗಳನ್ನು ತೆಗೆದು ಇ-ಕಚೇರಿಗೆ ಬದಲಾಯಿಸಲಾಗಿದೆ. ಸಂಚಾರ ನಿರ್ವಹಣೆ ಮತ್ತು ಅಪರಾಧ ಪತ್ತೆಗೆ ತಂತ್ರಜ್ಞಾನವನ್ನು ಬಳಸುತ್ತಿದ್ದೇವೆ. ಈಗ ಆಡಳಿತಾತ್ಮಕ ಕೆಲಸದಲ್ಲಿ ತಂತ್ರಜ್ಞಾನವನ್ನು ತರುತ್ತಿದ್ದೇವೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇದು ಕೆಲಸ ಕಾರ್ಯಗಳನ್ನು ವೇಗಗೊಳಿಸುತ್ತದೆ. ಸಿಬ್ಬಂದಿ ದಕ್ಷತೆಯನ್ನು ಹೆಚ್ಚಿಸುತ್ತದೆ. ಜತೆಗೆ ಕಚೇರಿಯಲ್ಲಿನ ಅವ್ಯವಸ್ಥೆ ಕಡಿಮೆಯಾಗುತ್ತದೆ. ಈ ವ್ಯವಸ್ಥೆಯು ಗೌಪ್ಯತೆಯನ್ನು ಕಾಪಾಡಿಕೊಳ್ಳಲು ಸಹಾಯ ಮಾಡುವುದರ ಜತೆಗೆ ಪಾರದರ್ಶಕತೆಯನ್ನು ತರುತ್ತದೆ” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕಳೆದ ವರ್ಷಕ್ಕಿಂತ ನಾಯಿ ಕಡಿತಗಳ ಸಂಖ್ಯೆ ಹೆಚ್ಚಳ

“ಡಿಸಿಪಿ ಮತ್ತು ಎಸಿಪಿಗಳ ಕಚೇರಿಗಳಲ್ಲಿ ಈ ವ್ಯವಸ್ಥೆ ಜಾರಿಗೆ ತರಲಾಗುವುದು. ಕ್ರಮೇಣ ಪೊಲೀಸ್ ಠಾಣೆಗಳಲ್ಲಿ ಅಳವಡಿಸಲಾಗುವುದು. ಈಗಾಗಲೇ, ಆಗ್ನೇಯ ವಿಭಾಗದ ಪೊಲೀಸ್ ಠಾಣೆಗಳಲ್ಲಿ ಇದನ್ನು ಜಾರಿಗೊಳಿಸಲಾಗಿದೆ. ಇದನ್ನು ಇತರ ವಿಭಾಗಗಳಿಗೂ ವಿಸ್ತರಿಸುತ್ತೇವೆ. ಒಂದು ತಿಂಗಳಲ್ಲಿ ಸಂಪೂರ್ಣವಾಗಿ ಕಾಗದರಹಿತವಾಗಲು ಕಾರ್ಯ ನಿರ್ವಹಿಸುತ್ತೇವೆ. ಹೊಸ ವ್ಯವಸ್ಥೆಯು ಲಭ್ಯವಿರುವ ಮಾನವ ಸಂಪನ್ಮೂಲವನ್ನು ಸಮರ್ಥವಾಗಿ ಬಳಸಿಕೊಳ್ಳಲು ಮತ್ತು ಸಿಬ್ಬಂದಿ ಕೊರತೆಯನ್ನು ನಿವಾರಿಸಲು ಸಹಾಯ ಮಾಡುತ್ತದೆ” ಎಂದಿದ್ದಾರೆ.

“ಹಳೆಯ ಕಡತಗಳನ್ನು ಡಿಜಿಟಲೀಕರಣಗೊಳಿಸಲು ಪ್ರತ್ಯೇಕ ಉಪಕ್ರಮವನ್ನು ಕೈಗೊಳ್ಳುತ್ತೇವೆ. ಅಧಿಕಾರಿಗಳಿಗೆ ರಜೆಗಳು, ಬಡ್ತಿಗಳು, ಶಿಕ್ಷೆಗಳು ಮತ್ತು ವಿಚಾರಣೆಗಳಂತಹ ಆಡಳಿತಾತ್ಮಕ ವಿಷಯಗಳನ್ನು ದೂರದಿಂದಲೇ ತಿಳಿಯಲು ಡಿಜಿಟಲ್ ಮೋಡ್ ಸಹಾಯ ಮಾಡುತ್ತದೆ” ಎಂದು ದಯಾನಂದ ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...