ಮಹಿಳಾ ಉಚಿತ ಪ್ರಯಾಣದ ಬಗ್ಗೆ ಅಪಹಾಸ್ಯ ಮಾಡಿದರೆ ಶಿಸ್ತು ಕ್ರಮ : ಸಾರಿಗೆ ಇಲಾಖೆ

Date:

  • ಶಕ್ತಿ ಯೋಜನೆಯ ಯಶಸ್ವಿ ಅನುಷ್ಠಾನಕ್ಕೆ ನಿಗಮದ ಚಾಲನಾ ಸಿಬ್ಬಂದಿ ಪರಿಶ್ರಮ
  • ನಿಗಮದ ಆದಾಯದಲ್ಲಿ ಸೋರಿಕೆ ಆಗುತ್ತಿದ್ದ ₹73,859 ಅನ್ನು ಪತ್ತೆ ಹಚ್ಚಿದ ತನಿಖಾಧಿಕಾರಿಗಳು

ಕಾಂಗ್ರೆಸ್‌ ಸರ್ಕಾರದ ಮಹಾತ್ವಾಕಾಂಕ್ಷೆಯ ಶಕ್ತಿ ಯೋಜನೆ ಜೂನ್ 11 ರಂದು ಜಾರಿಗೆ ಬಂದಿದ್ದು, ಮಹಿಳೆಯರು ಸಂತಸದಿಂದ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾರೆ. ಮಹಿಳೆಯರು ಉಚಿತವಾಗಿ ಪ್ರಯಾಣಿಸುವ ಕುರಿತು ಅಪಹಾಸ್ಯ ಮಾಡುವುದು ಹಾಗೂ ಬಸ್‌ನಲ್ಲಿ ಅವರೊಂದಿಗೆ ಅಗೌರವದಿಂದ ನಡೆದುಕೊಂಡ ಕುರಿತು ದೂರುಗಳು ಬಂದರೆ, ಅಂತಹ ಬಸ್ ನಿರ್ವಾಹಕ ಅಥವಾ ಚಾಲಕರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ತಿಳಿಸಿದೆ.

ಈ ಬಗ್ಗೆ ಸುತ್ತೋಲೆ ಹೊರಡಿಸಿರುವ ನಿಗಮ, “ಶಕ್ತಿ ಯೋಜನೆಯ ಯಶಸ್ವಿ ಅನುಷ್ಠಾನಕ್ಕೆ ನಿಗಮದ ಚಾಲನಾ ಸಿಬ್ಬಂದಿ ಪರಿಶ್ರಮ ಹೆಚ್ಚಿನ ಮಟ್ಟದಲ್ಲಿದೆ. ಆದರೆ, ಕೆಲವೊಂದು ಅಹಿತಕರ ಘಟನೆಗಳು ಈ ಮಹತ್ವದ ಯೋಜನೆಯ ಬಗ್ಗೆ ಭಿನ್ನಾಭಿಪ್ರಾಯಗಳು ಮೂಡುವಂತೆ ಮಾಡುತ್ತಿದೆ” ಎಂದು ಹೇಳಿದೆ.

“ಚಾಲನಾ ಸಿಬ್ಬಂದಿಗಳು ನಿಗಮದ ಸಾರಿಗೆಗಳಲ್ಲಿ ಪ್ರಯಾಣಿಸುವ ಮಹಿಳಾ ಪ್ರಯಾಣಿಕರೊಂದಿಗೆ ಸೌಜನ್ಯಯುತವಾಗಿ ವರ್ತಿಸಬೇಕು. ಈ ಬಗ್ಗೆ ಮಹಿಳಾ ಪ್ರಯಾಣಿಕರಿಂದ ಯಾವುದೇ ದೂರುಗಳಿಗೆ ಅವಕಾಶ ನೀಡದಂತೆ ಕರ್ತವ್ಯ ನಿರ್ವಹಿಸಬೇಕು” ಎಂದು ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಹಿಳೆಯರು ಇರುವ ಬಸ್ ನಿಲ್ದಾಣ/ಬಸ್ ನಿಲುಗಡೆ ಸ್ಥಳಗಳಲ್ಲಿ ಬಸ್‌ ನಿಲ್ಲಿಸದೇ ಇರುವುದು ಅಥವಾ ಮಹಿಳಾ ಪ್ರಯಾಣಿಕರಿಗೆ ಉಚಿತವಾಗಿ ಪ್ರಯಾಣಿಸುವ ಕುರಿತು ಅಪಹಾಸ್ಯ ಮಾಡುವುದು, ಇನ್ನಿತರೆ ರೀತಿಯಲ್ಲಿ ಮಹಿಳೆಯರೊಂದಿಗೆ ಅಗೌರವದಿಂದ ನಡೆದುಕೊಳ್ಳುತ್ತಿರುವ ಪ್ರಕರಣಗಳ ಘಟನೆಗಳು ಬೆಳಕಿಗೆ ಬಂದಿವೆ. ಈ ರೀತಿ ಘಟನೆಗಳು ಮತ್ತೆ ಮರುಕಳಿಸಬಾರದು. ಒಂದು ವೇಳೆ ಅನುಚಿತವಾಗಿ ಮಹಿಳೆಯರೊಂದಿಗೆ ವರ್ತಿಸುವುದು ಅಪಹಾಸ್ಯ ಮಾಡುತ್ತಿರುವ ಬಗ್ಗೆ ದೂರು ಬಂದರೆ ಅಂತಹ ವ್ಯಕ್ತಿಗಳ ವಿರುದ್ಧ ಗಂಭೀರ ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದೆ.

“ಮಹಿಳೆಯರಿಗೆ ವಿತರಿಸುವ ಟಿಕೇಟ್ ಮೊತ್ತವನ್ನು ಸಾರಿಗೆ ಆದಾಯವೆಂದು ಪರಿಗಣಿಸಲಾಗುತ್ತಿದೆ. ಈ ಹಿನ್ನೆಲೆ, ನಿಗಮದ ಚಾಲಕ ಮತ್ತು ನಿರ್ವಾಹಕರುಗಳು ನಿಗದಿತ ಎಲ್ಲ ಬಸ್ ನಿಲ್ದಾಣ/ಬಸ್ ನಿಲುಗಡೆ ಸ್ಥಳಗಳಲ್ಲಿ ನಿಲುಗಡೆ ನೀಡಿ, ಪ್ರಯಾಣಿಕರನ್ನು ವಿಶೇಷವಾಗಿ ಮಹಿಳೆಯರು/ವಿದ್ಯಾರ್ಥಿಗಳನ್ನು ಹತ್ತಿಸಿ/ಇಳಿಸಬೇಕು” ಎಂದು ತಿಳಿಸಿದೆ.

“ಚಾಲನಾ ಸಿಬ್ಬಂದಿಗಳು ಶಕ್ತಿ ಯೋಜನೆಯ ಪರಿಣಾಮಕಾರಿ ಯಶಸ್ವಿ ಅನುಷ್ಠಾನಕ್ಕೆ ಸಹಕರಿಸುವ ಆಶಯವನ್ನು ನಿಗಮವು ಹೊಂದಿದೆ” ಎಂದಿದೆ.

ಈ ಸುದ್ದಿ ಓದಿದ್ದೀರಾ? ಮೆಟ್ರೋ ಪಿಲ್ಲರ್ ಕುಸಿದು ಸಾವು; ಐದು ತಿಂಗಳ ಬಳಿಕ ಚಾರ್ಜ್‌ಶೀಟ್ ಸಲ್ಲಿಸಿದ ಪೊಲೀಸರು

ಟಿಕೆಟ್ ಇಲ್ಲದೆ ಪ್ರಯಾಣಿಸಿದ 3636 ಪ್ರಯಾಣಿಕರಿಗೆ ದಂಡ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ತನಿಖಾ ತಂಡಗಳಿಂದ 2023ರ ಮೇ ತಿಂಗಳಿನಲ್ಲಿ ನಿಗಮದ ವ್ಯಾಪ್ತಿಯಲ್ಲಿ ಸಂಚರಿಸುವ 44,052 ವಾಹನಗಳನ್ನು ತಪಾಸಣೆ ಮಾಡಲಾಗಿದೆ. ಈ ವೇಳೆ, 3266 ಪ್ರಕರಣಗಳನ್ನು ಪತ್ತೆಹಚ್ಚಿ, 3636 ಟಿಕೇಟ್ ರಹಿತ ಪ್ರಯಾಣಿಕರಿಂದ ₹5,89,453 ದಂಡ ವಸೂಲಿ ಮಾಡಲಾಗಿದೆ ಎಂದು ಹೇಳಿದೆ.

ನಿಗಮದ ಆದಾಯದಲ್ಲಿ ಸೋರಿಕೆ ಆಗುತ್ತಿದ್ದ ₹73,859 ಅನ್ನು ತನಿಖಾಧಿಕಾರಿಗಳು ಪತ್ತೆಹಚ್ಚಿದ್ದಾರೆ. ತಪ್ಪಿತಸ್ಥರ ವಿರುದ್ಧ ಇಲಾಖಾ ರೀತ್ಯಾ ಸೂಕ್ತ ಶಿಸ್ತಿನ ಕ್ರಮ ಜರುಗಿಸಲಾಗಿದೆ ಎಂದು ತಿಳಿಸಿದೆ.

ಪ್ರಯಾಣಿಕರು ಬಸ್‌ನಲ್ಲಿ ಪ್ರಯಾಣಿಸುವಾಗ ಸರಿಯಾದ ಟಿಕೇಟ್/ ಪಾಸ್ ಪಡೆದು ಪ್ರಯಾಣ ಮಾಡುವಂತೆ, ನಿಗಮವು ಪ್ರಯಾಣಿಕರಲ್ಲಿ ಮನವಿ ಮಾಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...