ಅಪಘಾತದಲ್ಲಿ ಮೃತಪಟ್ಟ ಚಾಲನಾ ಸಿಬ್ಬಂದಿ ಅವಲಂಬಿತರಿಗೆ ₹1 ಕೋಟಿ ಅಪಘಾತ ವಿಮೆ ವಿತರಣೆ

Date:

  • ದೇಶದಲ್ಲಿಯೇ ಪ್ರಪ್ರಥಮವಾಗಿ ಕಾರ್ಮಿಕ ಕಲ್ಯಾಣ ಯೋಜನೆ ಅಡಿಯಲ್ಲಿ ಅಪಘಾತ ವಿಮೆ
  • ಸ್ಟೇಟ್‌ ಬ್ಯಾಂಕ್ ಆಫ್ ಇಂಡಿಯಾ ವತಿಯಿಂದ ಪ್ರಿಮಿಯಂ ರಹಿತ ₹50 ಲಕ್ಷ ವಿಮೆ

ಅಪಘಾತದಲ್ಲಿ ಮೃತಪಟ್ಟ ಚಾಲನಾ ಸಿಬ್ಬಂದಿ ಎರಡು ಕುಟುಂಬದ ಅವಲಂಬಿತರಿಗೆ ತಲಾ ₹1 ಕೋಟಿ ಅಪಘಾತ ಪರಿಹಾರದ ಚೆಕ್ ವಿತರಣೆಯನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ನೀಡಿದರು.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ)ದ ಕೇಂದ್ರ ಕಚೇರಿಯಲ್ಲಿ ಸಿಬ್ಬಂದಿ ಹಾಗೂ ಅವರ ಅವಲಂಬಿತರ ಕಲ್ಯಾಣಕ್ಕಾಗಿ ಜಾರಿಗೊಳಿಸಿರುವ ಯೋಜನೆಯಡಿ ₹1 ಕೋಟಿ ಅಪಘಾತ ಪರಿಹಾರ ವಿಮೆ ಚೆಕ್‌ ನೀಡುವ ಕಾರ್ಯಕ್ರಮವನ್ನು ಶನಿವಾರ ನಡೆಸಲಾಯಿತು.

ಈ ಯೋಜನೆಯಡಿಯಲ್ಲಿ ಸಿಬ್ಬಂದಿಗಳು ಕರ್ತವ್ಯದ ಮೇಲಿದ್ದಾಗ ಹಾಗೂ ಕರ್ತವ್ಯದಲ್ಲಿ ಇಲ್ಲದ ಸಂದರ್ಭಗಳಲ್ಲಿಯೂ ಉಂಟಾಗುವ ಅಪಘಾತಗಳಿಗೂ ಸಹ ಈ ವಿಮಾ ಸೌಲಭ್ಯ ಅನ್ವಯಿಸುತ್ತದೆ. ದೇಶದಲ್ಲಿಯೇ ಪ್ರಪ್ರಥಮವಾಗಿ ಕಾರ್ಮಿಕ ಕಲ್ಯಾಣ ವಿನೂತನ ಯೋಜನೆ ಅಡಿಯಲ್ಲಿ ಕೆಎಸ್‌ಆರ್‌ಟಿಸಿ ಅಪಘಾತವಾದ ತನ್ನ ಸಿಬ್ಬಂದಿಗೆ ₹1 ಕೋಟಿ ಮೊತ್ತದ ಅಪಘಾತ ವಿಮೆಯನ್ನು ಜಾರಿಗೊಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೆಎಸ್‌ಆರ್‌ಟಿಸಿ ಜಾರಿಗೊಳಿಸಿದ ಈ ಯೋಜನೆಯಲ್ಲಿ ಸ್ಟೇಟ್‌ ಬ್ಯಾಂಕ್ ಆಫ್ ಇಂಡಿಯಾ ವತಿಯಿಂದ ಪ್ರಿಮಿಯಂ ರಹಿತ ₹50 ಲಕ್ಷ ವಿಮೆ ಹಾಗೂ ಯುನೈಟೆಡ್ ಇಂಡಿಯಾ ಇನ್ಸೂರೆನ್ಸ್‌ ಅವರಿಂದ ವಾರ್ಷಿಕ ₹885 ಪ್ರಿಮಿಯಂ (ನೌಕರರಿಂದ) ಪಾವತಿಯ ಮೇರೆಗೆ ₹50 ಲಕ್ಷಗಳ ವಿಮೆ ಒಳಗೊಂಡಿರುತ್ತದೆ.

ಕೆಎಸ್‌ಆರ್‌ಟಿಸಿ ವಿಮೆ ಯೋಜನೆ ಜಾರಿಗೊಳಿಸಿದ ನಂತರ ಚಾಲನಾ ಹಾಗೂ ನಿರ್ವಾಹಕ ಸಿಬ್ಬಂದಿ ಜಿ ವಿ ಛಲಪತಿ(41) ನಿಗಮದಲ್ಲಿ 11 ವರ್ಷ ಸೇವೆ ಸಲ್ಲಿಸಿದ್ದಾರೆ. 2023ರ ಜನವರಿ 29ರಂದು ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಲಾರಿ ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿದೆ. ಈ ವೇಳೆ ಛಲಪತಿ ಎಂಬುವವರು ಮೃತಪಟ್ಟಿದ್ದಾರೆ. ಹೆಂಡತಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಇವರಿಗೆ ವಿಮಾ ಪರಿಹಾರದ ₹1 ಕೋಟಿ ಜತೆಗೆ ನಿಗಮದ ವತಿಯಿಂದ ₹17.21 ಲಕ್ಷ ಪರಿಹಾರವನ್ನು ಪಡೆಯಲು ಅರ್ಹರಾಗಿರುತ್ತಾರೆ. ಈ ಪೈಕಿ ₹12.71 ಲಕ್ಷ ಪರಿಹಾರವನ್ನು ನಿಗಮ ನೀಡಿದೆ. ಬಾಕಿ ಉಳಿದ ₹4.50 ಮೊತ್ತವನ್ನು ಮೃತ ಅವಲಂಬಿತರು ಸೂಕ್ತ ದಾಖಲೆ ಸಲ್ಲಿಸಿದೊಡನೆ ಭವಿಷ್ಯ ನಿಧಿ ಇಲಾಖೆಯಿಂದ ಶೀಘ್ರದಲ್ಲಿ ಪಾವತಿಯಾಗಲಿದೆ ಎಂದು ನಿಗಮ ಹೇಳಿದೆ.

ನಿಗಮದ ಮತ್ತೋರ್ವ ಚಾಲಕ ಹಾಗೂ ನಿರ್ವಾಹಕ ಪಿ ಎನ್‌ ನಾಗರಾಜು(52) ಎಂಬುವವರು ನಿಗಮದಲ್ಲಿ 17 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. 2023ರ ಫೆಬ್ರುವರಿ 1ರಂದು ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ನಾಗರಾಜು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇವರು ಹೆಂಡತಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

“ವಿಮಾ ಪರಿಹಾರ ₹1 ಕೋಟಿ ಹೊರತುಪಡಿಸಿ, ನಿಗಮದ ವತಿಯಿಂದ ₹21.94 ಲಕ್ಷ ಪರಿಹಾರಕ್ಕೆ ದೊರೆತಿದೆ. ಈ ಪೈಕಿ ₹16.19 ಲಕ್ಷ ಪರಿಹಾರವನ್ನು ನಿಗಮ ಈಗಾಗಲೇ ನೀಡಿದ್ದು, ಉಳಿದ ₹5.75 ಲಕ್ಷ ಬಾಕಿ ಮೊತ್ತವನ್ನು ಮೃತರ ಅವಲಂಬಿತರು ಸೂಕ್ತ ದಾಖಲಾತಿ ಸಲ್ಲಿಸಿದೊಡನೆ ಭವಿಷ್ಯ ನಿಧಿ ಇಲಾಖೆಯಿಂದ‌ ಶೀಘ್ರದಲ್ಲಿಯೇ ಪಾವತಿಯಾಗಲಿದೆ” ಎಂದು ತಿಳಿಸಿದೆ.   

“ಮೃತಪಟ್ಟ ಚಾಲನಾ ಸಿಬ್ಬಂದಿ ಮರಳಿ ತರಲು ಸಾಧ್ಯವಿಲ್ಲ.  ಆದರೆ, ಅವರ ಕುಟುಂಬಗಳ ಸುಭದ್ರತೆಗಾಗಿ ನಿಗಮವು ಜಾರಿಗೊಳಿಸಿರುವ ಈ ಅಪಘಾತ ಪರಿಹಾರ ವಿಮಾ ಯೋಜನೆಯು ಬಹಳ ಉತ್ತಮವಾಗಿದೆ. ಈ ಯೋಜನೆಯನ್ನು ಸದ್ಯದಲ್ಲಿಯೇ ಇತರೆ ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ಜಾರಿಗೊಳಿಸಲು ಕೂಡಲೇ ಕ್ರಮ ಜರುಗಿಸಲಾಗುವುದು” ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

ಈ ಸುದ್ದಿ ಓದಿದ್ದೀರಾ? ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆಹಾರ ನಿರೀಕ್ಷಕನನ್ನು 15 ಕಿ.ಮೀ ಬೆನ್ನತ್ತಿ ಬಂಧಿಸಿದ ಲೋಕಾಯುಕ್ತ ಪೊಲೀಸರು

“ಕುಟುಂಬದವರು ಹಣವನ್ನು‌ ಬ್ಯಾಂಕಿನಲ್ಲಿ ಸ್ಥಿರ ಠೇವಣಿ ಇಟ್ಟು ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಹಾಗೂ ತಮ್ಮ ಮುಂದಿನ ಜೀವನಕ್ಕಾಗಿ ಕಾಪಾಡಿಕೊಳ್ಳಬೇಕು. ಅನುಕಂಪ‌‌ ಆಧಾರದ‌ ಮೇಲಿನ‌ ಕೆಲಸಕ್ಕೆ ಅರ್ಜಿ ಸಲ್ಲಿಸಲು ತಿಳಿಸಿದರು. ನಿಗಮದ ಸಿಬ್ಬಂದಿಗಳ ಹಾಗೂ ಕುಟುಂಬದವರ ಹಿತಾಸಕ್ತಿ ಕಾಪಾಡಲು ನಾವು ನಿಮ್ಮೊಡನೆ  ಸದಾ ಇರುತ್ತೇವೆ” ಎಂದು ತಿಳಿಸಿದರು.

“ಸಚಿವರು ಆದೇಶಿಸಿರುವಂತೆ ಕೂಡಲೇ ಅನುಕಂಪ ಆಧಾರದ ಮೇಲೆ ಕೆಲಸ ನೀಡಲು ಕ್ರಮ ಕೈಗೊಳ್ಳಲಾಗುವುದು” ಎಂದು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ ಅನ್ಬುಕುಮಾರ್ ತಿಳಿಸಿದರು

ಈ ಕಾರ್ಯಕ್ರಮದಲ್ಲಿ ಎಸ್‌ಬಿಐ ಬ್ಯಾಂಕಿನ ವ್ಯವಸ್ಥಾಪಕರು ಹಾಗೂ ಕಾರ್ಮಿಕ ಸಂಘಟನೆಗಳ ಮುಖಂಡರುಗಳಾದ ಹೆಚ್.ವಿ. ಅನಂತ ಸುಬ್ಬರಾವ್, ಬಿ. ಜಯದೇವರಾಜೇ ಅರಸು, ಜಿ.ಎಸ್. ಮಹದೇವಯ್ಯ, ಹೆಚ್.ಡಿ. ರೇವಪ್ಪ, ಎಸ್. ನಾಗರಾಜ ಮತ್ತು ಇತರರು ಹಾಗೂ ನಿಗಮದ ಸಿಬ್ಬಂದಿ ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...