ಬೆಂಗಳೂರು ಟರ್ಫ್ ಕ್ಲಬ್‌ನಲ್ಲಿ ರೇಸ್, ಬೆಟ್ಟಿಂಗ್ ಚಟುವಟಿಕೆಗೆ ಹೈಕೋರ್ಟ್ ನಿಷೇಧ

Date:

ಬೆಂಗಳೂರು ಟರ್ಫ್‌ ಕ್ಲಬ್‌ನಲ್ಲಿ(ಬಿಟಿಸಿ) ಆನ್‌ ಕೋರ್ಸ್‌, ಆಫ್‌ ಕೋರ್ಸ್‌ ರೇಸ್‌ ಹಾಗೂ ಬೆಟ್ಟಿಂಗ್‌ ಚಟುವಟಿಕೆಗಳಿಗೆ ಕರ್ನಾಟಕ ಹೈಕೋರ್ಟ್‌ನ ವಿಭಾಗೀಯ ಪೀಠ ನಿಷೇಧ ಹೊರಡಿಸಿದೆ.

ಬಿಟಿಸಿಯಲ್ಲಿ ರೇಸಿಂಗ್‌ ಹಾಗೂ ಬೆಟ್ಟಿಂಗ್‌ ಚಟುವಟಿಕೆಗಳನ್ನು ನಿಷೇಧಿಸಿದ್ದ ರಾಜ್ಯ ಸರ್ಕಾರದ ಆದೇಶವನ್ನು ಹೈಕೋರ್ಟ್‌ನ ಏಕಸದಸ್ಯ ಪೀಠ ರದ್ದುಗೊಳಿಸಿತ್ತು. ಮುಖ್ಯ ನ್ಯಾಯಮೂರ್ತಿ ಎನ್‌ ವಿ ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ ವಿ ಅರವಿಂದ್‌ ಅವರಿದ್ದ ವಿಭಾಗೀಯ ಪೀಠ ಏಕ ಸದಸ್ಯತ್ವ ಪೀಠದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ರಾಜ್ಯ ಸರ್ಕಾರದ ಅರ್ಜಿಯನ್ನು ಪರಿಗಣಿಸಿ ಆದೇಶ ನೀಡಿದೆ.

ಬಿಟಿಸಿಯಲ್ಲಿ ಪರವಾನಗಿ ನಿಯಂತ್ರಣಗಳು, ಅರ್ಜಿಯ ಸ್ಥಿತಿಗತಿಗಳು ಹಾಗೂ ನಿಯಮಗಳನ್ನು ಗಂಭೀರವಾಗಿ ಉಲ್ಲಂಘಿಸಲಾಗಿದೆ ಎಂದು ರಾಜ್ಯ ಸರ್ಕಾರ ಜೂನ್‌ 6ರಂದು ಹೊರಡಿಸಿದ ಆದೇಶದಲ್ಲಿ ದಾಖಲಿಸಿತ್ತು. ಸಿಸಿಬಿ ತನಿಖೆ ಕೂಡ ಬಾಕಿಯುಳಿದಿದ್ದು, ಸಕ್ಷಮ ತೆರಿಗೆ ಪ್ರಾಧಿಕಾರ ಕೂಡ ತೆರಿಗೆ ವಂಚನೆ ಸೇರಿದಂತೆ ಹಲವು ಅಕ್ರಮಗಳು ಬಾಕಿಯುಳಿದಿವೆ ಎಂದು ತಿಳಿಸಿರುವುದನ್ನು ರಾಜ್ಯ ಸರ್ಕಾರ ತನ್ನ ಆದೇಶದಲ್ಲಿ ತಿಳಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಳಪೆ ಫಲಿತಾಂಶಕ್ಕೆ ಸಿ ಎಂ ಸಿಟ್ಟಾದರೆ ಸಾಲದು, ಶಿಕ್ಷಣ ಇಲಾಖೆಗೆ ಬಿಸಿ ಮುಟ್ಟಿಸಬೇಕು

ಕರ್ನಾಟಕ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಬಿಟಿಸಿ, ಕರ್ನಾಟಕ ರೇಸ್‌ ಕುದುರೆಗಳ ಮಾಲೀಕರ ಸಂಘ, ಕರ್ನಾಟಕ ತರಬೇತಿದಾರರ ಸಂಘ, ಪಂಟರ್‍‌ಗಳು ಹಾಗೂ ಜಾಕಿಗಳ ಸಂಘ ಪರವಾನಗಿ ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದವು.

ಅರ್ಜಿಗಳ ವಿಚಾರಣೆ ನಡೆಸಿದ ಹೈಕೋರ್ಟ್‌ ನ್ಯಾಯಮೂರ್ತಿ ಕೃಷ್ಣಕುಮಾರ್ ಅವರ ಏಕಸದಸ್ಯ ಪೀಠದಿಂದ, 2024ರ ಮಾರ್ಚ್‌ ತಿಂಗಳಲ್ಲಿ ಆನ್‌ ಕೋರ್ಸ್‌ ಮತ್ತು ಆಫ್‌ ಕೋರ್ಸ್‌ ಕುದುರೆ ಪಂದ್ಯ ಮತ್ತು ಬೆಟ್ಟಿಂಗ್‌ ಚಟುವಟಿಕೆಗಳನ್ನು ನಡೆಸಲು ಸರ್ಕಾರ ನೀಡಿದ್ದ ಪರವಾನಗಿಯ ಷರತ್ತಿನಂತೆ ಕುದುರೆ ರೇಸ್ ಆಯೋಜಿಸಬಹುದು ಎಂದು ಮಧ್ಯಂತರ ಆದೇಶ ನೀಡಿದ್ದರು. ಇದರ ಬೆನ್ನಲ್ಲಿಯೇ ಈಗ ಕುದುರೆ ರೇಸ್ ಆಯೋಜನೆಗೆ ತಡೆಯೊಡ್ಡಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...