ರಾಜಧಾನಿಯಲ್ಲಿ ಕಣ್ಮರೆಯಾಗುತ್ತಿರುವ ಬಸ್‌ ತಂಗುದಾಣಗಳು

Date:

  • ‘ಬಸ್ ಸ್ಟ್ಯಾಂಡ್ ಹುಡುಕಿ ಕೊಡಿ’ ಎಂದು ಠಾಣೆಗೆ ದೂರು
  • ಬಳಕೆ ಇಲ್ಲದ ಬಸ್‌ ಸ್ಟ್ಯಾಂಡ್‌ಗಳ ತೆರುವು ಕಾರ್ಯಾಚರಣೆ

ರಾಜಧಾನಿ ಬೆಂಗಳೂರಿನಲ್ಲಿರುವ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಯ ಬಸ್‌ ತಂಗುದಾಣಗಳು ಒಂದೊಂದಾಗಿ ಹೇಳ ಹೆಸರಿಲ್ಲದಂತೆ ಕಣ್ಮರೆಯಾಗುತ್ತಿವೆ. ಇದೀಗ ಚಾಮರಾಜಪೇಟೆಯ ರಾಯನ್ ಸರ್ಕಲ್‌ನಲ್ಲಿ ನೆನ್ನೆ ಇದ್ದ ಬಸ್‌ ತಂಗುದಾಣ ಇವತ್ತು ಕಾಣೆಯಾಗಿದೆ.

ಈ ಹಿಂದೆ, ನಗರದ ಹೆಚ್‌ಎಸ್‌ಆರ್‌ ಲೇಔಟ್‌ನಲ್ಲಿರುವ ಲಯನ್ಸ್‌ ಬಸ್‌ ತಂಗುದಾಣ ರಾತ್ರೋರಾತ್ರಿ ಮಾಯವಾಗಿತ್ತು.

ಬಸ್‌ ಸ್ಟಾಪ್ ಕಣ್ಮರೆಯಾಗಿರುವ ಬಗ್ಗೆ ಈ ದಿನ.ಕಾಮ್‌ ಜತೆಗೆ ಮಾತನಾಡಿದ ವಂದೆ ಮಾತರಂ ಸಂಘಟನೆಯ ರಾಜ್ಯಾದ್ಯಕ್ಷ ಸಿಎಂ ಶಿವಕುಮಾರ್ ನಾಯ್ಕ, “ಚಾಮರಾಜಪೇಟೆಯ ರಾಯನ್ ಸರ್ಕಲ್‌ನಲ್ಲಿ ನೆನ್ನೆ ಇದ್ದ ಬಸ್ ನಿಲ್ದಾಣ ಇವತ್ತು ಇಲ್ಲವಾಗಿದೆ. ಆದ್ದರಿಂದ, ಸಾರ್ವಜನಿಕ ಹಿತಾಸಕ್ತಿಯ ಮೇರೆಗೆ ಚಾಮರಾಜಪೇಟೆಯ ಪೊಲೀಸ್ ಠಾಣೆಗೆ ‘ಬಸ್ ಸ್ಟ್ಯಾಂಡ್ ಹುಡುಕಿ ಕೊಡಿ’ ಎಂದು ದೂರು ದಾಖಲಿಸಲಾಗುವುದು. ಬಸ್‌ ನಿಲ್ದಾಣ ಬಳಕೆಯಲ್ಲಿತ್ತು. ಯಾವುದೇ ಸೌಕರ್ಯದ ಕೊರತೆ ಇರಲಿಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬೆಂಗಳೂರಿನಲ್ಲಿ ಬಳಕೆ ಇಲ್ಲದ ಕೆಲವು ಬಸ್‌ ಸ್ಟ್ಯಾಂಡ್‌ಗಳನ್ನು ತೆರುವು ಮಾಡಲಾಗುತ್ತಿದೆ. ಈ ಹಿಂದೆ ಹೆಚ್‌ಎಸ್‌ಆರ್‌ ಲೇಔಟ್‌ನಲ್ಲಿರುವ ಲಯನ್ಸ್‌ ಬಸ್‌ ನಿಲ್ದಾಣವನ್ನು ತೆರುವು ಮಾಡಲಾಗಿದೆ. ಅದು ಬಳಕೆಯಿಲ್ಲದ ಕಾರಣ ತೆರುವು ಮಾಡಲಾಗಿತ್ತು. ಇನ್ನುಳಿದಂತೆ, ಕೆಲವು ಬಸ್‌ ನಿಲ್ದಾಣಗಳಿಂದ ಫುಟ್‌ಪಾತ್ ಒತ್ತುವರಿಯಾಗಿದ್ದರೆ, ಅವುಗಳನ್ನು ತೆರುವು ಮಾಡಲಾಗುತ್ತಿದೆ” ಎಂದು ಬಿಬಿಎಂಪಿ ಸಾರ್ವಜನಿಕ ಸಂಪರ್ಕಾಧಿಕಾರಿ ಸುರೇಶ್ ಈ ದಿನ.ಕಾಮ್‌ಗೆ ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...